AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆ ವೇಳೆ ಗಲಾಟೆ: ಜಗಳ ಬಿಡಿಸಲು ಹೋಗಿದ್ದ ವೃದ್ಧ ದುರಂತ ಸಾವು

ರಾಯಚೂರಿನ ಸಿಂಧನೂರು(Sindhanur) ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದ್ದು, ಈ ವೇಳೆ ಜಗಳ ಬಿಡಿಸಲು ಹೋಗಿದ್ದ 60 ವರ್ಷದ ವೃದ್ದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಬಗ್ಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಗಲಾಟೆ: ಜಗಳ ಬಿಡಿಸಲು ಹೋಗಿದ್ದ ವೃದ್ಧ ದುರಂತ ಸಾವು
ಮೃತ ವೃದ್ಧ
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 08, 2024 | 3:16 PM

Share

ರಾಯಚೂರು, ಸೆ.08: ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದ್ದು, ಈ ವೇಳೆ ಜಗಳ ಬಿಡಿಸಲು ಹೋಗಿದ್ದ 60 ವರ್ಷದ ವೃದ್ದ ಸಾವನ್ನಪ್ಪಿದ ಘಟನೆ ರಾಯಚೂರಿನ ಸಿಂಧನೂರು(Sindhanur) ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ನಡೆದಿದೆ. ವೀರಬಸಪ್ಪ ಮೃತ ವ್ಯಕ್ತಿ. ನಿನ್ನೆ(ಸೆ.07) ಏರಿಯಾದಲ್ಲಿ ಕೂರಿಸಲಾಗಿದ್ದ ಗಣೇಶನ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಅಲ್ಲಿಯೇ ಇದ್ದ ವೀರಬಸಪ್ಪ ಜಗಳ ಬಿಡಿಸಲು ಹೋಗಿದ್ದ.

ಆಗ ಮೃತ ವೀರಬಸಪ್ಪ ಕೆನ್ನೆಗೆ ಆರೋಪಿ ಮಹೇಶ್ ಹೊಡೆದಿದ್ದಾನೆ. ಈ ವೇಳೆ ಕುಸಿದು ಬಿದ್ದು ವೃದ್ದ ಸಾವನ್ನಪ್ಪಿದ್ದಾರೆ. ಈ ಕುರಿತು ಮೃತನ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ನೀಡಿದ್ದಾರೆ. ಈ ಬಗ್ಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹೇಶ್, ಪರಶುರಾಮ ಹಾಗೂ ಓರ್ವ ಅಪ್ರಾಪ್ತ ಬಂಧಿತರು.

ಇದನ್ನೂ ಓದಿ:ಮಂಗಳೂರು: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ

ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ‌ ದೋಣಿಮಲೈ ಕ್ರಾಸ್ ಬಳಿಯ ನಾರಿಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಂಡೂರು ನಿವಾಸಿ ಫಾರುಕ್ (45) ಮೃತ ದುರ್ದೈವಿ. ಬಾಬಯ್ ದೇವಸ್ಥಾನಕ್ಕೆ ಹೋಗಿ ಮರಳುವ ವೇಳೆ ದುರ್ಘಟನೆ ನಡೆದಿದೆ. ಸೇತುವೆ ಮೇಲಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದಿರೋ ಶಂಕೆ ವ್ಯಕ್ತವಾಗಿದ್ದು, ಹಳ್ಳದ ನೀರಿನಿಂದ ಮೃತದೇಹವನ್ನು ಅಧಿಕಾರಿಗಳು ಹೊರತೆಗೆದಿದ್ದಾರೆ. ಮೃತ ವ್ಯಕ್ತಿ ಮಾನಸಿಕ ಅಸ್ವಸ್ಥತೆ ಎಂದು ಹೇಳಲಾಗುತ್ತಿದೆ. ಈ ಕುರಿತು UDR ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?