AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ

ಅಕ್ರಮ ಮರಳು ಅಡ್ಡೆ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರು ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರ ನಡೆದಿದೆ. ಇದರ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಅವರು ಆರೋಪ ಮಾಡಿದ್ದಾರೆ.

Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ
ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​
Rakesh Nayak Manchi
|

Updated on: Jun 23, 2023 | 9:08 AM

Share

ರಾಯಚೂರು: ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಮಾಹಿತಿ ತಿಳಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ (Kariyamma Nayak) ಅವರು ತಮ್ಮ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ದಂಧೆ (Sand Mining) ನಡೆಸಲಾಗುತ್ತಿತ್ತು. ಈ ಬಗ್ಗೆ ತಿಳಿಯುತ್ತಿದ್ದಂತೆ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಶಾಸಕಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ದೇವದುರ್ಗ (Devadurga) ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಜೆಸಿಬಿ, ಮೂರು ಟಿಪರ್​​ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮರಳು ದಂಧೆಯಲ್ಲಿ ಅಧಿಕಾರಿಗಳೇ ಶಾಮೀಲಾಗಿದ್ದಾರೆಂದು ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರಿಯಮ್ಮ ನಾಯಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Illegal Sand Mafia: ಭೀಮಾ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್​​ಕಾನ್​ಸ್ಟೇಬಲ್​ ಭಯಾನಕ ಹತ್ಯೆ

ಕಾರ್ಯಕ್ರಮ ಮುಗಿಸಿ ಹೋಗೊವಾಗ ಮರಳು ಟಿಪ್ಪರ್ ಅಡ್ಡಹಾಕಿದ ಬಗ್ಗೆ ಮಾತನಾಡಿದ ಶಾಸಕಿ ಕರಿಯಮ್ಮ ನಾಯಕ್, ನನ್ನನ್ನ ಲಾರಿ ಹತ್ತಿಸಿ ಸಾಯಿಸುತ್ತೇನೆ ಅಂತಾರೆ. ತಾಕತ್ ಇದ್ದರೆ ಬನ್ನಿ, ಇಲ್ಲೆ ಇರುತ್ತೇನೆ ಬಂದು ಕೊಲ್ಲಿ ಅಂತ ಚಾಲೆಂಜ್ ಹಾಕಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಶಾಸಕರಿಗೆ (ಶಿವನಗೌಡ ನಾಯಕ್)ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೆ, ಅಧಿಕಾರಿಗಳೇ ಅಕ್ರಮ ಮರಳು ದಂಧೆಗೆ ಹೊಣೆಗಾರರಾಗಿದ್ದು, ಈ ಸಂಬಂಧ ಕ್ರಮ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!