Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ನಾಯಕರ ಪರ ವಕಾಲತ್ತು: ರಾಯಚೂರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: 3 ಬೆರಳು ಕಟ್​

ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಬೆಂಬಲಿಗರು ಮಾತಿನ ಚಕಮಕಿಗೆ ಇಳಿದು ಕೊನೆಗೆ ಬಡದಾಡಿಕೊಂಡಿರುವ ಘಟನೆ ರಾಯಚೂರು ನಗರದ ಅಂದ್ರೂನ್ ಖಿಲ್ಲಾ‌ ಏರಿಯಾದಲ್ಲಿ ನಡೆದಿದೆ.

ತಮ್ಮ ನಾಯಕರ ಪರ ವಕಾಲತ್ತು: ರಾಯಚೂರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: 3 ಬೆರಳು ಕಟ್​
ಗಲಾಟೆ ನಡೆದ ದೃಶ್ಯಾವಳಿ
Follow us
ವಿವೇಕ ಬಿರಾದಾರ
|

Updated on:Apr 10, 2023 | 11:34 AM

ರಾಯಚೂರು: ತಮ್ಮ ತಮ್ಮ ರಾಜಕೀಯ ನಾಯಕರ ಪರ ವಾದ ಮಂಡಿಸುತ್ತಾ ಕಾರ್ಯಕರ್ತರು ವಾಗ್ಯುದ್ದಕ್ಕೆ ಇಳಿದು, ಕೊನೆಗೆ ಮುಷ್ಟಿCrime, Raichuru, BJP, Congress, Activists, Clash, Kannada News, ಅಪರಾಧ, ರಾಯಚೂರು, ಬಿಜೆಪಿ, ಕಾಂಗ್ರೆಸ್​, ಗಲಾಟೆ, ಕನ್ನಡ ಸುದ್ದಿ ಯುದ್ಧಕ್ಕೆ ಸಾಕ್ಷಿಯಾಗುತ್ತಾರೆ. ಅದರಂತೆ ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ನಾಯಕರ ಬೆಂಬಲಿಗರು ಮಾತಿನ ಚಕಮಕಿಗೆ ಇಳಿದು ಕೊನೆಗೆ ಬಡದಾಡಿಕೊಂಡಿರುವ ಘಟನೆ ರಾಯಚೂರು (Raichuru) ನಗರದ ಅಂದ್ರೂನ್ ಖಿಲ್ಲಾ‌ ಏರಿಯಾದಲ್ಲಿ ನಡೆದಿದೆ. ಆರಿಫ್ ಹಾಗೂ ಮೊಹಮ್ಮದ್ ವಾಸಿಮ್ ಗಲಾಟೆ ಮಾಡಿದ ಕಾರ್ಯಕರ್ತರು. ಘಟನೆಯಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ವಿರುದ್ಧ ದೂರು ನೀಡಿದ ಜೆಡಿಎಸ್

ಆರಿಫ್​ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಬೆಂಬಲಿಗರಾಗಿದ್ದು, ಮೊಹಮ್ಮದ್ ವಾಸಿಮ್ ಕಾಂಗ್ರೆಸ್ ಕೌನ್ಸಿಲರ್​ ತಿಮ್ಮಾ ರೆಡ್ಡಿ ಆಪ್ತರಾಗಿದ್ದಾರೆ. ನಿನ್ನೆ (ಏ.09) ತಡರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪಕ್ಷಗಳ ಕುರಿತು ವೈರಲ್ ಆದ ಸುದ್ದಿ ಬಗ್ಗೆ ಚರ್ಚೆಗೆ ಇಳಿದಿದ್ದಾರೆ. ಪರ ವಿರೋಧ ಹೇಳಿಕೆಗಳಿಂದ ಕೋಪಿತರಾಗಿ ಇಬ್ಬರು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.

ಗಲಾಟೆ ತೀರ್ವ ಸ್ವರೂಪ ಪಡೆದಿದ್ದು, ಪರಸ್ಪರ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಆರಿಫ್​ನ ಮೂರು ಬೆರಳುಗಳು ತುಂಡಾಗಿವೆ. ಇನ್ನು ಮೊಹಮ್ಮದ್ ವಾಸಿಮ್​ಗೂ ಗಾಯಗಳಾಗಿದ್ದು, ಇಬ್ಬರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Mon, 10 April 23

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ