AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ

ಅಕ್ರಮ ಮರಳು ಅಡ್ಡೆ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರು ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರ ನಡೆದಿದೆ. ಇದರ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಅವರು ಆರೋಪ ಮಾಡಿದ್ದಾರೆ.

Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ
ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​
Rakesh Nayak Manchi
|

Updated on: Jun 23, 2023 | 9:08 AM

Share

ರಾಯಚೂರು: ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಮಾಹಿತಿ ತಿಳಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ (Kariyamma Nayak) ಅವರು ತಮ್ಮ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ದಂಧೆ (Sand Mining) ನಡೆಸಲಾಗುತ್ತಿತ್ತು. ಈ ಬಗ್ಗೆ ತಿಳಿಯುತ್ತಿದ್ದಂತೆ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಶಾಸಕಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ದೇವದುರ್ಗ (Devadurga) ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಜೆಸಿಬಿ, ಮೂರು ಟಿಪರ್​​ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮರಳು ದಂಧೆಯಲ್ಲಿ ಅಧಿಕಾರಿಗಳೇ ಶಾಮೀಲಾಗಿದ್ದಾರೆಂದು ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರಿಯಮ್ಮ ನಾಯಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Illegal Sand Mafia: ಭೀಮಾ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್​​ಕಾನ್​ಸ್ಟೇಬಲ್​ ಭಯಾನಕ ಹತ್ಯೆ

ಕಾರ್ಯಕ್ರಮ ಮುಗಿಸಿ ಹೋಗೊವಾಗ ಮರಳು ಟಿಪ್ಪರ್ ಅಡ್ಡಹಾಕಿದ ಬಗ್ಗೆ ಮಾತನಾಡಿದ ಶಾಸಕಿ ಕರಿಯಮ್ಮ ನಾಯಕ್, ನನ್ನನ್ನ ಲಾರಿ ಹತ್ತಿಸಿ ಸಾಯಿಸುತ್ತೇನೆ ಅಂತಾರೆ. ತಾಕತ್ ಇದ್ದರೆ ಬನ್ನಿ, ಇಲ್ಲೆ ಇರುತ್ತೇನೆ ಬಂದು ಕೊಲ್ಲಿ ಅಂತ ಚಾಲೆಂಜ್ ಹಾಕಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಶಾಸಕರಿಗೆ (ಶಿವನಗೌಡ ನಾಯಕ್)ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೆ, ಅಧಿಕಾರಿಗಳೇ ಅಕ್ರಮ ಮರಳು ದಂಧೆಗೆ ಹೊಣೆಗಾರರಾಗಿದ್ದು, ಈ ಸಂಬಂಧ ಕ್ರಮ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?