AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲ್ಬರ್ಗ ವಿಶ್ವವಿದ್ಯಾಲಯ ಅಂತಿಮ ಸೆಮಿಸ್ಟರ್‌ ಫಲಿತಾಂಶ ವಿಳಂಬ; ಬಿ.ಇಡಿ ಪ್ರವೇಶದಿಂದ ವಂಚಿತರಾದ ವಿದ್ಯಾರ್ಥಿಗಳು

ಗುಲ್ಬರ್ಗ ವಿಶ್ವವಿದ್ಯಾಲಯ ಪ್ರಸಕ್ತ ಸಾಲಿನಲ್ಲಿ ಪದವಿ ಪರೀಕ್ಷಾ ಫಲಿತಾಂಶ ಸಕಾಲಕ್ಕೆ ಪ್ರಕಟಿಸದೆ ತಡಮಾಡಿದೆ. ಈ ಕಾರಣ ಸಾವಿರಾರು ವಿದ್ಯಾರ್ಥಿಗಳು ಬಿ.ಇಡಿ ಪ್ರವೇಶದ ಅವಕಾಶದಿಂದ ವಂಚಿತರಾಗಿದ್ದಾರೆ.

ಗುಲ್ಬರ್ಗ ವಿಶ್ವವಿದ್ಯಾಲಯ ಅಂತಿಮ ಸೆಮಿಸ್ಟರ್‌ ಫಲಿತಾಂಶ ವಿಳಂಬ; ಬಿ.ಇಡಿ ಪ್ರವೇಶದಿಂದ ವಂಚಿತರಾದ ವಿದ್ಯಾರ್ಥಿಗಳು
ಗುಲ್ಬರ್ಗ ವಿಶ್ವವಿದ್ಯಾಲಯ
TV9 Web
| Updated By: ಆಯೇಷಾ ಬಾನು|

Updated on:Jan 23, 2023 | 3:08 PM

Share

ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದ ಧೋರಣೆಯಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಈಗ ಅತಂತ್ರದಲ್ಲಿರೊ ಆರೋಪ ಕೇಳಿ ಬಂದಿದೆ. ಗುಲ್ಬರ್ಗ ವಿಶ್ವವಿದ್ಯಾಲಯದ ಎಡವಟ್ಟಿನ ವಿರುದ್ಧ ವಿದ್ಯಾರ್ಥಿಗಳು ಕಿಡಿಕಾರುತ್ತಿದ್ದಾರೆ‌. 2022ನೇ ಸಾಲಿನ ಪದವೀಧರರ 6 ನೇ ಸೆಮಿಸ್ಟರ್ ಫಲಿತಾಂಶವನ್ನ ವಿಳಂಬವಾಗಿ ಪ್ರಕಟಿಸಿರುವುದಕ್ಕೆ ಹಾಗೂ ಮೂಲ ಅಂಕಪಟ್ಟಿಯಿಲ್ಲದ ಕಾರಣಕ್ಕೆ ಈಗ ಬಿ.ಇಡಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.ಗುಲ್ಬರ್ಗ ವಿಶ್ವವಿದ್ಯಾಲಯದ ಎಡವಟ್ಟಿಗೆ ಬಿ ಇಡಿ ಪ್ರವೇಶಕ್ಕೆ ಮುಂದಾಗಿದ್ದ ವಿದ್ಯಾರ್ಥಿಗಳೀಗ ಮುಂದಿನ ಶೈಕ್ಷಣಿಕ ವರ್ಷದವರೆಗೂ ಕಾಯುವುದು ಅನಿವಾರ್ಯವಾಗಿದೆ.

ಈ ಸಾಲಿನಲ್ಲಿ ಬಿಎ, ಬಿಕಾಂ, ಬಿಎಸ್ಸಿ ಪರೀಕ್ಷೆಗಳ ಫಲಿತಾಂಶವನ್ನು ಸಕಾಲಕ್ಕೆ ಪ್ರಕಟಿಸದ ಕಾರಣ ಬಿ.ಇಡಿ ಪ್ರವೇಶದಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಿ.ಇಡಿ ಪ್ರವೇಶಕ್ಕೆ ದಾಖಲೆ ಪರಿಶೀಲನೆ ಹಾಗೂ ತಿದ್ದುಪಡಿಗೆ ಜನವರಿ 11 ಕೊನೆ ದಿನವಾಗಿತ್ತು‌. ಆದರೆ ಗುಲ್ಬರ್ಗ ವಿಶ್ವವಿದ್ಯಾಲಯ ಜನವರಿ 14 ರಂದು ಪದವಿ ವಿಭಾಗದ 6 ನೇ ಸೆಮಿಸ್ಟರ್ ಫಲಿತಾಂಶ ಬಿಡುಗಡೆಯಾಗಿತ್ತು. ಇದೇ ಕಾರಣಕ್ಕೆ ಜನವರಿ 11 ರಂದು ದಾಖಲಾತಿ ಪರಿಶೀಲನೆಯ ತಿದ್ದುಪಡಿಯ ಅವಕಾಶ ಕೊನೆಗೊಂಡಿತ್ತು. ಈ ಹಿನ್ನೆಲೆ ಆರನೇ ಸೆಮಿಸ್ಟರ್ ಫಲಿತಾಂಶ ವಿಳಂಬವಾಗಿದ್ದಕ್ಕೆ ಬಿಇಡಿ ಪ್ರವೇಶದ ಕನಸು ಕಂಡಿದ್ದವರು ಸಂಕಷ್ಟಕ್ಕೆ ಸಿಲುಕಿದ್ದಾರೆ‌.

ಇದನ್ನೂ ಓದಿ: Human Powered Vehicle: ಮಕ್ಕಳ ಆಟಿಕೆ ಕಾರು ರಸ್ತೆಗೆ ಬಂದ್ಬಿಡ್ತು ಅನ್ಕೊಂಡ್ರಾ ಅಲ್ಲ, ಇದು ಬೆಂಗಳೂರಲ್ಲಿ ಕಂಡ ಹ್ಯೂಮನ್ ಪವರ್ಡ್​ ವೆಹಿಕಲ್

ಪದವಿ ಪರೀಕ್ಷೆಯ 6ನೇ ಸೆಮಿಸ್ಟರ್, ಫಲಿತಾಂಶ ವಿಳಂಬವಾಗಿ ಪ್ರಕಟವಾಗಿರೊ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಗುಲ್ಬರ್ಗ ವಿವಿಯಲ್ಲಿ ಪದವಿ ಮುಗಿಸಿ ರಾಜ್ಯದ ಬೇರೆ ವಿವಿಯಲ್ಲಿ ಸ್ನಾತಕೋತ್ತರ ಕೋರ್ಸ್‌ ಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು, ಪಲಿತಾಂಶ ಬಾರದೆ ಒಂದು ವರ್ಷ ವ್ಯರ್ಥವಾಗಿ ಕಳೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿದ್ದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಕಾಲೇಜುಗಳು ನೂತನ ರಾಯಚೂರು ವಿವಿಗೆ ಸೇರ್ಪಡೆಯಾಗಿದ್ದರೂ, ಅದಕ್ಕೂ ಮುನ್ನ ಗುಲ್ಬರ್ಗ ವಿವಿ ವ್ಯಾಪ್ತಿಯಲ್ಲಿದ್ದ ವಿದ್ಯಾರ್ಥಿಗಳ ಸಮಸ್ಯೆಯ ಸುಳಿಗೆ ಸಿಲುಕಿದ್ದಾರೆ.

2 ಲಕ್ಷದ ವರೆಗೆ ಮ್ಯಾನೇಜೆಂಟ್ ಸೀಟ್?

ಜಿಲ್ಲೆಯಲ್ಲಿ 50 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪದವಿ ಮುಗಿಸಿ ಬಿ.ಇಡಿ ಮಾಡಲು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅವರಿಗೆ 6ನೇ ಸೆಮ್‌ನ ಅಂಕಪಟ್ಟಿ ಬಂದಿಲ್ಲ. ಇದರಿಂದ ಸರ್ಕಾರಿ ಸೀಟು ಕೈತಪ್ಪುವ ಭೀತಿ ಎದುರಾಗಿದೆ. ಮ್ಯಾನೇಜೆಂಟ್ ಸೀಟ್ ಎರಡು ವರ್ಷಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಭರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:33 pm, Mon, 23 January 23

ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ: ಎಲ್ಲವೂ ಬಂದ್​ ಬಂದ್
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ