AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ

ಅಕ್ರಮ ಮರಳು ಅಡ್ಡೆ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರು ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರ ನಡೆದಿದೆ. ಇದರ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಅವರು ಆರೋಪ ಮಾಡಿದ್ದಾರೆ.

Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ
ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​
Rakesh Nayak Manchi
|

Updated on: Jun 23, 2023 | 9:08 AM

Share

ರಾಯಚೂರು: ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಮಾಹಿತಿ ತಿಳಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ (Kariyamma Nayak) ಅವರು ತಮ್ಮ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ದಂಧೆ (Sand Mining) ನಡೆಸಲಾಗುತ್ತಿತ್ತು. ಈ ಬಗ್ಗೆ ತಿಳಿಯುತ್ತಿದ್ದಂತೆ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಶಾಸಕಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ದೇವದುರ್ಗ (Devadurga) ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಜೆಸಿಬಿ, ಮೂರು ಟಿಪರ್​​ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮರಳು ದಂಧೆಯಲ್ಲಿ ಅಧಿಕಾರಿಗಳೇ ಶಾಮೀಲಾಗಿದ್ದಾರೆಂದು ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರಿಯಮ್ಮ ನಾಯಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Illegal Sand Mafia: ಭೀಮಾ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್​​ಕಾನ್​ಸ್ಟೇಬಲ್​ ಭಯಾನಕ ಹತ್ಯೆ

ಕಾರ್ಯಕ್ರಮ ಮುಗಿಸಿ ಹೋಗೊವಾಗ ಮರಳು ಟಿಪ್ಪರ್ ಅಡ್ಡಹಾಕಿದ ಬಗ್ಗೆ ಮಾತನಾಡಿದ ಶಾಸಕಿ ಕರಿಯಮ್ಮ ನಾಯಕ್, ನನ್ನನ್ನ ಲಾರಿ ಹತ್ತಿಸಿ ಸಾಯಿಸುತ್ತೇನೆ ಅಂತಾರೆ. ತಾಕತ್ ಇದ್ದರೆ ಬನ್ನಿ, ಇಲ್ಲೆ ಇರುತ್ತೇನೆ ಬಂದು ಕೊಲ್ಲಿ ಅಂತ ಚಾಲೆಂಜ್ ಹಾಕಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಶಾಸಕರಿಗೆ (ಶಿವನಗೌಡ ನಾಯಕ್)ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೆ, ಅಧಿಕಾರಿಗಳೇ ಅಕ್ರಮ ಮರಳು ದಂಧೆಗೆ ಹೊಣೆಗಾರರಾಗಿದ್ದು, ಈ ಸಂಬಂಧ ಕ್ರಮ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ