AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿ.ಪಂ.ನಲ್ಲಿ ಭ್ರಷ್ಟಾಚಾರದ ಕಡತ ನಾಪತ್ತೆ: ಅಧಿಕಾರಿಗಳ ಮೇಲೆ ಅನುಮಾನ

ರಾಯಚೂರು: ಜಿಲ್ಲಾ ಪಂಚಾಯತಿ ಅಂದ್ಮೇಲೆ ಆ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳ ಅಷ್ಟೂ ಮಾಹಿತಿ ಇರುತ್ತೆ. ಆದ್ರೆ ಅಭಿವೃದ್ಧಿ, ಯೋಜನೆಗಳ ಹೆಸ್ರಲ್ಲಿ ಅಧಿಕಾರಿಗಳು ಮಾತ್ರ ಕಳ್ಳಾಟ ಆಡ್ತಾರೆ. ಇಂಥ ಭ್ರಷ್ಟ ಅಧಿಕಾರಿಗಳ ಮಾಹಿತಿ ಇದ್ದ ಕಡತವೇ ನಾಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ಕಡತ ನಾಪತ್ತೆ: ರಾಯಚೂರು ಜಿಲ್ಲಾ ಪಂಚಾಯಿತ್ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಮಹತ್ವದ ಕಡತಗಳು ನಾಪತ್ತೆಯಾಗಿವೆ. ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮ ಪಂಚಾಯಿತಿಯಲ್ಲಿ 2015ನೇ ಸಾಲಿನಲ್ಲಿ ಭಾರಿ ಅಕ್ರಮ ನಡೆದಿತ್ತು. ಪಂಚಾಯತಿ […]

ರಾಯಚೂರು ಜಿ.ಪಂ.ನಲ್ಲಿ ಭ್ರಷ್ಟಾಚಾರದ ಕಡತ ನಾಪತ್ತೆ: ಅಧಿಕಾರಿಗಳ ಮೇಲೆ ಅನುಮಾನ
ಸಾಧು ಶ್ರೀನಾಥ್​
|

Updated on: Jan 26, 2020 | 2:44 PM

Share

ರಾಯಚೂರು: ಜಿಲ್ಲಾ ಪಂಚಾಯತಿ ಅಂದ್ಮೇಲೆ ಆ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳ ಅಷ್ಟೂ ಮಾಹಿತಿ ಇರುತ್ತೆ. ಆದ್ರೆ ಅಭಿವೃದ್ಧಿ, ಯೋಜನೆಗಳ ಹೆಸ್ರಲ್ಲಿ ಅಧಿಕಾರಿಗಳು ಮಾತ್ರ ಕಳ್ಳಾಟ ಆಡ್ತಾರೆ. ಇಂಥ ಭ್ರಷ್ಟ ಅಧಿಕಾರಿಗಳ ಮಾಹಿತಿ ಇದ್ದ ಕಡತವೇ ನಾಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ಕಡತ ನಾಪತ್ತೆ: ರಾಯಚೂರು ಜಿಲ್ಲಾ ಪಂಚಾಯಿತ್ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಮಹತ್ವದ ಕಡತಗಳು ನಾಪತ್ತೆಯಾಗಿವೆ. ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮ ಪಂಚಾಯಿತಿಯಲ್ಲಿ 2015ನೇ ಸಾಲಿನಲ್ಲಿ ಭಾರಿ ಅಕ್ರಮ ನಡೆದಿತ್ತು. ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರಿಗೆ ಕಾಣದಂತೆ ಕ್ರಿಯಾಯೋಜನೆಗೆ ಅನುಮೋದನೆ ಪಡೆಯದೇ 13 ಮತ್ತು 14ನೇ ಹಣಕಾಸಿನ ಯೋಜನೆಯಡಿ 28 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಎಲ್ಲಾ ಅಕ್ರಮವೂ ಬಟಾ ಬಯಲಾಗಿತ್ತು.

ಜಿಲ್ಲಾ ಪಂಚಾಯತಿಗೆ ಅಕ್ರಮದ ತನಿಖಾ ವರದಿ ಸಲ್ಲಿಸಲಾಗಿತ್ತು. ಆದ್ರೆ ಇಂದಿಗೂ ಹಣ ಜೇಬಿಗಿಳಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿಲ್ಲ. ಈ ಬಗ್ಗೆ ಜಿಲ್ಲಾ ಪಂಚಾಯತ್ ಅಧಿಕಾರಿಗಳನ್ನ ಸಂಪರ್ಕಿಸಿದ್ರೆ, ಈ ಪ್ರಕರಣಕ್ಕೆ ಸಂಬಂಧಿಸಿದ ಕಡತವೇ ಕಾಣುತ್ತಿಲ್ಲವೆಂಬ ಸಬೂಬು ನೀಡ್ತಿದ್ದಾರಂತೆ. ಈ ಮೂಲಕ ಭ್ರಷ್ಟಾಚಾರದ ಹಗರಣವನ್ನೇ ಮುಚ್ಚಿ ಹಾಕುವ ಪ್ರಯತ್ನ ನಡೆಸಲಾಗ್ತಿದ್ದು, ಕೂಡಲೇ ಜಿಲ್ಲಾ ಪಂಚಾಯತ್ ಸಿಇಒ ಕ್ರಮ ಕೈಗೊಳ್ಬೇಕು ಅಂತಿದ್ದಾರೆ ಸ್ಥಳೀಯರು.

ಅಷ್ಟೇ ಅಲ್ದೇ ಚಂದ್ರಬಂಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಹಣವೂ ಪಾವತಿಸದೇ ವಂಚಿಸಲಾಗಿದ್ಯಂತೆ. ಕೂಲಿ ಮಾಡದೇ ಇರುವ ನೂರಾರು ನಕಲಿ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾ ಪಂಚಾಯತ್ ಹಿರಿಯ ಅಧಿಕಾರಿಗಳ ತಂಡ ನಡೆಸಿದ ತನಿಖೆಯಲ್ಲಿ ಎಲ್ಲವೂ ಬಯಲಾಗಿತ್ತು. ಆದ್ರೆ ಈ ರೀತಿ ಕಾರ್ಮಿಕರಿಗೆ ಪಾವತಿಸಬೇಕಿದ್ದ ಹಣವೂ ಸಹ ಚಂದ್ರಬಂಡ ಪಂಚಾಯತಿ ಅಧಿಕಾರಿಗಳು ಜೇಬಿಗಿಳಿಸಿದ್ರು. ಹೀಗಾಗಿ ಕೂಡಲೇ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಹಣ ಪಾವತಿಸಿ ಅಂತಿದ್ದಾರೆ ಕಾರ್ಮಿಕರು.

ಸದ್ಯ ಜಿಲ್ಲಾ ಪಂಚಾಯತಿಯಲ್ಲೇ ಅಕ್ರಮ ನಡೀತಿದ್ದು, ಭ್ರಷ್ಟಾಚಾರ ಮುಚ್ಚಿ ಹಾಕೋಕೇ ಅಧಿಕಾರಿಗಳೇ ಮುಂದಾಗಿದ್ರಾ ಅನ್ನೋ ಅನುಮಾನ ಮೂಡಿದೆ. ಹೀಗಾಗಿ ಸಮಗ್ರ ತನಿಖೆ ನಡೀಬೇಕಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ