ರಾಯಚೂರು: ತರಗತಿ ವೇಳೆಯೇ ಮೇಲ್ಛಾವಣಿ ಕುಸಿತ; ಓರ್ವ ವಿದ್ಯಾರ್ಥಿನಿಗೆ ಗಾಯ

ದೇವದುರ್ಗ(Devadurga)ದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲೇ  ಸೀಲಿಂಗ್ ಗಾರೆ(ಮೇಲ್ಚಾವಣಿ)ಕಿತ್ತುಬಿದ್ದ ಘಟನೆ ನಡೆದಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಶ್ರೀದೇವಿ ಎಂಬುವವರ ಬಲಕಾಲಿನ ಬೆರಳು ಕಟ್ ಆಗಿದೆ.

ರಾಯಚೂರು: ತರಗತಿ ವೇಳೆಯೇ ಮೇಲ್ಛಾವಣಿ ಕುಸಿತ; ಓರ್ವ ವಿದ್ಯಾರ್ಥಿನಿಗೆ ಗಾಯ
ದೇವದುರ್ಗ ಸರ್ಕಾರಿ ಶಾಲೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jan 25, 2024 | 6:53 PM

ರಾಯಚೂರು, ಜ.25: ಜಿಲ್ಲೆಯ ದೇವದುರ್ಗ(Devadurga)ದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲೇ  ಸೀಲಿಂಗ್ ಗಾರೆ(ಮೇಲ್ಚಾವಣಿ)ಕಿತ್ತುಬಿದ್ದ(Roof Collapse) ಘಟನೆ ನಡೆದಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಶ್ರೀದೇವಿ ಎಂಬುವವರ ಬಲಕಾಲಿನ ಬೆರಳು ಕಟ್ ಆಗಿದೆ. ಕೂಡಲೇ ವಿದ್ಯಾರ್ಥಿನಿಗೆ ರಾಯಚೂರಿನ ರಿಮ್ಸ್ ‌ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ಇನ್ನು ರಾಜ್ಯದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಟಿವಿ9 ವರದಿ ಮಾಡುತ್ತಾ ಬಂದಿದ್ದು, ಇದೀಗ ವಿದ್ಯಾರ್ಥಿನಿ ಕಾಲು ಬೆರಳೆ ಕಟ್​ ಆಗಿದೆ. ಹಾಳಾದ ಶಾಲಾ ಕಟ್ಟಡದಲ್ಲಿ ನಿತ್ಯ ಮಕ್ಕಳಿಗೆ ಬೋಧನೆ ಮಾಡಲಾಗುತ್ತಿದ್ದು, ಜೀವ ಭಯದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಪಾಠ ಕೇಳುವಂತಾಗಿದೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ: ಶಾಲೆಯ ಕಟ್ಟಡದ ಮೇಲ್ಛಾವಣಿ ಪ್ಲಾಸ್ಟರಿಂಗ್ ಕುಸಿತ; ಐದು ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯ

ಸ್ಥಳಕ್ಕೆ ಬಂದ ಬಿಇಓ

ಇನ್ನು ಘಟನೆ ಬಳಿಕ ದೇವದುರ್ಗ ತಾಲ್ಲೂಕು ಬಿಇಓ ಸುಖದೇವ್ ಹಾಗೂ ಇತರೆ ಅಧಿಕಾರಿಗಳು ಓಡೋಡಿ ಬಂದಿದ್ದಾರೆ. ಈ ಕುರಿತು ಮಾತನಾಡಿದ ಬಿಇಓ ‘ಕಳೆದ ವರ್ಷವೇ ಶಾಲೆ ಸ್ಥಳಾಂತರಿಸಲು ಆದೇಶಿಸಿದ್ದೆ. ಅದರಂತೆ ಕಟ್ಟಡ ಶಿಥಿಲಗೊಂಡ ಬಳಿಕ ಉರ್ದು ಶಾಲೆ ಬಂದ್ ಆಗಿ, ಬೇರೆಡೆ ಶಿಫ್ಟ್ ಮಾಡಲಾಗಿದೆ. ಆದರೆ, ಬಾಲಕಿಯರ ಕನ್ನಡ ಶಾಲೆ ಅಲ್ಲೆ‌ ಮುಂದುವರೆಸಲಾಗಿದೆ. ಆ ಶಾಲೆ ಮುಖ್ಯಗುರುಗಳಾದ ದೇವರಾಜ್ ಅವರು ಅಲ್ಲೇ ಯಾಕೆ ಕಂಟಿನ್ಯೂ ಮಾಡಿದರೂ ಗೊತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us