AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ತರಗತಿ ವೇಳೆಯೇ ಮೇಲ್ಛಾವಣಿ ಕುಸಿತ; ಓರ್ವ ವಿದ್ಯಾರ್ಥಿನಿಗೆ ಗಾಯ

ದೇವದುರ್ಗ(Devadurga)ದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲೇ  ಸೀಲಿಂಗ್ ಗಾರೆ(ಮೇಲ್ಚಾವಣಿ)ಕಿತ್ತುಬಿದ್ದ ಘಟನೆ ನಡೆದಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಶ್ರೀದೇವಿ ಎಂಬುವವರ ಬಲಕಾಲಿನ ಬೆರಳು ಕಟ್ ಆಗಿದೆ.

ರಾಯಚೂರು: ತರಗತಿ ವೇಳೆಯೇ ಮೇಲ್ಛಾವಣಿ ಕುಸಿತ; ಓರ್ವ ವಿದ್ಯಾರ್ಥಿನಿಗೆ ಗಾಯ
ದೇವದುರ್ಗ ಸರ್ಕಾರಿ ಶಾಲೆ
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 25, 2024 | 6:53 PM

Share

ರಾಯಚೂರು, ಜ.25: ಜಿಲ್ಲೆಯ ದೇವದುರ್ಗ(Devadurga)ದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲೇ  ಸೀಲಿಂಗ್ ಗಾರೆ(ಮೇಲ್ಚಾವಣಿ)ಕಿತ್ತುಬಿದ್ದ(Roof Collapse) ಘಟನೆ ನಡೆದಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಶ್ರೀದೇವಿ ಎಂಬುವವರ ಬಲಕಾಲಿನ ಬೆರಳು ಕಟ್ ಆಗಿದೆ. ಕೂಡಲೇ ವಿದ್ಯಾರ್ಥಿನಿಗೆ ರಾಯಚೂರಿನ ರಿಮ್ಸ್ ‌ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ಇನ್ನು ರಾಜ್ಯದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಟಿವಿ9 ವರದಿ ಮಾಡುತ್ತಾ ಬಂದಿದ್ದು, ಇದೀಗ ವಿದ್ಯಾರ್ಥಿನಿ ಕಾಲು ಬೆರಳೆ ಕಟ್​ ಆಗಿದೆ. ಹಾಳಾದ ಶಾಲಾ ಕಟ್ಟಡದಲ್ಲಿ ನಿತ್ಯ ಮಕ್ಕಳಿಗೆ ಬೋಧನೆ ಮಾಡಲಾಗುತ್ತಿದ್ದು, ಜೀವ ಭಯದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಪಾಠ ಕೇಳುವಂತಾಗಿದೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ: ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿತ; ಐದು ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯ

ಸ್ಥಳಕ್ಕೆ ಬಂದ ಬಿಇಓ

ಇನ್ನು ಘಟನೆ ಬಳಿಕ ದೇವದುರ್ಗ ತಾಲ್ಲೂಕು ಬಿಇಓ ಸುಖದೇವ್ ಹಾಗೂ ಇತರೆ ಅಧಿಕಾರಿಗಳು ಓಡೋಡಿ ಬಂದಿದ್ದಾರೆ. ಈ ಕುರಿತು ಮಾತನಾಡಿದ ಬಿಇಓ ‘ಕಳೆದ ವರ್ಷವೇ ಶಾಲೆ ಸ್ಥಳಾಂತರಿಸಲು ಆದೇಶಿಸಿದ್ದೆ. ಅದರಂತೆ ಕಟ್ಟಡ ಶಿಥಿಲಗೊಂಡ ಬಳಿಕ ಉರ್ದು ಶಾಲೆ ಬಂದ್ ಆಗಿ, ಬೇರೆಡೆ ಶಿಫ್ಟ್ ಮಾಡಲಾಗಿದೆ. ಆದರೆ, ಬಾಲಕಿಯರ ಕನ್ನಡ ಶಾಲೆ ಅಲ್ಲೆ‌ ಮುಂದುವರೆಸಲಾಗಿದೆ. ಆ ಶಾಲೆ ಮುಖ್ಯಗುರುಗಳಾದ ದೇವರಾಜ್ ಅವರು ಅಲ್ಲೇ ಯಾಕೆ ಕಂಟಿನ್ಯೂ ಮಾಡಿದರೂ ಗೊತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು