AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಇಂದಿನಿಂದ ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ, ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಭಾಗಿ ಸಾಧ್ಯತೆ

ರಾಯಚೂರು ಜಿಲ್ಲೆಯಲ್ಲಿ ನಡೆಯಲಿರುವ ಯಾತ್ರೆಯ ವೇಳೆ ನಿತ್ಯ 10ರಿಂದ 20 ಸಾವಿರ ಕಾರ್ಯಕರ್ತರನ್ನು ಸೇರಿಸುವ ಗುರಿ ಇರಿಸಿಕೊಳ್ಳಲಾಗಿದೆ.

Bharat Jodo Yatra: ಇಂದಿನಿಂದ ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ, ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಭಾಗಿ ಸಾಧ್ಯತೆ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 21, 2022 | 7:26 AM

Share

ರಾಯಚೂರು: ರಾಹುಲ್ ಗಾಂಧಿ (Rahul Gandhi) ನಾಯಕತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ  ಪಾದಯಾತ್ರೆಯು (Bharat Jodo Yatra) ಇಂದಿನಿಂದ (ಅ 21) ಸಂಚರಿಸಲಿದೆ. ಒಟ್ಟು ಮೂರು ದಿನ, ಅಂದರೆ ಅ 23ರವರೆಗೆ ಜಿಲ್ಲೆಯ ವಿವಿಧೆಡೆ ಭಾರತ್ ಜೋಡೊ ಪಾದಯಾತ್ರೆಯ ಅಂಗವಾಗಿ ಕಾಂಗ್ರೆಸ್ ನಾಯಕರು ಸಂಚರಿಸಲಿದ್ದಾರೆ. ನಾಳೆ ಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಈ ಬಗ್ಗೆ ರಾಜ್ಯ ನಾಯಕರು ಈಗಾಗಲೇ ಈಗಾಗಲೇ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರು ನಿನ್ನೆ (ಅ 20) ರಾತ್ರಿ ಮಂತ್ರಾಲಯ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆದು, ಮಂತ್ರಾಲಯದಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಮಂತ್ರಾಲಯದಿಂದ ರಾಷ್ಟ್ರೀಯ ಹೆದ್ದಾರಿ 167ರ ಮೂಲಕ ಯಾತ್ರೆ ಆರಂಭವಾಗಿದೆ.

ತುಂಗಭದ್ರಾ ಸೇತುವೆಯ ಮೂಲಕ ಮುನ್ನಡೆಯಲಿರುವ ಯಾತ್ರೆಯು ಗಿಲ್ಲೆಸುಗೂರು, ಕೆರೆಬುದೂರು, ಯರಗೇರಾ, ರಾಯಚೂರು ನಗರ, ಶಕ್ತಿನಗರ ಮಾರ್ಗದಲ್ಲಿ ಮುನ್ನಡೆಯಲಿದೆ. ಈ ವೇಳೆ ರೈತರು, ಸ್ಥಳೀಯರ ಜೊತೆಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ನಾಳೆ (ಅ 22) ರಾಯಚೂರಿನ ಗ್ರಾಮೀಣ ಭಾಗದಿಂದ ನಗರಕ್ಕೆ ಯಾತ್ರೆ ತಲುಪಲಿದೆ. ರಾಯಚೂರು ಜಿಲ್ಲೆಯಲ್ಲಿ ನಡೆಯಲಿರುವ ಯಾತ್ರೆಯ ವೇಳೆ ನಿತ್ಯ 10ರಿಂದ 20 ಸಾವಿರ ಕಾರ್ಯಕರ್ತರನ್ನು ಸೇರಿಸುವ ಗುರಿ ಇರಿಸಿಕೊಳ್ಳಲಾಗಿದೆ. ಅ 23ರ ಬೆಳಿಗ್ಗೆ ರಾಯಚೂರಿನಿಂದ ಕೃಷ್ಣಾ ನದಿ ಸೇತುವೆ ಮಾರ್ಗವಾಗಿ ಯಾತ್ರೆಯು ತೆಲಂಗಾಣಕ್ಕೆ ತೆರಳಲಿದೆ.

ಬಿಗಿ ಬಂದೋಬಸ್ತ್

ರಾಹುಲ್ ಗಾಂಧಿ ಯಾತ್ರೆಗೆ ರಾಯಚೂರು ಜಿಲ್ಲಾ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಮೂರು ದಿನಗಳ ಯಾತ್ರೆಯ ಭದ್ರತೆಗೆ 2,000 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಒಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ,6 ಡಿಎಸ್​ಪಿ, 26 ಸರ್ಕಲ್ ಇನ್​ಸ್ಪೆಪೆಕ್ಟರ್, 73 ಪಿಎಸ್​ಐ, 173 ಎಎಸ್​ಐ, 1,408 ಕಾನ್​ಸ್ಟೆಬಲ್, 96 ಮಹಿಳಾ ಸಿಬ್ಬಂದಿ, 200 ಹೋಮ್ ಗಾರ್ಡ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪರ್ಯಾಯ ಮಾರ್ಗ

ಮಂತ್ರಾಲಯದ ರಾಷ್ಟ್ರೀಯ ಹೆದ್ದಾರಿ ಮೂಲಕವೇ ಭಾರತ್ ಜೋಡೊ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೆರಳಲಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬೆಳಿಗ್ಗೆ 5ರಿಂದ ರಾತ್ರಿ‌ 7 ಗಂಟೆಯವರೆಗೂ ಭಾರಿ ಸರಕು ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Published On - 7:26 am, Fri, 21 October 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?