Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ

ಅಕ್ರಮ ಮರಳು ಅಡ್ಡೆ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರು ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರ ನಡೆದಿದೆ. ಇದರ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಅವರು ಆರೋಪ ಮಾಡಿದ್ದಾರೆ.

Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ
ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​
Rakesh Nayak Manchi

Updated on: Jun 23, 2023 | 9:08 AM

ರಾಯಚೂರು: ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಮಾಹಿತಿ ತಿಳಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ (Kariyamma Nayak) ಅವರು ತಮ್ಮ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ದಂಧೆ (Sand Mining) ನಡೆಸಲಾಗುತ್ತಿತ್ತು. ಈ ಬಗ್ಗೆ ತಿಳಿಯುತ್ತಿದ್ದಂತೆ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಶಾಸಕಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ದೇವದುರ್ಗ (Devadurga) ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಜೆಸಿಬಿ, ಮೂರು ಟಿಪರ್​​ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮರಳು ದಂಧೆಯಲ್ಲಿ ಅಧಿಕಾರಿಗಳೇ ಶಾಮೀಲಾಗಿದ್ದಾರೆಂದು ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರಿಯಮ್ಮ ನಾಯಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Illegal Sand Mafia: ಭೀಮಾ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್​​ಕಾನ್​ಸ್ಟೇಬಲ್​ ಭಯಾನಕ ಹತ್ಯೆ

ಕಾರ್ಯಕ್ರಮ ಮುಗಿಸಿ ಹೋಗೊವಾಗ ಮರಳು ಟಿಪ್ಪರ್ ಅಡ್ಡಹಾಕಿದ ಬಗ್ಗೆ ಮಾತನಾಡಿದ ಶಾಸಕಿ ಕರಿಯಮ್ಮ ನಾಯಕ್, ನನ್ನನ್ನ ಲಾರಿ ಹತ್ತಿಸಿ ಸಾಯಿಸುತ್ತೇನೆ ಅಂತಾರೆ. ತಾಕತ್ ಇದ್ದರೆ ಬನ್ನಿ, ಇಲ್ಲೆ ಇರುತ್ತೇನೆ ಬಂದು ಕೊಲ್ಲಿ ಅಂತ ಚಾಲೆಂಜ್ ಹಾಕಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಶಾಸಕರಿಗೆ (ಶಿವನಗೌಡ ನಾಯಕ್)ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೆ, ಅಧಿಕಾರಿಗಳೇ ಅಕ್ರಮ ಮರಳು ದಂಧೆಗೆ ಹೊಣೆಗಾರರಾಗಿದ್ದು, ಈ ಸಂಬಂಧ ಕ್ರಮ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us