AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಇಂದಿನಿಂದ ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ, ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಭಾಗಿ ಸಾಧ್ಯತೆ

ರಾಯಚೂರು ಜಿಲ್ಲೆಯಲ್ಲಿ ನಡೆಯಲಿರುವ ಯಾತ್ರೆಯ ವೇಳೆ ನಿತ್ಯ 10ರಿಂದ 20 ಸಾವಿರ ಕಾರ್ಯಕರ್ತರನ್ನು ಸೇರಿಸುವ ಗುರಿ ಇರಿಸಿಕೊಳ್ಳಲಾಗಿದೆ.

Bharat Jodo Yatra: ಇಂದಿನಿಂದ ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ, ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಭಾಗಿ ಸಾಧ್ಯತೆ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 21, 2022 | 7:26 AM

Share

ರಾಯಚೂರು: ರಾಹುಲ್ ಗಾಂಧಿ (Rahul Gandhi) ನಾಯಕತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ  ಪಾದಯಾತ್ರೆಯು (Bharat Jodo Yatra) ಇಂದಿನಿಂದ (ಅ 21) ಸಂಚರಿಸಲಿದೆ. ಒಟ್ಟು ಮೂರು ದಿನ, ಅಂದರೆ ಅ 23ರವರೆಗೆ ಜಿಲ್ಲೆಯ ವಿವಿಧೆಡೆ ಭಾರತ್ ಜೋಡೊ ಪಾದಯಾತ್ರೆಯ ಅಂಗವಾಗಿ ಕಾಂಗ್ರೆಸ್ ನಾಯಕರು ಸಂಚರಿಸಲಿದ್ದಾರೆ. ನಾಳೆ ಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಈ ಬಗ್ಗೆ ರಾಜ್ಯ ನಾಯಕರು ಈಗಾಗಲೇ ಈಗಾಗಲೇ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರು ನಿನ್ನೆ (ಅ 20) ರಾತ್ರಿ ಮಂತ್ರಾಲಯ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆದು, ಮಂತ್ರಾಲಯದಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಮಂತ್ರಾಲಯದಿಂದ ರಾಷ್ಟ್ರೀಯ ಹೆದ್ದಾರಿ 167ರ ಮೂಲಕ ಯಾತ್ರೆ ಆರಂಭವಾಗಿದೆ.

ತುಂಗಭದ್ರಾ ಸೇತುವೆಯ ಮೂಲಕ ಮುನ್ನಡೆಯಲಿರುವ ಯಾತ್ರೆಯು ಗಿಲ್ಲೆಸುಗೂರು, ಕೆರೆಬುದೂರು, ಯರಗೇರಾ, ರಾಯಚೂರು ನಗರ, ಶಕ್ತಿನಗರ ಮಾರ್ಗದಲ್ಲಿ ಮುನ್ನಡೆಯಲಿದೆ. ಈ ವೇಳೆ ರೈತರು, ಸ್ಥಳೀಯರ ಜೊತೆಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ನಾಳೆ (ಅ 22) ರಾಯಚೂರಿನ ಗ್ರಾಮೀಣ ಭಾಗದಿಂದ ನಗರಕ್ಕೆ ಯಾತ್ರೆ ತಲುಪಲಿದೆ. ರಾಯಚೂರು ಜಿಲ್ಲೆಯಲ್ಲಿ ನಡೆಯಲಿರುವ ಯಾತ್ರೆಯ ವೇಳೆ ನಿತ್ಯ 10ರಿಂದ 20 ಸಾವಿರ ಕಾರ್ಯಕರ್ತರನ್ನು ಸೇರಿಸುವ ಗುರಿ ಇರಿಸಿಕೊಳ್ಳಲಾಗಿದೆ. ಅ 23ರ ಬೆಳಿಗ್ಗೆ ರಾಯಚೂರಿನಿಂದ ಕೃಷ್ಣಾ ನದಿ ಸೇತುವೆ ಮಾರ್ಗವಾಗಿ ಯಾತ್ರೆಯು ತೆಲಂಗಾಣಕ್ಕೆ ತೆರಳಲಿದೆ.

ಬಿಗಿ ಬಂದೋಬಸ್ತ್

ರಾಹುಲ್ ಗಾಂಧಿ ಯಾತ್ರೆಗೆ ರಾಯಚೂರು ಜಿಲ್ಲಾ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಮೂರು ದಿನಗಳ ಯಾತ್ರೆಯ ಭದ್ರತೆಗೆ 2,000 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಒಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ,6 ಡಿಎಸ್​ಪಿ, 26 ಸರ್ಕಲ್ ಇನ್​ಸ್ಪೆಪೆಕ್ಟರ್, 73 ಪಿಎಸ್​ಐ, 173 ಎಎಸ್​ಐ, 1,408 ಕಾನ್​ಸ್ಟೆಬಲ್, 96 ಮಹಿಳಾ ಸಿಬ್ಬಂದಿ, 200 ಹೋಮ್ ಗಾರ್ಡ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪರ್ಯಾಯ ಮಾರ್ಗ

ಮಂತ್ರಾಲಯದ ರಾಷ್ಟ್ರೀಯ ಹೆದ್ದಾರಿ ಮೂಲಕವೇ ಭಾರತ್ ಜೋಡೊ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೆರಳಲಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬೆಳಿಗ್ಗೆ 5ರಿಂದ ರಾತ್ರಿ‌ 7 ಗಂಟೆಯವರೆಗೂ ಭಾರಿ ಸರಕು ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Published On - 7:26 am, Fri, 21 October 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು