AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ! ತನಿಖೆಯಲ್ಲಿ ಬಯಲಾಯ್ತು ಮ್ಯಾನೇಜರ್ ಕಳ್ಳಾಟ

ಅದು ಬಡ ಬಗ್ಗರ ಸಹಾಯಕ್ಕಿರುವ ಸಹಕಾರ ಇಲಾಖೆಯ ಬ್ಯಾಂಕ್. ಅಲ್ಲಿ ಬ್ಯಾಂಕ್ ಮ್ಯಾನೇಜರ್‌ ನಕಲಿ ಖಾತೆ ಸೃಷ್ಟಿಸಿ ಕೋಟಿ ಕೋಟಿ ಹಣ ಗೋಲ್ ಮಾಲ್‌ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಖುದ್ದು ಆ ಇಲಾಖೆಯೇ ತನಿಖೆ ನಡೆಸಿ ಅಕ್ರಮ ಬಯಲಿಗೆಳೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ರಾಯಚೂರು RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ! ತನಿಖೆಯಲ್ಲಿ ಬಯಲಾಯ್ತು ಮ್ಯಾನೇಜರ್ ಕಳ್ಳಾಟ
RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ, ಆರೋಪಿ ಮ್ಯಾನೇಜರ್
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Oct 02, 2024 | 6:47 PM

Share

ರಾಯಚೂರು, ಅ.02: ರಾಯಚೂರಿನಲ್ಲಿ ಸಹಕಾರ ಇಲಾಖೆಯ ಆರ್​ಡಿಸಿಸಿ ಬ್ಯಾಂಕ್(Rdcc Bank)​ನಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಆಗಿರುವುದು ಬೆಳಕಿಗೆ ಬಂದಿದೆ. ಆರ್‌ಡಿಸಿಸಿಯ ರಾಯಚೂರು(Raichur) ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದ್ಗಲ್ ಪಟ್ಟಣದ ಶಾಖೆಯಲ್ಲಿ ಒಟ್ಟು 22 ಗ್ರಾಹಕರಿಗೆ 2.20 ಕೋಟಿ ರೂಪಾಯಿ ಆಕ್ರಮ ವರ್ಗಾವಣೆ ಆಗಿರುವ ಆರೋಪ ಕೇಳಿ ಬಂದಿತ್ತು. ಇಷ್ಟು ದೊಡ್ಡ ಭ್ರಷ್ಟಾಚಾರದ ಕುರಿತು ತನಿಖೆ ಮಾಡಿದಾಗ ಮುದಗಲ್ ಶಾಖೆಯ ಮ್ಯಾನೇಜರ್ ಶಿವಪುತ್ರಪ್ಪನೇ ಕಿಂಗ್ ಪಿನ್ ಎನ್ನುವುದು ಇಲಾಖಾ ತನಿಖೆಯಲ್ಲಿ ಬಯಲಾಗಿದೆ‌. ನಿಯಮಗಳನ್ನ ಉಲ್ಲಂಘಿಸಿ ನೇರವಾಗಿ ಆರ್‌ಡಿಸಿಸಿ ಬ್ಯಾಂಕ್‌ನಿಂದ ಹಣ ಪಾವತಿಸಿರುವುದು ತಿಳಿದುಬಂದಿದೆ.

ಹೌದು, ಮುದಗಲ್ ಶಾಖೆಯ ಮ್ಯಾನೇಜರ್ ಶಿವಪುತ್ರಪ್ಪ ಈ ಹಣ ಗುಳುಂ ಮಾಡಲು ಮಾಸ್ಟರ್ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ಬ್ಯಾಂಕ್​ನ 11 ಜನ ಸಿಬ್ಬಂದಿಯ ಐಡಿ ಬಳಸಿ, ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆಯಾಗಿದ್ದು ಇಲಾಖಾ ತನಿಖೆಯಲ್ಲಿ ಗೊತ್ತಾಗಿದೆ. 2017 ಜೂನ್​ನಿಂದ ಸೆಪ್ಟೆಂಬರ್ 2020 ರವರೆಗೂ ಹಂತ ಹಂತವಾಗಿ ಹಣ ಅಬೇಸ್ ಮಾಡಲಾಗಿದೆ. ಈ ಬಗ್ಗೆ ತನಿಖೆಗೆ ಆದೇಶವಾದ ಬೆನ್ನಲ್ಲೇ ಕಲಬುರಗಿ ಸಹಕಾರ ಸಂಘಗಳ ಜಂಟಿ ನಿಬಂಧಕರು ವಿಚಾರಣೆ ನಡೆಸಿದರು. ಈ ಇಲಾಖಾ ತನಿಖೆ ವೇಳೆ ಒಟ್ಟು 2 ಕೋಟಿ 20 ಲಕ್ಷ ಹಣ ದುರ್ಬಳಕೆ ಪತ್ತೆಯಾಗಿದೆ. ಈ ಬಗ್ಗೆ ಕೊಪ್ಪಳ-ರಾಯಚೂರು ಆರ್​ಡಿಸಿಸಿ ಬ್ಯಾಂಕ್​ನ ಚೇರ್​ಮನ್ ವಿಶ್ವನಾಥ್ ಪಾಟೀಲ್ ಹಗರಣ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕ್ರಮ ಕೈಗೊಳ್ಳೋ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:ಕೋಟ್ಯಂತರ ರೂ. ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ

ಇತ್ತ ಹಗರಣ ಬೆಳಕಿಗೆ ಬಂದ ಹಿನ್ನೆಲೆ ಮುದಗಲ್ ಶಾಖೆ ಮ್ಯಾನೇಜರ್ ಶಿವಪುತ್ರಪ್ಪರನ್ನ ಅಮಾನತ್ತು ಮಾಡಿ ಆದೇಶಿಸಿಲಾಗಿದೆ. ಅಲ್ಲದೇ ಅವ್ಯವಹಾರವಾಗಿರುವ ಕೋಟಿ ಕೋಟಿ ಹಣವನ್ನ ಆಡಳಿತ ವರ್ಗ ಹೇಗೆ ರಿಕವರಿ ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Wed, 2 October 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ