AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆ ವೇಳೆ ಗಲಾಟೆ: ಜಗಳ ಬಿಡಿಸಲು ಹೋಗಿದ್ದ ವೃದ್ಧ ದುರಂತ ಸಾವು

ರಾಯಚೂರಿನ ಸಿಂಧನೂರು(Sindhanur) ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದ್ದು, ಈ ವೇಳೆ ಜಗಳ ಬಿಡಿಸಲು ಹೋಗಿದ್ದ 60 ವರ್ಷದ ವೃದ್ದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬಗ್ಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಗಲಾಟೆ: ಜಗಳ ಬಿಡಿಸಲು ಹೋಗಿದ್ದ ವೃದ್ಧ ದುರಂತ ಸಾವು
ಮೃತ ವೃದ್ಧ
ಭೀಮೇಶ್​​ ಪೂಜಾರ್
| Edited By: |

Updated on: Sep 08, 2024 | 3:16 PM

Share

ರಾಯಚೂರು, ಸೆ.08: ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದ್ದು, ಈ ವೇಳೆ ಜಗಳ ಬಿಡಿಸಲು ಹೋಗಿದ್ದ 60 ವರ್ಷದ ವೃದ್ದ ಸಾವನ್ನಪ್ಪಿದ ಘಟನೆ ರಾಯಚೂರಿನ ಸಿಂಧನೂರು(Sindhanur) ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ನಡೆದಿದೆ. ವೀರಬಸಪ್ಪ ಮೃತ ವ್ಯಕ್ತಿ. ನಿನ್ನೆ(ಸೆ.07) ಏರಿಯಾದಲ್ಲಿ ಕೂರಿಸಲಾಗಿದ್ದ ಗಣೇಶನ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಅಲ್ಲಿಯೇ ಇದ್ದ ವೀರಬಸಪ್ಪ ಜಗಳ ಬಿಡಿಸಲು ಹೋಗಿದ್ದ.

ಆಗ ಮೃತ ವೀರಬಸಪ್ಪ ಕೆನ್ನೆಗೆ ಆರೋಪಿ ಮಹೇಶ್ ಹೊಡೆದಿದ್ದಾನೆ. ಈ ವೇಳೆ ಕುಸಿದು ಬಿದ್ದು ವೃದ್ದ ಸಾವನ್ನಪ್ಪಿದ್ದಾರೆ. ಈ ಕುರಿತು ಮೃತನ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ನೀಡಿದ್ದಾರೆ. ಈ ಬಗ್ಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹೇಶ್, ಪರಶುರಾಮ ಹಾಗೂ ಓರ್ವ ಅಪ್ರಾಪ್ತ ಬಂಧಿತರು.

ಇದನ್ನೂ ಓದಿ:ಮಂಗಳೂರು: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ

ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ‌ ದೋಣಿಮಲೈ ಕ್ರಾಸ್ ಬಳಿಯ ನಾರಿಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಂಡೂರು ನಿವಾಸಿ ಫಾರುಕ್ (45) ಮೃತ ದುರ್ದೈವಿ. ಬಾಬಯ್ ದೇವಸ್ಥಾನಕ್ಕೆ ಹೋಗಿ ಮರಳುವ ವೇಳೆ ದುರ್ಘಟನೆ ನಡೆದಿದೆ. ಸೇತುವೆ ಮೇಲಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದಿರೋ ಶಂಕೆ ವ್ಯಕ್ತವಾಗಿದ್ದು, ಹಳ್ಳದ ನೀರಿನಿಂದ ಮೃತದೇಹವನ್ನು ಅಧಿಕಾರಿಗಳು ಹೊರತೆಗೆದಿದ್ದಾರೆ. ಮೃತ ವ್ಯಕ್ತಿ ಮಾನಸಿಕ ಅಸ್ವಸ್ಥತೆ ಎಂದು ಹೇಳಲಾಗುತ್ತಿದೆ. ಈ ಕುರಿತು UDR ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ