AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ದಾಖಲೆ ಬಳಸಿ ಅಂಗನವಾಡಿ ಶಿಕ್ಷಕಿ ಹುದ್ದೆಗೆ ಆಯ್ಕೆ, ಕೆಲಸ ಕಳೆದುಕೊಂಡ ಅಮಾಯಕಿ

ರಾಯಚೂರು: ಆ ಜಿಲ್ಲೆಯಲ್ಲಿ ಅಂಗನವಾಡಿ ಶಿಕ್ಷಕಿ ಹುದ್ದೆಗೆ ಫುಲ್ ಡಿಮ್ಯಾಂಡ್. ಹೀಗಾಗಿ ಆ ಜಿಲ್ಲೆಯಲ್ಲಿ ಅಂಗನವಾಡಿ ಶಿಕ್ಷಕಿ ಹುದ್ದೆ ಗಿಟ್ಟಿಸಿಕೊಳ್ಳಲು ಭೋಗಸ್ ದಾಖಲೆ ಸೃಷ್ಟಿಸಿ ಜಿಲ್ಲಾಡಳಿತದ ದಿಕ್ಕು ತಪ್ಪಿಸುವ ದಂಧೆ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಅಲ್ಲಿ ಅದೆಷ್ಟೋ ಅರ್ಹ ಅಭ್ಯರ್ಥಿಗಳ ಬದುಕು ಅಲ್ಲಿ ಬೀದಿ ಪಾಲಾಗ್ತಿದೆ. ತಹಶೀಲ್ದಾರ್ ಎಡವಟ್ಟು, ಹುದ್ದೆ ಕಳೆದುಕೊಂಡ ಅಮಾಯಕಿ: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಗೋರ್ಕಲ್ ಗ್ರಾಮದ ನಿವಾಸಿ ಹಂಪಮ್ಮ ಕಂದಾಯ ನಿರೀಕ್ಷಕರು ಹಾಗೂ ಮಾನ್ವಿ ತಹಶೀಲ್ದಾರ್ ಬೇಜಬ್ದಾರಿಗೆ ಅಂಗನವಾಡಿ ಶಿಕ್ಷಕಿ ಹುದ್ದೆಯಿಂದ […]

ಸುಳ್ಳು ದಾಖಲೆ ಬಳಸಿ ಅಂಗನವಾಡಿ ಶಿಕ್ಷಕಿ ಹುದ್ದೆಗೆ ಆಯ್ಕೆ, ಕೆಲಸ ಕಳೆದುಕೊಂಡ ಅಮಾಯಕಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 29, 2019 | 9:18 AM

Share

ರಾಯಚೂರು: ಆ ಜಿಲ್ಲೆಯಲ್ಲಿ ಅಂಗನವಾಡಿ ಶಿಕ್ಷಕಿ ಹುದ್ದೆಗೆ ಫುಲ್ ಡಿಮ್ಯಾಂಡ್. ಹೀಗಾಗಿ ಆ ಜಿಲ್ಲೆಯಲ್ಲಿ ಅಂಗನವಾಡಿ ಶಿಕ್ಷಕಿ ಹುದ್ದೆ ಗಿಟ್ಟಿಸಿಕೊಳ್ಳಲು ಭೋಗಸ್ ದಾಖಲೆ ಸೃಷ್ಟಿಸಿ ಜಿಲ್ಲಾಡಳಿತದ ದಿಕ್ಕು ತಪ್ಪಿಸುವ ದಂಧೆ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಅಲ್ಲಿ ಅದೆಷ್ಟೋ ಅರ್ಹ ಅಭ್ಯರ್ಥಿಗಳ ಬದುಕು ಅಲ್ಲಿ ಬೀದಿ ಪಾಲಾಗ್ತಿದೆ.

ತಹಶೀಲ್ದಾರ್ ಎಡವಟ್ಟು, ಹುದ್ದೆ ಕಳೆದುಕೊಂಡ ಅಮಾಯಕಿ: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಗೋರ್ಕಲ್ ಗ್ರಾಮದ ನಿವಾಸಿ ಹಂಪಮ್ಮ ಕಂದಾಯ ನಿರೀಕ್ಷಕರು ಹಾಗೂ ಮಾನ್ವಿ ತಹಶೀಲ್ದಾರ್ ಬೇಜಬ್ದಾರಿಗೆ ಅಂಗನವಾಡಿ ಶಿಕ್ಷಕಿ ಹುದ್ದೆಯಿಂದ ವಂಚಿತರಾಗಿದ್ದಾರೆ. ಹಿರೇದಿನ್ನಿ ಗ್ರಾಮದ ಸುಧಾಕಲಾ ಎಂಬ ಮಹಿಳೆಗೆ ಮಾನ್ವಿ ತಹಶೀಲ್ದಾರರು ಗೋರ್ಕಲ್ ನಿವಾಸಿ ಎಂಬ ಸುಳ್ಳು ವಾಸಸ್ಥಳ ಪ್ರಮಾಣ ಪತ್ರ ನೀಡಿದ್ದಾರೆ. ಇದನ್ನ ಬಳಸಿಕೊಂಡು ಅಂಗನವಾಡಿ ಶಿಕ್ಷಕಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಹಿರೇದಿನ್ನಿ ಗ್ರಾಮದ ಸುಧಾಕಲಾ ತಾತ್ಕಾಲಿಕವಾಗಿ ಆಯ್ಕೆಯಾಗಿದ್ದಾರೆ.

ಈಗ ಇಲಾಖೆ ಪ್ರಕಟಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹಂಪಮ್ಮ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಸುಧಾಕಲಾ ನೀಡಿರುವ ವಾಸಸ್ಥಳ ಪ್ರಮಾಣ ಪತ್ರದ ಮರು ಪರಿಶೀಲನೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಂದಾಯ ಇಲಾಖೆಗೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿಶೇಷಚೇತನಳಾದ ಹಂಪಮ್ಮ ಅಂಗನವಾಡಿ ಶಿಕ್ಷಕಿ ಹುದ್ದೆಯಿಂದ ವಂಚಿತಳಾಗುವ ಸ್ಥಿತಿ ಎದುರಾಗಿದೆ.

ಇನ್ನು ಮಾನ್ವಿ ತಹಶೀಲ್ದಾರರಿಗೂ ಈ ಬಗ್ಗೆ ದೂರು ಸಲ್ಲಿಸಿದ್ರೂ ಪ್ರಯೋಜನವಾಗಿಲ್ಲ. ವಿಶೇಷಚೇತನ ಹಂಪಮ್ಮ ತನಗಾದ ಅನ್ಯಾಯವನ್ನ ಸರಿಪಡಿಸುವಂತೆ ಸಂಬಂಧಪಟ್ಟ ಕಚೇರಿಗಳಿಗೆ ಅಲೆದಾಡ್ತಿದ್ರೂ, ಯಾವೊಬ್ಬ ಅಧಿಕಾರಿಯೂ ಸ್ಪಂದಿಸುತ್ತಿಲ್ಲ. ಹೀಗಾಗಿ, ಸ್ಥಳೀಯ ಜತೆಗೆ ಜಿಲ್ಲಾಡಳಿತದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದಾಳೆ.

ಈ ರೀತಿ ಸುಳ್ಳು ವಾಸಸ್ಥಳ ಪ್ರಮಾಣ ಪತ್ರ ನೀಡಿದ ಕಂದಾಯ ನಿರೀಕ್ಷಕ ಮತ್ತು ಮಾನ್ವಿ ತಹಶೀಲ್ದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಹಂಪಮ್ಮ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾಳೆ. ಒಟ್ನಲ್ಲಿ ರಾಯಚೂರು ಜಿಲ್ಲೆಯಾದ್ಯಂತ ಅಂಗನವಾಡಿ ಶಿಕ್ಷಕಿ ಹುದ್ದೆ ಗಿಟ್ಟಿಸಿಕೊಳ್ಳಲು ಈ ರೀತಿ ಸುಳ್ಳು ವಾಸಸ್ಥಳ ಪ್ರಮಾಣ ಪತ್ರ ನೀಡಿದ್ದರಿಂದ ಸಾಕಷ್ಟು ಅರ್ಹ ಫಲಾನುಭವಿಗಳಿಗೆ ವಂಚನೆಯಾಗಿದೆ.

Published On - 8:27 am, Sun, 29 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು