AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಸರ್ಕಾರಿ ಅಧಿಕಾರಿಗಳಿಗೆ ನಕಲಿ ಎಸಿಬಿ ತಂಡದಿಂದ ಬ್ಲಾಕ್​ಮೇಲ್​ ಕರೆ! ಹಣಕ್ಕೆ ಬೇಡಿಕೆ

ಅಧಿಕಾರಿ ಹನುಮಂತ ಜೊತೆ ಮಾತಾಡಿರುವ ಆಡಿಯೋ ವೈರಲ್ ಆಗಿದೆ. ಇನ್ನು ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ಮಾಡುವ ಬೆದರಿಕೆ ಹಾಕಿದ್ದಾರೆ. ಜೊತೆಗೆ ದಾಳಿ ಮಾಡದಿರಲು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ.

ರಾಯಚೂರು ಸರ್ಕಾರಿ ಅಧಿಕಾರಿಗಳಿಗೆ ನಕಲಿ ಎಸಿಬಿ ತಂಡದಿಂದ ಬ್ಲಾಕ್​ಮೇಲ್​ ಕರೆ! ಹಣಕ್ಕೆ ಬೇಡಿಕೆ
ಅಬಕಾರಿ ನಿರೀಕ್ಷಕ ಹನುಮಂತ
TV9 Web
| Edited By: |

Updated on:May 01, 2022 | 11:42 AM

Share

ರಾಯಚೂರು: ಜಿಲ್ಲೆಯ ಸರ್ಕಾರಿ (Government) ಅಧಿಕಾರಿಗಳಿಗೆ ನಕಲಿ ಎಸಿಬಿ ತಂಡದಿಂದ ಬ್ಲಾಕ್​ಮೇಲ್​ (Blackmail) ಕರೆ ಬಂದಿರುವ ಘಟನೆ ನಡೆದಿದೆ. ಫೇಕ್ ಕಾಲ್​ನಿಂದ ಕೆಲವು ಹಿರಿಯ ಅಧಿಕಾರಿಗಳು ಕಂಗಾಲಾಗಿದ್ದಾರೆ. ಅಧಿಕಾರಿ ಹನುಮಂತ ಜೊತೆ ಮಾತಾಡಿರುವ ಆಡಿಯೋ ವೈರಲ್ ಆಗಿದೆ. ಇನ್ನು ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ಮಾಡುವ ಬೆದರಿಕೆ ಹಾಕಿದ್ದಾರೆ. ಜೊತೆಗೆ ದಾಳಿ ಮಾಡದಿರಲು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಫೋನ್ ಪೇ, ಗೂಗಲ್ ಪೇ ಮೂಲಕ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಸದ್ಯ ಈ ಪ್ರಕರಣ ರಾಯಚೂರು ಸೈಬರ್ ಕ್ರೈಂ ವಿಭಾಗದ ಠಾಣೆಯಲ್ಲಿ ದಾಖಲಾಗಿದೆ.

ಅಬಕಾರಿ ನಿರೀಕ್ಷಕ ಹನುಮಂತ ಎಂಬುವವರ ಜೊತೆ ಆರೋಪಿ ಮಾತನಾಡಿರುವ ಆಡಿಯೋ ಕ್ಲಿಪ್ ಟಿವಿ9 ಗೆ ಲಭ್ಯವಾಗಿದೆ. ಆರೋಪಿಗಳು ರಾಯಚೂರು ಎಸಿಬಿ ಡಿವೈಎಸ್​ಪಿ ವಿಜಯ್ ಕುಮಾರ್ ಹೆಸರು ದುರ್ಬಳಕೆ ಮಾಡಿಕೊಂಡು ಅಬಕಾರಿ ಇಲಾಖೆ ಡಿಸಿ ಲಕ್ಷ್ಮೀ ನಾಯಕ್, ಅಬಕಾರಿ ಇಲಾಖೆ ನಿರೀಕ್ಷಕ ಹನುಮಂತ ಗುತ್ತಿಗೆದಾರ್​ಗೆ ಬ್ಲಾಕ್ ಮೇಲ್ ಮಾಡಿದ್ದಾರೆ. ಜೊತೆಗೆ ಜಿ.ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮ ರೆಡ್ಡಿಗೂ ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರೆ.

ಹನುಮಂತ ಗುತ್ತಿಗೆದಾರ್​ಗೆ ಬೆಂಗಳೂರು ಖನೊಜ ಭವನದಲ್ಲಿನ ಅಧಿಕಾರಿಗಳಿಗೆ ಹಣ ನೀಡುವಂತೆ ತಾಕೀತು ಮಾಡಿದ್ದಾರೆ. ನವೀನ್ ಹಾಗೂ ಉಮೇಶ್ ಅನ್ನೋರಿಗೆ ಹಣ ನೀಡುವಂತೆ ಕರೆಯಲ್ಲಿ ಹೇಳಿದ್ದಾರೆ. ಎರಡು ಪ್ರತ್ಯೇಕ ಫೋನ್ ನಂಬರ್​ಗೆ ತಲಾ 75 ಸಾವಿರ ಹಣ ಹಾಕಲು ಹೇಳಿದ್ದಾರೆ. ಇತ್ತ ಜಿ.ಪಂಚಾಯತಿ ಅಧಿಕಾರಿ ರಾಮಾರೆಡ್ಡಿಗೂ ಬೇರೆ ನಂಬರ್​ನಿಂದ ಕರೆ ಬಂದಿದೆ. ನಿಮ್ಮ ಕೇಸ್ ತನಿಖಾಧಿಕಾರಿ ಶ್ರೀಲಂಕಾ ಪ್ರವಾಸಕ್ಕೆ ಹೋಗುತ್ತಾರೆ. ಅವರಿಗೆ 1.5 ಲಕ್ಷ ರೂ. ಹಣ ಬೇಕು ಅಂದಿದ್ದಾರೆ. ಸದ್ಯ ಈ ಬಗ್ಗೆ ರಾಯಚೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಬಳಿಕ ನಿಜಾಬಣ್ಣ ಹೊರಬರಬೇಕಿದೆ.

ಇದನ್ನೂ ಓದಿ

IPL 2022: ಆ ದಿನ ಮೂರು ಘಟನೆ ನಡೆಯಿತು: ಏಪ್ರಿಲ್ 30, 2022 ದಿನ ನೀವೆಂದಿಗೂ ಮರೆಯಲು ಸಾಧ್ಯವಿಲ್ಲ

Anand Mahindra Birthday: ಜೀವನವನ್ನೇ ಬದಲಿಸಬಲ್ಲ ಆನಂದ್ ಮಹೀಂದ್ರಾರ ಪ್ರೇರಣಾದಾಯಿ ಮಾತುಗಳು ಇಲ್ಲಿವೆ

Published On - 11:37 am, Sun, 1 May 22

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ