AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ನಾಯಕರ ಪರ ವಕಾಲತ್ತು: ರಾಯಚೂರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: 3 ಬೆರಳು ಕಟ್​

ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಬೆಂಬಲಿಗರು ಮಾತಿನ ಚಕಮಕಿಗೆ ಇಳಿದು ಕೊನೆಗೆ ಬಡದಾಡಿಕೊಂಡಿರುವ ಘಟನೆ ರಾಯಚೂರು ನಗರದ ಅಂದ್ರೂನ್ ಖಿಲ್ಲಾ‌ ಏರಿಯಾದಲ್ಲಿ ನಡೆದಿದೆ.

ತಮ್ಮ ನಾಯಕರ ಪರ ವಕಾಲತ್ತು: ರಾಯಚೂರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: 3 ಬೆರಳು ಕಟ್​
ಗಲಾಟೆ ನಡೆದ ದೃಶ್ಯಾವಳಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 10, 2023 | 11:34 AM

Share

ಮುಖ್ಯಾಂಶಗಳು

  • ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಬೆಂಬಲಿಗರು ಮಾತಿನ ಚಕಮಕಿಗೆ ಇಳಿದು ಕೊನೆಗೆ ಬಡದಾಡಿಕೊಂಡಿರುವ ಘಟನೆ ರಾಯಚೂರು ನಗರದ ಅಂದ್ರೂನ್ ಖಿಲ್ಲಾ‌ ಏರಿಯಾದಲ್ಲಿ ನಡೆದಿದೆ.
  • ಆರಿಫ್​ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಬೆಂಬಲಿಗರಾಗಿದ್ದು, ಮೊಹಮ್ಮದ್ ವಾಸಿಮ್ ಕಾಂಗ್ರೆಸ್ ಕೌನ್ಸಿಲರ್​ ತಿಮ್ಮಾ ರೆಡ್ಡಿ ಆಪ್ತರಾಗಿದ್ದಾರೆ.
  • ನಿನ್ನೆ (ಏ.09) ತಡರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪಕ್ಷಗಳ ಕುರಿತು ವೈರಲ್ ಆದ ಸುದ್ದಿ ಬಗ್ಗೆ ಚರ್ಚೆಗೆ ಇಳಿದಿದ್ದಾರೆ.

ರಾಯಚೂರು: ತಮ್ಮ ತಮ್ಮ ರಾಜಕೀಯ ನಾಯಕರ ಪರ ವಾದ ಮಂಡಿಸುತ್ತಾ ಕಾರ್ಯಕರ್ತರು ವಾಗ್ಯುದ್ದಕ್ಕೆ ಇಳಿದು, ಕೊನೆಗೆ ಮುಷ್ಟಿCrime, Raichuru, BJP, Congress, Activists, Clash, Kannada News, ಅಪರಾಧ, ರಾಯಚೂರು, ಬಿಜೆಪಿ, ಕಾಂಗ್ರೆಸ್​, ಗಲಾಟೆ, ಕನ್ನಡ ಸುದ್ದಿ ಯುದ್ಧಕ್ಕೆ ಸಾಕ್ಷಿಯಾಗುತ್ತಾರೆ. ಅದರಂತೆ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ನಾಯಕರ ಬೆಂಬಲಿಗರು ಮಾತಿನ ಚಕಮಕಿಗೆ ಇಳಿದು ಕೊನೆಗೆ ಬಡದಾಡಿಕೊಂಡಿರುವ ಘಟನೆ ರಾಯಚೂರು (Raichuru) ನಗರದ ಅಂದ್ರೂನ್ ಖಿಲ್ಲಾ‌ ಏರಿಯಾದಲ್ಲಿ ನಡೆದಿದೆ. ಆರಿಫ್ ಹಾಗೂ ಮೊಹಮ್ಮದ್ ವಾಸಿಮ್ ಗಲಾಟೆ ಮಾಡಿದ ಕಾರ್ಯಕರ್ತರು. ಘಟನೆಯಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ವಿರುದ್ಧ ದೂರು ನೀಡಿದ ಜೆಡಿಎಸ್

ಆರಿಫ್​ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಬೆಂಬಲಿಗರಾಗಿದ್ದು, ಮೊಹಮ್ಮದ್ ವಾಸಿಮ್ ಕಾಂಗ್ರೆಸ್ ಕೌನ್ಸಿಲರ್​ ತಿಮ್ಮಾ ರೆಡ್ಡಿ ಆಪ್ತರಾಗಿದ್ದಾರೆ. ನಿನ್ನೆ (ಏ.09) ತಡರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪಕ್ಷಗಳ ಕುರಿತು ವೈರಲ್ ಆದ ಸುದ್ದಿ ಬಗ್ಗೆ ಚರ್ಚೆಗೆ ಇಳಿದಿದ್ದಾರೆ. ಪರ ವಿರೋಧ ಹೇಳಿಕೆಗಳಿಂದ ಕೋಪಿತರಾಗಿ ಇಬ್ಬರು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.

ಗಲಾಟೆ ತೀರ್ವ ಸ್ವರೂಪ ಪಡೆದಿದ್ದು, ಪರಸ್ಪರ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಆರಿಫ್​ನ ಮೂರು ಬೆರಳುಗಳು ತುಂಡಾಗಿವೆ. ಇನ್ನು ಮೊಹಮ್ಮದ್ ವಾಸಿಮ್​ಗೂ ಗಾಯಗಳಾಗಿದ್ದು, ಇಬ್ಬರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Mon, 10 April 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ