AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ತಂಗಿಗೆ ಮೆಸೇಜ್ ಮಾಡಬೇಡ ಎಂದು ವಾರ್ನಿಂಗ್ ಕೊಡಲು ಹೋದ ಅಣ್ಣನಿಗೆ ಚಾಕು ಇರಿತ, ಆರೋಪಿಗಳಿಬ್ಬರಿಗೆ ಗಾಯ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ತನ್ನ ತಂಗಿಗೆ ಮೆಸೇಜ್ ಮಾಡಬೇಡ ಎಂದು ವಾರ್ನ್ ಮಾಡಲು ಹೋದ ಅಣ್ಣನನ್ನ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

Raichur News: ತಂಗಿಗೆ ಮೆಸೇಜ್ ಮಾಡಬೇಡ ಎಂದು ವಾರ್ನಿಂಗ್ ಕೊಡಲು ಹೋದ ಅಣ್ಣನಿಗೆ ಚಾಕು ಇರಿತ, ಆರೋಪಿಗಳಿಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 24, 2023 | 1:27 PM

Share

ರಾಯಚೂರು: ತಂಗಿಗೆ ಮೆಸೇಜ್ ಮಾಡ ಬೇಡ ಎಂದು ಬುದ್ಧಿವಾದ ಹೇಳಲು ಹೋಗಿದ್ದ ಅಣ್ಣನ ಹತ್ಯೆ(Murder) ಮಾಡಲಾಗಿರುವ ಭೀಕರ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ದೇವರಾಜ್(23) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳಾದ ಬಸವರಾಜ್ ಹಾಗೂ ಹನುಮಂತ ಎಂಬುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿ ಬಸವರಾಜ್, ಮೃತ ದೇವರಾಜ್​ನ ತಂಗಿ ಹಿಂದೆ ಬಿದ್ದಿದ್ದ. ಆಕೆಗೆ ಪ್ರೀತಿಸುವಂತೆ ಕಿರುಕುಳ ನೀಡ್ತಿದ್ದ. ಮೆಸೇಜ್ ಮಾಡೋದು, ಸಿಕ್ಕಸಿಕ್ಕಲ್ಲಿ ಮಾತನಾಡಿಸುವುದನ್ನು ಮಾಡುತ್ತಿದ್ದ. ಈ ಬಗ್ಗೆ ತಂಗಿ ಅಣ್ಣನ ಬಳಿ ಅಳಲು ತೋಡಿಕೊಂಡಿದ್ದಳು. ಹೀಗಾಗಿ ದೇವರಾಜ್ ಆರೋಪಿ ಬಸವರಾಜ್​ಗೆ ಬೈದು ಬುದ್ಧಿವಾದ ಹೇಳಿದ್ದ. ಇದರಿಂದ ಸಿಟ್ಟಿಗೆದ್ದ ಬಸವರಾಜ್ ಪಾಠ ಕಲಿಸಲೇ ಬೇಕು ಎಂದು ನಿರ್ಧರಿಸಿ ತನ್ನ ಸ್ನೇಹಿತ ಲಿಂಗಣ್ಣನಿಂದ ಮೆಸೇಜ್ ಮಾಡಿಸಿದ್ದ. ಇದರಿಂದ ಮತ್ತಷ್ಟು ಕೆರಳಿದ ಮೃತ ದೇವರಾಜ್ ಇವನಿಗೆ ಈ ರೀತಿ ಹೇಳಿದ್ರೆ ಅರ್ಥ ಆಗಲ್ಲ ಎಂದು ನಿನ್ನೆ(ಜೂನ್ 23) ಮತ್ತೆ ಮಾತಾಡಲು ಹೋಗಿದ್ದಾನೆ. ಈ ವೇಳೆ ದೇವರಾಜ್ ಹಾಗೂ ಬಸವರಾಜ್ ಕಡೆಯವರ ಮಧ್ಯೆ ಗಲಾಟೆ ನಡೆದಿದೆ. ಆಗ ಬಸವರಾಜ್ ಚಾಕುವಿನಿಂದ ಇರಿದು ದೇವರಾಜ್​ನನ್ನು ಹತ್ಯೆಗೈದಿದ್ದಾನೆ. ಘಟನೆಯಲ್ಲಿ ಆರೋಪಿಗಳಾದ ಬಸವರಾಜ್ ಹಾಗೂ ಹನುಮಂತನಿಗೂ ಗಾಯಗಳಾಗಿದ್ದು ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಜಾತಿ ನಿಂದನೆ ಆರೋಪದಡಿ ಮೃತ ದೇವರಾಜ್ ಹಾಗೂ ಮೌನೇಶ್ ವಿರುದ್ಧ ಪ್ರತಿ ದೂರು ದಾಖಲಾಗಿದೆ.

ಇದನ್ನೂ ಓದಿ: Belagavi News: ಪ್ರಿಯಕರನ ಜೊತೆ ಸೇರಿಕೊಂಡು ಮಗನನ್ನೇ ಕೊಲೆ ಮಾಡಿದ ತಾಯಿ

ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಧಾರ ನದಿಗೆ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಕಲೇಶಪುರ ಬಾಳೆಗದ್ದೆ ನಿವಾಸಿ ಧರ್ಮಯ್ಯ (40) ಮೃತ ದುರ್ದೈವಿ. ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಧರ್ಮಯ್ಯ‌ ಅವರು ನದಿಗೆ ಹಾರು ಪ್ರಾಣ ಬಿಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನದಿ ಬದಿಯಲ್ಲಿ ಧರ್ಮಯ್ಯ ಅವರ ಶೂ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕಡಬ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡಬ ಪೊಲೀಸರು, ಶೌರ್ಯ ತಂಡದ ಸದಸ್ಯರು ಮೃತದೇಹಕ್ಕಾಗಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!