AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಹತ್ತಿಗೆ ಬಂದಿದೆ ಬಂಗಾರದ ಬೆಲೆ, ಆದರೆ ಬೆಳೆ ಕುಸಿತದಿಂದ ರೈತರು ಕಂಗಾಲು

ಹತ್ತಿ ಬೆಳೆಗೆ ಈ ಬಾರಿ ಬಂಗಾರದ ಬೆಲೆ ಚೆನ್ನಾಗಿದ್ದರೂ ಹಲವು ಕಾರಣಗಳಿಂದಾಗಿ ಇಳುವರಿ ಕುಸಿದಿರುವುದರಿಂದ ರೈತರು ಕಂಗಾಲಾಗಿದ್ದಾರೆ.

ರಾಯಚೂರು: ಹತ್ತಿಗೆ ಬಂದಿದೆ ಬಂಗಾರದ ಬೆಲೆ, ಆದರೆ ಬೆಳೆ ಕುಸಿತದಿಂದ ರೈತರು ಕಂಗಾಲು
ಕುಂಠಿತ ಇಳುವರಿಯಿಂದ ಕಂಗಾಲಾದ ರೈತರು
TV9 Web
| Edited By: |

Updated on: Nov 20, 2022 | 3:10 PM

Share

ರಾಯಚೂರು: ಜಿಲ್ಲೆಯಲ್ಲಿ ಈ ಬಾರಿ ರೈತರು ಹತ್ತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದಾರೆ. ಸುಮಾರು 2.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಇದೆ. ಮಾರುಕಟ್ಟೆಯಲ್ಲಿ ಹತ್ತಿಗೆ ಬಂಗಾರದ ಬೆಲೆ ಇದೆ. ಕ್ವಿಂಟಲ್ ಹತ್ತಿಯು 8-9 ಸಾವಿರ ರೂಪಾಯಿಯವರೆಗೆ ಮಾರಾಟವಾಗುತ್ತಿದೆ. ಹೀಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ರಾಯಚೂರು ತಾಲೂಕಿನ ಹಲವು ಗ್ರಾಮಗಳು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದ ಗಡಿಯಲ್ಲಿವೆ. ಆ ಭಾಗದಲ್ಲಿ ಹತ್ತಿ ಬೆಳೆಯ ಸಮಸ್ಯೆ ಎದುರಾಗಿದೆ. ಈ ಹಿಂದೆ ಇರದ ಇಳುವರಿ ಸಮಸ್ಯೆಯನ್ನು ರೈತರು ಈ ಬಾರಿ ಅನುಭವಿಸುತ್ತಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಸ್ಥಿತಿಯಲ್ಲಿದ್ದಾರೆ ರೈತರು.

ರಾಯಚೂರು ತಾಲೂಕಿನ ಗಿಲ್ಲೆಸುಗೂರು, ಸಗಮಕುಂಟಾ, ಮೀರಾಪುರ, ಮಟಮಾರಿ ಸೇರಿ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಹತ್ತಿ ಇಳುವರಿ ಕುಂಠಿತವಾಗಿದೆ. ಈ ಬಾರಿ ಇಳುವರಿ ಕಡಿಮೆಯಾಗಲು ಕಳಪೆ ಬೀಜದ ಸಮಸ್ಯೆಯೇ ಮುಖ್ಯ ಕಾರಣ ಎಂದು ರೈತರು ಆರೋಪಿಸಿದ್ದಾರೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣ ಗಡಿ ಭಾಗದಲ್ಲಿಯೂ ರೈತರು ಹತ್ತಿ ಬೆಳೆ ಸಮಸ್ಯೆ ಎದುರಿಸುತ್ತಿದ್ದು,ಕೃಷಿ ಇಲಾಖೆಗೆ ಈ ಸಂಬಂಧ ಸರಣಿ ದೂರುಗಳು ಬಂದಿವೆ. ಈ ಸಮಸ್ಯೆಯನ್ನು ಕೃಷಿ ಇಲಾಖೆ ಕೂಡ ಗಂಭೀರವಾಗಿ ಪರಿಣಮಿಸಿದೆ. ಗಡಿ ಭಾಗದಲ್ಲಿ ಹತ್ತಿ ಇಳುವರಿ ಕುಂಠಿತವಾಗಿರುವ ಬಗ್ಗೆ ಅಧ್ಯಯನಕ್ಕೆ ಮುಂದಾಗಿದೆ. ಹತ್ತಿ ಬಿತ್ತನೆ ಪದ್ದತಿ, ಕಳಪೆ ಬೀಜಗಳಿಂದಲೂ ಈ ರೀತಿ ಇಳುವರಿ ಸಮಸ್ಯೆಯಾಗಿರುವ ಸಾಧ್ಯತೆಯಿದೆ. ಈ ಬಾರಿ ಮಳೆಯೂ ಹೆಚ್ಚಾಗಿದ್ದು, ಜೊತೆಗೆ ಕೀಟ ಭಾದೆಯೂ ಕಂಡು ಬಂದಿದೆ. ಆದರೆ ಹತ್ತಿ ಇಳುವರಿ ಕಡಿಮೆಯಾಗಲು ಈ ಪೈಕಿ ಯಾವುದು ಮುಖ್ಯ ಕಾರಣ ಎನ್ನುವುದು ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ, ಹತ್ತಿ ಇಳುವರಿಯು ಕುಂಠಿತಗೊಂಡಿರುವ ಹೊಲಗಳಿಗೆ ವಿಜ್ಞಾನಿಗಳ ತಂಡ ಭೇಟಿ ನೀಡಿದೆ. ಗಿಲ್ಲೆಸುಗೂರು ಭಾಗದಲ್ಲಿ ಹತ್ತಿ ಇಳುವರಿ ಸಮಸ್ಯೆಗೆ ಕಳಪೆ ಬೀಜ, ರೋಗ ಹಾಗೂ ಕೀಟ ಬಾಧೆ ಕಾರಣ ಎಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ. ಈ ವರದಿ ಆಧಾರದ ಮೇಲೆ ಹಾನಿಗೊಳಗಾದ ಸಂತ್ರಸ್ತ ರೈತರು ಗ್ರಾಹಕರ ನ್ಯಾಯಾಲಯಕ್ಕೆ ಹೋಗಬಹುದು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ವಿಶೇಷವಾಗಿ ಮಕ್ಕಳ ದಿನಾಚರಣೆ ಆಚರಿಸಿಕೊಂಡ ರಾಯಚೂರು ಜಿಲ್ಲಾ ಪೊಲೀಸರು

ವರದಿ: ಭೀಮೇಶ್ ಪೂಜಾರ್ ಟಿವಿ9 ರಾಯಚೂರು

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ