AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿ ಪುತ್ರ, ಪಿಎಯಿಂದ ಕಾನ್ಸ್ಟೇಬಲ್ ಮೇಲೆ ಹಲ್ಲೆ; ಸಹಿ ಆಂದೋಲನ ಶುರು ಮಾಡಿದ ಕಾನ್ಸ್ಟೇಬಲ್​ಗಳು

ರಾಯಚೂರು ಜಿಲ್ಲೆ ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮಾ ನಾಯಕ್​ರ ಪುತ್ರ ಸಂತೋಷ್ ಹಾಗೂ ಅವರ ಪಿಎ ಇಲಿಯಾಸ್ ಸೇರಿ ಎಂಟು ಜನ ದೇವದುರ್ಗ ಠಾಣೆ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ರು. ಈ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯ ವರೆಗೂ ಶಾಸಕಿ ಪುತ್ರನ ಬಂಧನವಾಗಿಲ್ಲ. ಸದ್ಯ ಪೊಲೀಸ್ ಸಿಬ್ಬಂದಿ ಸಹಿ ಆಂದೋಲನ ಹಮ್ಮಿಕೊಂಡಿದ್ದಾರೆ.

ಶಾಸಕಿ ಪುತ್ರ, ಪಿಎಯಿಂದ ಕಾನ್ಸ್ಟೇಬಲ್ ಮೇಲೆ ಹಲ್ಲೆ; ಸಹಿ ಆಂದೋಲನ ಶುರು ಮಾಡಿದ ಕಾನ್ಸ್ಟೇಬಲ್​ಗಳು
ದೇವದುರ್ಗ ಪೊಲೀಸ್ ಠಾಣೆ
ಭೀಮೇಶ್​​ ಪೂಜಾರ್
| Edited By: ಆಯೇಷಾ ಬಾನು|

Updated on: Feb 15, 2024 | 9:39 AM

Share

ರಾಯಚೂರು, ಫೆ.15: ಶಾಸಕಿ ಪುತ್ರ, ಪಿಎ ಇಬ್ಬರೂ ಸೇರಿಕೊಂಡು ಪೊಲೀಸ್ ಕಾನ್ಸ್ಟೇಬಲ್ (Police Constable) ಮೇಲೆ ಹಲ್ಲೆ (Assault) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯ ವರೆಗೂ ಶಾಸಕಿ ಪುತ್ರನ ಬಂಧನವಾಗಿಲ್ಲ. ಹಾಗೂ ಕೆಲ ಸಿಬ್ಬಂದಿ ವರ್ಗಾವಣೆಗೊಳಿಸುವಂತೆ ಶಾಸಕಿ ಕರೆಮ್ಮಾ ಬೇಡಿಕೆ ಇಟ್ಟ ವಿಚಾರ ಸಂಬಂಧ ಇಲಾಖೆ ವಿರುದ್ಧವೇ ಬೇಸರ ವ್ಯಕ್ತಪಡಿಸಿ ಪೊಲೀಸ್ ಸಿಬ್ಬಂದಿ ಸಹಿ ಆಂದೋಲನ ಹಮ್ಮಿಕೊಂಡಿದ್ದಾರೆ. ತಮಗೂ, ತಮ್ಮ ಕುಟುಂಬಕ್ಕೂ ರಕ್ಷಣೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ದೇವದುರ್ಗ ಎಲ್ ಆ್ಯಂಡ್ ಓ ಹಾಗೂ ಟ್ರಾಫಿಕ್ ಠಾಣೆ ಎಲ್ಲಾ ಪೊಲೀಸ್ ಕಾನ್ಸ್ಟೇಬಲ್​ಗಳು ಸಹಿ ಆಂದೋಲನ ಮಾಡುತ್ತಿದ್ದಾರೆ. ಘಟನೆ ನಡೆದು ಹಲವು ದಿನಗಳೇ ಕಳೆದರೂ ರಾಜಕೀಯ ಒತ್ತಡಕ್ಕೆ ಶಾಸಕಿ‌ ಪುತ್ರ ಸಂತೋಷ್ ಬಂಧಿಸದೇ ಇರೋದಕ್ಕೆ ಕಿಡಿಕಾರಿದ್ದಾರೆ. ಎಲ್ ಆ್ಯಂಡ್ ಓ ಠಾಣೆಯ 36 ಹಾಗೂ ಟ್ರಾಫಿಕ್ ಠಾಣೆಯ 23 ಪೊಲೀಸ್ ಕಾನ್ಸ್ಟೇಬಲ್​ಗಳು ಸೇರಿ‌ 59 ಸಿಬ್ಬಂದಿಯಿಂದ ಎಸ್​ಪಿಗೆ ದೂರು ನೀಡಲಾಗಿದೆ.

ಶಾಸಕಿ ಮಗನ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಪ್ರತಿಭಟನೆ ನಡೆಸಿ, ಕೆಲ ಪೊಲೀಸ್ ಸಿಬ್ಬಂದಿ ವರ್ಗಾಯಿಸುವಂತೆ ದೇವದುರ್ಗ ಶಾಸಕಿ ಕರೆಮ್ಮಾ ನಾಯಕ್ ಷರತ್ತು ವಿಧಿಸಿದ್ದರು. ಈ ಹಿನ್ನೆಲೆ ಯಾರೋ ಓರ್ವ ಸಿಬ್ಬಂದಿ ವಿರುದ್ಧ ಕ್ರಮವಾದರೂ, ದೇವದುರ್ಗ ಠಾಣೆಯ ಉಳಿದ ಎಲ್ಲಾ ಸಿಬ್ಬಂದಿಯನ್ನು ವರ್ಗಾಯಿಸಬೇಕು ಅಂತ ಪಟ್ಟು ಹಿಡಿದಿದ್ದರು. ಮತ್ತೊಂದೆಡೆ ಪೊಲೀಸ್ ಕಾಲೋನಿ ಬಳಿ ಶಾಸಕಿ ನಿವಾಸ ಹಾಗೂ ಜೆಡಿಎಸ್ ಕಚೇರಿ ಇರೋದ್ರಿಂದ ಕುಟುಂಬಸ್ಥರಿಗೆ ನಿತ್ಯ ಕಿರಿಕಿರಿಯಾಗುತ್ತಿರುವ ಆರೋಪ ಕೇಳಿ ಬಂದಿದೆ. ಇದಲ್ಲದೇ ಶಾಸಕಿ ಬೆಂಬಲಿಗರು ಪೊಲೀಸ್ ಕಾಲೋನಿಯಲ್ಲೇ ಓಡಾಡುತ್ತಾ, ಕಾಲೋನಿ ಬಳಿಯೇ ಮೂತ್ರವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಮುಜುಗರವಾಗುತ್ತಿದೆ ಎಂದು ಎಸ್ಪಿಗೆ ನೀಡಲಾದ ದೂರಿನಲ್ಲಿ ಉಲ್ಲೀಖಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಹನಿ ನೀರಿಗೂ ಹಾಹಾಕಾರ; ಶಾಲೆ ಬಿಟ್ಟು ನೀರಿಗಾಗಿ ಓಡುತ್ತಿರುವ ಮಕ್ಕಳು

ಅಕ್ರಮ ಮರಳುಗಾರಿಕೆ ಪ್ರಕರಣ ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡಿದೆ. ರಾಯಚೂರು ಜಿಲ್ಲೆ ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮಾ ನಾಯಕ್​ರ ಪುತ್ರ ಸಂತೋಷ್ ಹಾಗೂ ಅವರ ಪಿಎ ಇಲಿಯಾಸ್ ಸೇರಿ ಎಂಟು ಜನ ದೇವದುರ್ಗ ಠಾಣೆ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ರು. ಈ ಬಗ್ಗೆ ಹಲ್ಲೆಗೊಳಗಾದ ಕಾನ್ಸ್ಟೇಬಲ್ ಹನಮಂತರಾಯ ಕೃತ್ಯದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ಅಕ್ರಮ ಮರಳುಗಾರಿಕೆ ಟ್ರಾಕ್ಟರ್ ವಶಕ್ಕೆ ಪಡೆದ ವಿಚಾರವಾಗಿ ಶಾಸಕಿ ಪುತ್ರ ಐಬಿಗೆ ಕರೆಸಿಕೊಂಡು ಕೂಡಿ ಹಾಕಿ ಹಲ್ಲೆ ನಡೆಸಿರೊ ಬಗ್ಗೆ ಕಾಕಾನ್ಸ್ಟೇಬಲ್ ಹನಮಂತರಾಯ ಆರೋಪಿಸಿದ್ರು. ಶಾಸಕಿ ಪುತ್ರನ ದರ್ಪದ ವಿರುದ್ಧ ನಿನ್ನೆ ಕಾಂಗ್ರೆಸ್ ಮಹಿಳಾ ಘಟಕ ಕೆರಳಿತ್ತು. ಕನ್ನಡ ಪರ ಸಂಘಟನೆಗಳು ಶಾಸಕಿ ಪುತ್ರ ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಶಾಸಕಿ ಪುತ್ರ ಸಂತೋಷ್ ವಿರುದ್ಧ ರೌಡಿ ಶೀಟ್ ಓಪನ್ ಮಾಡಿ ಗಡಿ ಮಾಡಬೇಕು ಅಂತ ಕರವೇ ಆಗ್ರಹಿಸಿದೆ. ಈ ಬಗ್ಗೆ ವಿವಿಧ ಸಂಘಟನೆಗಳ ಪ್ರಮುಖರು ನಗರದ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು