AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಬರ್​​, ಓಲಾ ಆಟೋಗಳಿಗೆ ಅನುಮತಿ ನೀಡಿಲ್ಲ: ಸಾರಿಗೆ ಸಚಿವ ಬಿ ಶ್ರೀರಾಮುಲು

ಊಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ವಿಚಾರವಾಗಿ ಊಬರ್​​, ಓಲಾ ಕಂಪನಿಯವರನ್ನು ಕರೆದು ಸಭೆ ಮಾಡುತ್ತೇವೆ ಎಂದು ಮಂತ್ರಾಲಯದಲ್ಲಿ ಸಾರಿಗೆ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.

ಊಬರ್​​, ಓಲಾ ಆಟೋಗಳಿಗೆ ಅನುಮತಿ ನೀಡಿಲ್ಲ: ಸಾರಿಗೆ ಸಚಿವ ಬಿ ಶ್ರೀರಾಮುಲು
ಸಚಿವ ಬಿ ಶ್ರೀರಾಮುಲು
TV9 Web
| Updated By: ವಿವೇಕ ಬಿರಾದಾರ|

Updated on:Oct 11, 2022 | 8:54 PM

Share

ರಾಯಚೂರು: ಊಬರ್ (Uber) , ಓಲಾ (Ola) ಆಟೋಗಳಿಂದ ಹೆಚ್ಚು ಹಣ ವಸೂಲಿ ವಿಚಾರವಾಗಿ ಊಬರ್​​, ಓಲಾ ಕಂಪನಿಯವರನ್ನು ಕರೆದು ಸಭೆ ಮಾಡುತ್ತೇವೆ. ತಪ್ಪು ಇದ್ದರೆ ಸರಿ ಮಾಡಿಕೊಳ್ಳಲು ಸೂಚನೆ ನೀಡುತ್ತೇವೆ. ಊಬರ್​​, ಓಲಾ ಆಟೋಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ ಕಾರ್-ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ  ಎಂದು ಮಂತ್ರಾಲಯದಲ್ಲಿ ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಹೇಳಿದ್ದಾರೆ.  ಊಬರ್​​, ಓಲಾ ಆಟೋಗಳಿಂದ ಹೆಚ್ಚು ಹಣ ವಸೂಲಿ ಬಗ್ಗೆ ದೂರು ಬಂದಿವೆ. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಸಾಮಾನ್ಯ ಆಟೋಗಳ ಮಾದರಿಯಲ್ಲೇ ಹಣ ಪಡೆಯಬೇಕು. ಇದು ಮತ್ತೆ ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಓಲಾ, ಊಬರ್​ ಆಟೋ ಚಾಲಕರು  ಒಂದು ಕಿಮೀಗೆ 300, 400, 500 ರೂ, ಎರಡು ಕಿಮೀ ಗೆ 700 ರೂ. ಬಾಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಓಲಾ, ಊಬರ್ ಅಸೊಶಿಯೇಶನ್ ನಲ್ಲಿದ್ದೋರು, ಅದರಲ್ಲಿ ಎಂಪ್ಲಾಯ್ಮೆಂಟ್ ಆದೋರು ಬೇರೆ.  ಸಾಮಾನ್ಯ ಆಟೋಗಳಲ್ಲಿ ಸಮಸ್ಯೆಯಿಲ್ಲ, ಆದರೆ ಓಲಾ, ಊಬರ್ ಆಟೋಗಳದ್ದು ಮಾತ್ರ ಸಮಸ್ಯೆ ಇದೆ ಎಂದರು.

ಕಾರ್ ಪರ್ಷಿಷನ್ ತಗೊಂಡು, ಆಟೋ ಹೇಗೆ ಓಡಿಸುತ್ತಿದ್ದಾರೆ. ಓಲಾ, ಊಬರ್ ಸಂಸ್ಥೆಗಳು ಕಾರ್ ಮಾತ್ರ ಓಡಾಡಿಸಬೇಕು. ಆಟೋ ಓಡಿಸಿ ಹೆಚ್ಚಿನ ದರ ಒಪ್ಪಲ್ಲ. ಮಾಮೂಲು ಆಟೋಗಳಂತೆ‌ ಚಾರ್ಜ್ ಮಾಡಬೇಕು. ಏರ್ಪೋರ್ಟ್ ನಿಂದ ಸಿಟಿಗೆ ಹೋಗೊಕೆ 700 ರೂ ಬಾಡಿಗೆ ತೆಗೆದುಕೊಳ್ಳುತ್ತಾರೆ. ಓಲಾ, ಊಬರ್ ಆಟೋ ಬಂದ್ ಆದರೆ, ಸಾಮಾನ್ಯ ಆಟೋಗಳು ಬಂದ್ ಆಗುತ್ತವೆ ಅಂತ ಇತರೇ ಸಾಮಾನ್ಯ ಆಟೋದವರು ಅಂದುಕೊಂಡಿದ್ದಾರೆ. ಹಾಗೇನಿಲ್ಲ, ಕಡಿಮೆ ರೇಟ್ ನಲ್ಲಿ ಓಡಿಸಿ ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Tue, 11 October 22

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?