AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿ.ಪಂ.ನಲ್ಲಿ ಭ್ರಷ್ಟಾಚಾರದ ಕಡತ ನಾಪತ್ತೆ: ಅಧಿಕಾರಿಗಳ ಮೇಲೆ ಅನುಮಾನ

ರಾಯಚೂರು: ಜಿಲ್ಲಾ ಪಂಚಾಯತಿ ಅಂದ್ಮೇಲೆ ಆ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳ ಅಷ್ಟೂ ಮಾಹಿತಿ ಇರುತ್ತೆ. ಆದ್ರೆ ಅಭಿವೃದ್ಧಿ, ಯೋಜನೆಗಳ ಹೆಸ್ರಲ್ಲಿ ಅಧಿಕಾರಿಗಳು ಮಾತ್ರ ಕಳ್ಳಾಟ ಆಡ್ತಾರೆ. ಇಂಥ ಭ್ರಷ್ಟ ಅಧಿಕಾರಿಗಳ ಮಾಹಿತಿ ಇದ್ದ ಕಡತವೇ ನಾಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ಕಡತ ನಾಪತ್ತೆ: ರಾಯಚೂರು ಜಿಲ್ಲಾ ಪಂಚಾಯಿತ್ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಮಹತ್ವದ ಕಡತಗಳು ನಾಪತ್ತೆಯಾಗಿವೆ. ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮ ಪಂಚಾಯಿತಿಯಲ್ಲಿ 2015ನೇ ಸಾಲಿನಲ್ಲಿ ಭಾರಿ ಅಕ್ರಮ ನಡೆದಿತ್ತು. ಪಂಚಾಯತಿ […]

ರಾಯಚೂರು ಜಿ.ಪಂ.ನಲ್ಲಿ ಭ್ರಷ್ಟಾಚಾರದ ಕಡತ ನಾಪತ್ತೆ: ಅಧಿಕಾರಿಗಳ ಮೇಲೆ ಅನುಮಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 26, 2020 | 2:44 PM

Share

ರಾಯಚೂರು: ಜಿಲ್ಲಾ ಪಂಚಾಯತಿ ಅಂದ್ಮೇಲೆ ಆ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳ ಅಷ್ಟೂ ಮಾಹಿತಿ ಇರುತ್ತೆ. ಆದ್ರೆ ಅಭಿವೃದ್ಧಿ, ಯೋಜನೆಗಳ ಹೆಸ್ರಲ್ಲಿ ಅಧಿಕಾರಿಗಳು ಮಾತ್ರ ಕಳ್ಳಾಟ ಆಡ್ತಾರೆ. ಇಂಥ ಭ್ರಷ್ಟ ಅಧಿಕಾರಿಗಳ ಮಾಹಿತಿ ಇದ್ದ ಕಡತವೇ ನಾಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ಕಡತ ನಾಪತ್ತೆ: ರಾಯಚೂರು ಜಿಲ್ಲಾ ಪಂಚಾಯಿತ್ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಮಹತ್ವದ ಕಡತಗಳು ನಾಪತ್ತೆಯಾಗಿವೆ. ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮ ಪಂಚಾಯಿತಿಯಲ್ಲಿ 2015ನೇ ಸಾಲಿನಲ್ಲಿ ಭಾರಿ ಅಕ್ರಮ ನಡೆದಿತ್ತು. ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರಿಗೆ ಕಾಣದಂತೆ ಕ್ರಿಯಾಯೋಜನೆಗೆ ಅನುಮೋದನೆ ಪಡೆಯದೇ 13 ಮತ್ತು 14ನೇ ಹಣಕಾಸಿನ ಯೋಜನೆಯಡಿ 28 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಎಲ್ಲಾ ಅಕ್ರಮವೂ ಬಟಾ ಬಯಲಾಗಿತ್ತು.

ಜಿಲ್ಲಾ ಪಂಚಾಯತಿಗೆ ಅಕ್ರಮದ ತನಿಖಾ ವರದಿ ಸಲ್ಲಿಸಲಾಗಿತ್ತು. ಆದ್ರೆ ಇಂದಿಗೂ ಹಣ ಜೇಬಿಗಿಳಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿಲ್ಲ. ಈ ಬಗ್ಗೆ ಜಿಲ್ಲಾ ಪಂಚಾಯತ್ ಅಧಿಕಾರಿಗಳನ್ನ ಸಂಪರ್ಕಿಸಿದ್ರೆ, ಈ ಪ್ರಕರಣಕ್ಕೆ ಸಂಬಂಧಿಸಿದ ಕಡತವೇ ಕಾಣುತ್ತಿಲ್ಲವೆಂಬ ಸಬೂಬು ನೀಡ್ತಿದ್ದಾರಂತೆ. ಈ ಮೂಲಕ ಭ್ರಷ್ಟಾಚಾರದ ಹಗರಣವನ್ನೇ ಮುಚ್ಚಿ ಹಾಕುವ ಪ್ರಯತ್ನ ನಡೆಸಲಾಗ್ತಿದ್ದು, ಕೂಡಲೇ ಜಿಲ್ಲಾ ಪಂಚಾಯತ್ ಸಿಇಒ ಕ್ರಮ ಕೈಗೊಳ್ಬೇಕು ಅಂತಿದ್ದಾರೆ ಸ್ಥಳೀಯರು.

ಅಷ್ಟೇ ಅಲ್ದೇ ಚಂದ್ರಬಂಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಹಣವೂ ಪಾವತಿಸದೇ ವಂಚಿಸಲಾಗಿದ್ಯಂತೆ. ಕೂಲಿ ಮಾಡದೇ ಇರುವ ನೂರಾರು ನಕಲಿ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾ ಪಂಚಾಯತ್ ಹಿರಿಯ ಅಧಿಕಾರಿಗಳ ತಂಡ ನಡೆಸಿದ ತನಿಖೆಯಲ್ಲಿ ಎಲ್ಲವೂ ಬಯಲಾಗಿತ್ತು. ಆದ್ರೆ ಈ ರೀತಿ ಕಾರ್ಮಿಕರಿಗೆ ಪಾವತಿಸಬೇಕಿದ್ದ ಹಣವೂ ಸಹ ಚಂದ್ರಬಂಡ ಪಂಚಾಯತಿ ಅಧಿಕಾರಿಗಳು ಜೇಬಿಗಿಳಿಸಿದ್ರು. ಹೀಗಾಗಿ ಕೂಡಲೇ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಹಣ ಪಾವತಿಸಿ ಅಂತಿದ್ದಾರೆ ಕಾರ್ಮಿಕರು.

ಸದ್ಯ ಜಿಲ್ಲಾ ಪಂಚಾಯತಿಯಲ್ಲೇ ಅಕ್ರಮ ನಡೀತಿದ್ದು, ಭ್ರಷ್ಟಾಚಾರ ಮುಚ್ಚಿ ಹಾಕೋಕೇ ಅಧಿಕಾರಿಗಳೇ ಮುಂದಾಗಿದ್ರಾ ಅನ್ನೋ ಅನುಮಾನ ಮೂಡಿದೆ. ಹೀಗಾಗಿ ಸಮಗ್ರ ತನಿಖೆ ನಡೀಬೇಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!