ರಾಯಚೂರು RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ! ತನಿಖೆಯಲ್ಲಿ ಬಯಲಾಯ್ತು ಮ್ಯಾನೇಜರ್ ಕಳ್ಳಾಟ

ಅದು ಬಡ ಬಗ್ಗರ ಸಹಾಯಕ್ಕಿರುವ ಸಹಕಾರ ಇಲಾಖೆಯ ಬ್ಯಾಂಕ್. ಅಲ್ಲಿ ಬ್ಯಾಂಕ್ ಮ್ಯಾನೇಜರ್‌ ನಕಲಿ ಖಾತೆ ಸೃಷ್ಟಿಸಿ ಕೋಟಿ ಕೋಟಿ ಹಣ ಗೋಲ್ ಮಾಲ್‌ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಖುದ್ದು ಆ ಇಲಾಖೆಯೇ ತನಿಖೆ ನಡೆಸಿ ಅಕ್ರಮ ಬಯಲಿಗೆಳೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ರಾಯಚೂರು RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ! ತನಿಖೆಯಲ್ಲಿ ಬಯಲಾಯ್ತು ಮ್ಯಾನೇಜರ್ ಕಳ್ಳಾಟ
RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ, ಆರೋಪಿ ಮ್ಯಾನೇಜರ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 02, 2024 | 6:47 PM

ರಾಯಚೂರು, ಅ.02: ರಾಯಚೂರಿನಲ್ಲಿ ಸಹಕಾರ ಇಲಾಖೆಯ ಆರ್​ಡಿಸಿಸಿ ಬ್ಯಾಂಕ್(Rdcc Bank)​ನಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಆಗಿರುವುದು ಬೆಳಕಿಗೆ ಬಂದಿದೆ. ಆರ್‌ಡಿಸಿಸಿಯ ರಾಯಚೂರು(Raichur) ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದ್ಗಲ್ ಪಟ್ಟಣದ ಶಾಖೆಯಲ್ಲಿ ಒಟ್ಟು 22 ಗ್ರಾಹಕರಿಗೆ 2.20 ಕೋಟಿ ರೂಪಾಯಿ ಆಕ್ರಮ ವರ್ಗಾವಣೆ ಆಗಿರುವ ಆರೋಪ ಕೇಳಿ ಬಂದಿತ್ತು. ಇಷ್ಟು ದೊಡ್ಡ ಭ್ರಷ್ಟಾಚಾರದ ಕುರಿತು ತನಿಖೆ ಮಾಡಿದಾಗ ಮುದಗಲ್ ಶಾಖೆಯ ಮ್ಯಾನೇಜರ್ ಶಿವಪುತ್ರಪ್ಪನೇ ಕಿಂಗ್ ಪಿನ್ ಎನ್ನುವುದು ಇಲಾಖಾ ತನಿಖೆಯಲ್ಲಿ ಬಯಲಾಗಿದೆ‌. ನಿಯಮಗಳನ್ನ ಉಲ್ಲಂಘಿಸಿ ನೇರವಾಗಿ ಆರ್‌ಡಿಸಿಸಿ ಬ್ಯಾಂಕ್‌ನಿಂದ ಹಣ ಪಾವತಿಸಿರುವುದು ತಿಳಿದುಬಂದಿದೆ.

ಹೌದು, ಮುದಗಲ್ ಶಾಖೆಯ ಮ್ಯಾನೇಜರ್ ಶಿವಪುತ್ರಪ್ಪ ಈ ಹಣ ಗುಳುಂ ಮಾಡಲು ಮಾಸ್ಟರ್ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ಬ್ಯಾಂಕ್​ನ 11 ಜನ ಸಿಬ್ಬಂದಿಯ ಐಡಿ ಬಳಸಿ, ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆಯಾಗಿದ್ದು ಇಲಾಖಾ ತನಿಖೆಯಲ್ಲಿ ಗೊತ್ತಾಗಿದೆ. 2017 ಜೂನ್​ನಿಂದ ಸೆಪ್ಟೆಂಬರ್ 2020 ರವರೆಗೂ ಹಂತ ಹಂತವಾಗಿ ಹಣ ಅಬೇಸ್ ಮಾಡಲಾಗಿದೆ. ಈ ಬಗ್ಗೆ ತನಿಖೆಗೆ ಆದೇಶವಾದ ಬೆನ್ನಲ್ಲೇ ಕಲಬುರಗಿ ಸಹಕಾರ ಸಂಘಗಳ ಜಂಟಿ ನಿಬಂಧಕರು ವಿಚಾರಣೆ ನಡೆಸಿದರು. ಈ ಇಲಾಖಾ ತನಿಖೆ ವೇಳೆ ಒಟ್ಟು 2 ಕೋಟಿ 20 ಲಕ್ಷ ಹಣ ದುರ್ಬಳಕೆ ಪತ್ತೆಯಾಗಿದೆ. ಈ ಬಗ್ಗೆ ಕೊಪ್ಪಳ-ರಾಯಚೂರು ಆರ್​ಡಿಸಿಸಿ ಬ್ಯಾಂಕ್​ನ ಚೇರ್​ಮನ್ ವಿಶ್ವನಾಥ್ ಪಾಟೀಲ್ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕ್ರಮ ಕೈಗೊಳ್ಳೋ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:ಕೋಟ್ಯಂತರ ರೂ. ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ

ಇತ್ತ ಹಗರಣ ಬೆಳಕಿಗೆ ಬಂದ ಹಿನ್ನೆಲೆ ಮುದಗಲ್ ಶಾಖೆ ಮ್ಯಾನೇಜರ್ ಶಿವಪುತ್ರಪ್ಪರನ್ನ ಅಮಾನತ್ತು ಮಾಡಿ ಆದೇಶಿಸಿಲಾಗಿದೆ. ಅಲ್ಲದೇ ಅವ್ಯವಹಾರವಾಗಿರುವ ಕೋಟಿ ಕೋಟಿ ಹಣವನ್ನ ಆಡಳಿತ ವರ್ಗ ಹೇಗೆ ರಿಕವರಿ ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Wed, 2 October 24

ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ