AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 59 ಮಕ್ಕಳ ರಕ್ಷಣೆ

ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದ ಸುಮಾರು 59 ಮಕ್ಕಳನ್ನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಮತ್ತು ಸಿರವಾರ ಕ್ರಾಸ್ ಬಳಿ ರಕ್ಷಣೆ ಮಾಡಲಾಗಿದೆ. ಜೊತೆಗೆ ಬಾಲ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ 5 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಯಚೂರಿನಲ್ಲಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 59 ಮಕ್ಕಳ ರಕ್ಷಣೆ
ಮಕ್ಕಳನ್ನು ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದರು
TV9 Web
| Edited By: sandhya thejappa|

Updated on: Aug 26, 2021 | 11:55 AM

Share

ರಾಯಚೂರು: ಸರ್ಕಾರ 14 ವರ್ಷದವರೆಗೆ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಬೇಕು. ಜೊತೆಗೆ ಈ ಅವಧಿಯಲ್ಲಿ ಮಕ್ಕಳು ದುಡಿಯುವಂತಿಲ್ಲ ಎಂದು ಭಾರತ ಸಂವಿಧಾನ ತಿಳಿಸಿದೆ. ತಮ್ಮ ತಮ್ಮ ಮನೆಗಳಲ್ಲಿ ಕೆಲಸಗಳನ್ನು ಮಾಡಬಹುದು. ಆದರೆ ಒತ್ತಾಯದಿಂದ ಕೆಲಸಕ್ಕೆ ತಳ್ಳಬಾರದು. ಇದು ಕಾನೂನಿಗೆ ವಿರುದ್ಧವಾಗಿದೆ. ಹೀಗಿದ್ದೂ, ಇಂದು ರಾಯಚೂರಿನಲ್ಲಿ ಸುಮಾರು 59 ಮಕ್ಕಳನ್ನು ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಮಕ್ಕಳನ್ನು ರಕ್ಷಣೆ ಮಾಡಿದೆ.

ಕೂಲಿ ಕೆಲಸಕಕ್ಕೆ ಕರೆದೊಯ್ಯುತ್ತಿದ್ದ ಸುಮಾರು 59 ಮಕ್ಕಳನ್ನ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಮತ್ತು ಸಿರವಾರ ಕ್ರಾಸ್ ಬಳಿ ರಕ್ಷಣೆ ಮಾಡಲಾಗಿದೆ. ಜೊತೆಗೆ ಬಾಲ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ 5 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಗೂಡ್ಸ್ ವಾಹನಗಳಲ್ಲಿ ಅಕ್ರಮವಾಗಿ ಮಕ್ಕಳನ್ನ ಕೂಲಿ ಕೆಲಸಕ್ಕೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಕ್ಕಳ ರಕ್ಷಣ ಇಲಾಖೆಯ ಜಿಲ್ಲಾಧಿಕಾರಿ ಮಂಜುನಾಥ್ ಮತ್ತು ಅವರ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.

5 ವಾಹನಗಳನ್ನ ಜಪ್ತಿ ಮಾಡಿ ಸಿರವಾರ ಠಾಣೆಯಲ್ಲಿ ಮಕ್ಕಳ ಕಳ್ಳ ಸಾಗಾಣಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಧಿಕಾರಿಗಳು ಮಕ್ಕಳನ್ನು ರಕ್ಷಿಸಿ, ಅವರ ಪೋಷಕರಿಗೆ ಹಸ್ತಾಂತರಿಸಿದರು. ಈ ವೇಳೆ ಮಕ್ಕಳನ್ನ ಕೂಲಿ ಕೆಲಸಕ್ಕೆ ಕಳುಹಿಸದಂತೆ ಪೋಷಕರಿಗೆ ಎಚ್ಚರಿಕೆ ನೀಡಿದರು. ಮಕ್ಕಳನ್ನ ಕೂಲಿ ಕೆಲಸಕ್ಕೆ ತಳ್ಳುತ್ತಿರುವ ಬಗ್ಗೆ ಟಿವಿ9 ಮಂಥನ ಕಾರ್ಯಕ್ರಮದಲ್ಲಿ ವಿಸ್ತೃತ ವರದಿ ಪ್ರಸಾರವಾಗಿತ್ತು. ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಜಿಲ್ಲೆಯ ಹಲವೆಡೆ ಕೂಲಿ ಕೆಲಸಕ್ಕೆ ತೆರಳುವ ಮಕ್ಕಳನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ

ಮುಂದುವರೆದ ತಾಲಿಬಾನ್ ಕ್ರೌರ್ಯ; ಕಾಬೂಲ್​ನಲ್ಲಿ ಪತ್ರಕರ್ತನ ಹತ್ಯೆ

ಕುಖ್ಯಾತ ಸರಗಳ್ಳರ ಗ್ಯಾಂಗ್ ಬಂಧನ ಪ್ರಕರಣ; ಬಂಧನದ ಹಿಂದೆ ಇದೆ ರೋಚಕ ಸ್ಟೋರಿ

(Department of Child Protection has rescued 59 children who were taken to work in raichur)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್