AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಬರ್​​, ಓಲಾ ಆಟೋಗಳಿಗೆ ಅನುಮತಿ ನೀಡಿಲ್ಲ: ಸಾರಿಗೆ ಸಚಿವ ಬಿ ಶ್ರೀರಾಮುಲು

ಊಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ವಿಚಾರವಾಗಿ ಊಬರ್​​, ಓಲಾ ಕಂಪನಿಯವರನ್ನು ಕರೆದು ಸಭೆ ಮಾಡುತ್ತೇವೆ ಎಂದು ಮಂತ್ರಾಲಯದಲ್ಲಿ ಸಾರಿಗೆ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.

ಊಬರ್​​, ಓಲಾ ಆಟೋಗಳಿಗೆ ಅನುಮತಿ ನೀಡಿಲ್ಲ: ಸಾರಿಗೆ ಸಚಿವ ಬಿ ಶ್ರೀರಾಮುಲು
ಸಚಿವ ಬಿ ಶ್ರೀರಾಮುಲು
TV9 Web
| Edited By: |

Updated on:Oct 11, 2022 | 8:54 PM

Share

ರಾಯಚೂರು: ಊಬರ್ (Uber) , ಓಲಾ (Ola) ಆಟೋಗಳಿಂದ ಹೆಚ್ಚು ಹಣ ವಸೂಲಿ ವಿಚಾರವಾಗಿ ಊಬರ್​​, ಓಲಾ ಕಂಪನಿಯವರನ್ನು ಕರೆದು ಸಭೆ ಮಾಡುತ್ತೇವೆ. ತಪ್ಪು ಇದ್ದರೆ ಸರಿ ಮಾಡಿಕೊಳ್ಳಲು ಸೂಚನೆ ನೀಡುತ್ತೇವೆ. ಊಬರ್​​, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ  ಎಂದು ಮಂತ್ರಾಲಯದಲ್ಲಿ ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಹೇಳಿದ್ದಾರೆ.  ಊಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ಬಗ್ಗೆ ದೂರು ಬಂದಿವೆ. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಸಾಮಾನ್ಯ ಆಟೋಗಳ ಮಾದರಿಯಲ್ಲೇ ಹಣ ಪಡೆಯಬೇಕು. ಇದು ಮತ್ತೆ ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಓಲಾ, ಊಬರ್​ ಆಟೋ ಚಾಲಕರು  ಒಂದು ಕಿಮೀಗೆ 300, 400, 500 ರೂ, ಎರಡು ಕಿಮೀ ಗೆ 700 ರೂ. ಬಾಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಓಲಾ, ಊಬರ್ ಅಸೊಶಿಯೇಶನ್ ನಲ್ಲಿದ್ದೋರು, ಅದರಲ್ಲಿ ಎಂಪ್ಲಾಯ್ಮೆಂಟ್ ಆದೋರು ಬೇರೆ.  ಸಾಮಾನ್ಯ ಆಟೋಗಳಲ್ಲಿ ಸಮಸ್ಯೆಯಿಲ್ಲ, ಆದರೆ ಓಲಾ, ಊಬರ್ ಆಟೋಗಳದ್ದು ಮಾತ್ರ ಸಮಸ್ಯೆ ಇದೆ ಎಂದರು.

ಕಾರ್ ಪರ್ಷಿಷನ್ ತಗೊಂಡು, ಆಟೋ ಹೇಗೆ ಓಡಿಸುತ್ತಿದ್ದಾರೆ. ಓಲಾ, ಊಬರ್ ಸಂಸ್ಥೆಗಳು ಕಾರ್ ಮಾತ್ರ ಓಡಾಡಿಸಬೇಕು. ಆಟೋ ಓಡಿಸಿ ಹೆಚ್ಚಿನ ದರ ಒಪ್ಪಲ್ಲ. ಮಾಮೂಲು ಆಟೋಗಳಂತೆ‌ ಚಾರ್ಜ್ ಮಾಡಬೇಕು. ಏರ್ಪೋರ್ಟ್ ನಿಂದ ಸಿಟಿಗೆ ಹೋಗೊಕೆ 700 ರೂ ಬಾಡಿಗೆ ತೆಗೆದುಕೊಳ್ಳುತ್ತಾರೆ. ಓಲಾ, ಊಬರ್ ಆಟೋ ಬಂದ್ ಆದರೆ, ಸಾಮಾನ್ಯ ಆಟೋಗಳು ಬಂದ್ ಆಗುತ್ತವೆ ಅಂತ ಇತರೇ ಸಾಮಾನ್ಯ ಆಟೋದವರು ಅಂದುಕೊಂಡಿದ್ದಾರೆ. ಹಾಗೇನಿಲ್ಲ, ಕಡಿಮೆ ರೇಟ್ ನಲ್ಲಿ ಓಡಿಸಿ ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Tue, 11 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?