Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಿ ಪ್ರಿಯರೇ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ಎಫ್​ಪಿವಿ ವೈರಸ್

ಮಾರಣಾಂತಿಕ ಎಫ್​ಪಿವಿ ವೈರಸ್ ರಾಯಚೂರಿನ ಬೆಕ್ಕುಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ನೂರಾರು ಬೆಕ್ಕುಗಳು ಈ ಸೋಂಕಿನಿಂದ ಸಾವನ್ನಪ್ಪಿವೆ. ಈ ವೈರಸ್ ಬಹಳ ವೇಗವಾಗಿ ಹರಡುತ್ತದೆ ಮತ್ತು ಅದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಬೆಕ್ಕುಗಳನ್ನು ಸಾಕುವವರು ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ. ಎಫ್​ಪಿವಿ ವೈರಸ್ ಕುರಿತ ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

ಪ್ರಾಣಿ ಪ್ರಿಯರೇ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ಎಫ್​ಪಿವಿ ವೈರಸ್
ಸಾಂದರ್ಭಿಕ ಚಿತ್ರ
Follow us
ಭೀಮೇಶ್​​ ಪೂಜಾರ್
| Updated By: Ganapathi Sharma

Updated on: Mar 25, 2025 | 9:31 AM

ರಾಯಚೂರು, ಮಾರ್ಚ್ 25: ಹಕ್ಕಿ ಜ್ವರದ ಆತಂಕದಿಂದ ಇನ್ನೇನು ಕರ್ನಾಟಕ (Karnataka) ಜನತೆ ನಿಟ್ಟುಸಿರುಬಿಟ್ಟರು ಎನ್ನುವಾಗಲೇ ಮತ್ತೊಂದು ಮಾರಕ ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ (Cats) ವಕ್ಕರಿಸಿದ ಮಾರಣಾಂತಿಕ ಎಫ್​ಪಿವಿ ವೈರಸ್ (Feline panleukopenia virus) ಸೋಂಕು ಹರಡುತ್ತಿರುವುದು ತಿಳಿದುಬಂದಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ. ವೈರಸ್ ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ ಬೆಕ್ಕುಗಳು. ಜಿಲ್ಲೆಯಲ್ಲಷ್ಟೇ ಅಲ್ಲದೆ, ರಾಜ್ಯದ ವಿವಿದೆಡೆ ವೈರಸ್ ಸೋಂಕು ಹರಡುತ್ತಿದೆ. ರಾಯಚೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ ನೂರಕ್ಕೂ ಹೆಚ್ಚು ಬೆಕ್ಕುಗಳಲ್ಲಿ ವೈರಾಣು ಪತ್ತೆಯಾಗಿದೆ.

ವೈರಸ್ ಸೋಂಕು ತಗುಲಿದಲ್ಲಿ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಸೋಂಕು ತಗುಲಿದೆ 100 ಬೆಕ್ಕುಗಳಲ್ಲಿ 99 ಸಾವನ್ನಪ್ಪುವ ಸಾಧ್ಯತೆ ಇದೆ.

ಅತಿ ವೇಗದಲ್ಲಿ ಹರಡುತ್ತೆ ಎಫ್​ಪಿವಿ ವೈರಸ್

ಒಂದು ಕಡೆ 10 ಬೆಕ್ಕುಗಳಿದ್ದರೆ, ಆ ಪೈಕಿ ಒಂದು ಬೆಕ್ಕಿಗೆ ವೈರಸ್ ಸೋಂಕು ತಗಲಿದರೆ ಕೆಲವೇ ಸೆಕೆಂಡುಗಳಲ್ಲಿ ಸಮೀಪದ ಎಲ್ಲಾ ಬೆಕ್ಕುಗಳಿಗೂ ವೈರಸ್ ಹರಡುತ್ತದೆ. ಇದರಿಂದಾಗಿ ಬೆಕ್ಕು ಸಾಕಾಣಿಕೆ ಮಾಡುವವರಿಗೆಬೆ, ಕ್ಕುಗಳನ್ನು ಹೊಂದಿರುವವರಿಗೆ ಆತಂಕ ಉಂಟಾಗಿದೆ.

ಇದನ್ನೂ ಓದಿ
Image
ನಿರ್ಗತಿಕರ ಆಶ್ರಮಕ್ಕೆ ಹೆಗಲಾದ ರಾಯಚೂರಿನ ಪೊಲೀಸ್ ಪಡೆ: ಫೋಟೋಸ್​ ನೋಡಿ
Image
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
Image
ರಾಯಚೂರಿನ ಈ ಹೊಸ ತಾಲ್ಲೂಕಿಗೆ ಹೋಗಲು ಜನರು ಹಿಂದೇಟು: ಕಾರಣವೇನು?
Image
ಮಕ್ಕಳಾಗದ ಕೊರಗು: ಬಡ ಮಕ್ಕಳ ಬಾಳಿಗೆ ಬೆಳಕಾದ ರಾಯಚೂರಿನ ಶಿಕ್ಷಕ ದಂಪತಿ

ಎಫ್​ಪಿವಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ

ಕೊರೊನಾ ವೈರಸ್ ರೀತಿ ಎಫ್​ಪಿವಿ ವೈರಾಣು ಸೋಂಕಿಗೂ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ.

ರಾಯಚೂರಿನಲ್ಲಿ ಸದ್ಯ 150 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 100 ಕ್ಕೂ ಹೆಚ್ಚು ಬೆಕ್ಕುಗಳು ಚಿಕಿತ್ಸೆ ಫಲಕಾರಿಯಾಗದೇ ಈಗಾಗಲೇ ಮೃತಪಟ್ಟಿವೆ. ಬೀದಿ ಬೆಕ್ಕುಗಳು, ಸಾಕು ಬೆಕ್ಕುಗಳಲ್ಲಿ ವೈರಸ್ ಪತ್ತೆಯಾಗಿದೆ.

ಎಫ್​ಪಿವಿ ವೈರಸ್ ಸೋಂಕಿನ ಲಕ್ಷಣಗಳೇನು?

ಎಫ್​ಪಿವಿ ವೈರಸ್​ ತಗುಲಿದರೆ ಮೂರು ಹಂತದಲ್ಲಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಮೊದಲ ಹಂತದಲ್ಲಿ ವಾಂತಿ, ಬೇಧಿ, ನಿರ್ಜಲೀಕರಣ ಉಂಟಾಗುತ್ತದೆ. ಎರಡನೆ ಹಂತದಲ್ಲಿ ಹೆಚ್ಚಿನ ತಾಪದೊಂದಿಗೆ ಜ್ವರ ಕಾಣಿಸಿಕೊಳ್ಳುತ್ತದೆ. ಮೂರನೇ ಹಂತದಲ್ಲಿ ನಿಶ್ಯಕ್ತಿ, ಖಿನ್ನತೆ ಉಂಟಾಗುತ್ತದೆ.

ಇದನ್ನೂ ಓದಿ: ನಿರ್ಗತಿಕರ ಆಶ್ರಮಕ್ಕೆ ಹೆಗಲಾದ ರಾಯಚೂರಿನ ಪೊಲೀಸ್ ಪಡೆ: ಫೋಟೋಸ್​ ನೋಡಿ

ಎಫ್​ಪಿವಿ ವೈರಸ್​ನಿಂದ ಮನುಷ್ಯರಿಗೂ ಸಮಸ್ಯೆ ಇದೆಯೇ?

ಎಫ್​ಪಿವಿ ವೈರಸ್ ಮಾನವರಿಗೆ ಮತ್ತು ನಾಯಿಗಳಿಗೆ ಅಷ್ಟಾಗಿ ಅಪಾಯ ಉಂಟು ಮಾಡುವುದಿಲ್ಲ ಎಂದು ಎಡಿನ್ಬರ್ಗ್​ ಅನಿಮಲ್ ಹಾಸ್ಪಿಟಲ್ ತಜ್ಞರು ತಿಳಿಸಿದ್ದಾರೆ. ಆದಾಗ್ಯೂ, ಮಾನವರು ಧರಿಸಿದ ಬಟ್ಟೆ, ಬೂಟುಗಳು ಅಥವಾ ಕೈಗಳ ಸಂಪರ್ಕಕ್ಕೆ ಬಂದ ವೈರಸ್ ಆ ಮೂಲಕ ಬೆಕ್ಕುಗಳಿಗೆ ಹರಡುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ