AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಲ್ಹಾದ್ ಜೋಶಿ ವಿರುದ್ಧ ನಿಂದನೆ, ಜೀವ ಬೆದರಿಕೆ ಆರೋಪ: ಏಮ್ಸ್ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಆರು ಮಂದಿ ಏಮ್ಸ್ ಹೋರಾಟಗಾರರ ವಿರುದ್ಧ ರಾಯಚೂರು ನಗರದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮಾಡಿದ್ದೇನು? ಬಿಜೆಪಿ ನೀಡಿದ್ದ ದೂರಿನಲ್ಲೇನಿದೆ? ಪೊಲೀಸರು ಕೈಗೊಂಡ ಕ್ರಮಗಳೇನು ಎಂಬ ವಿವರ ಇಲ್ಲಿದೆ.

ಪ್ರಲ್ಹಾದ್ ಜೋಶಿ ವಿರುದ್ಧ ನಿಂದನೆ, ಜೀವ ಬೆದರಿಕೆ ಆರೋಪ: ಏಮ್ಸ್ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು
ಪ್ರಹ್ಲಾದ್ ಜೋಶಿ
ಭೀಮೇಶ್​​ ಪೂಜಾರ್
| Updated By: Ganapathi Sharma|

Updated on: Jun 26, 2025 | 11:11 AM

Share

ರಾಯಚೂರು, ಜೂನ್ 26: ಕೇಂದ್ರ ಸಚಿವ ಪ್ರಲ್ಹಾದ್ (Pralhad Joshi) ಜೋಶಿ ಹಾಗೂ ನಗರ ಶಾಸಕ ಶಿವರಾಜ್ ಪಾಟೀಲ್ ವಿರುದ್ಧ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಏಮ್ಸ್ ಹೋರಾಟಗಾರರ (AIIMS Activists) ವಿರುದ್ಧ ರಾಯಚೂರು (Raichur) ನಗರದ ಪಶ್ಚಿಮ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ರಾಯಚೂರು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ವೀರನಗೌಡ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಏಮ್ಸ್ ಹೋರಾಟಗಾರರಾದ ಅಶೋಕ್ ಜೈನ್‌, ಬಸವರಾಜ್ ಕಳಸ , ಎಂಆರ್ ಬೇರಿ, ಎಸ್ ಮಾರೆಪ್ಪ ಸೇರಿ ಆರು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಬುಧವಾರವಷ್ಟೇ ಏಮ್ಸ್ ಹೋರಾಟಗಾರರ ವಿರುದ್ಧ ಜಿಲ್ಲಾಧಿಕಾರಿಗಳಿಗೂ ಬಿಜೆಪಿ ದೂರು ನೀಡಿತ್ತು.

ಬಿಜೆಪಿ ನೀಡಿದ ದೂರಿನಲ್ಲೇನಿದೆ?

ಆರೋಪಿಗಳು ಜೂನ್ 24 ರಂದು ರಾಯಚೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಅವರು ಎಲ್ಲೇ ಸಿಕ್ಕರೂ ಅವರಿಗೆ ಕಲ್ಲಿನಿಂದ, ಬಾರಿಗೆಯಿಂದ ಮತ್ತು ಚಪ್ಪಲಿಯಿಂದ ಹೊಡೆಯುತ್ತೇವೆ ಎಂದು ಜೀವದ ಬೆದರಿಕೆ ಹಾಕಿರುತ್ತಾರೆ. ಆರೋಪಿಗಳ ಈ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿಯುಂಟಾಗಿ ಸೌಹಾರ್ದತೆಗೆ ಧಕ್ಕೆಯುಂಟಾಗುತ್ತದೆ. ಒಬ್ಬ ಗೌರವಾನ್ವಿತ ಕೇಂದ್ರ ಸಚಿವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವುದರಿಂದ ತಕ್ಷಣವೇ ಆರೋಪಿಗಳು ಮತ್ತು ಅವರ ಸಹಚರರ ಮೇಲೆ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತಿದ್ದೇವೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ರಾಯಚೂರು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ವೀರನಗೌಡ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
ಗ್ರಾಹಕರಿಗೆ ಮತ್ತೊಂದು ಶಾಕ್: ಬೆಸ್ಕಾಂ ವಿದ್ಯುತ್ ಬಿಲ್ ನೋಡಿ ಜನ ಬೇಸ್ತು
Image
ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ಮೆಟ್ರೋ ಟಿಕೆಟ್!
Image
ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ತೀರ್ಪು
Image
ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

ಇದನ್ನೂ ಓದಿ: ಕರ್ನಾಟಕದ ಧರ್ಮಾಧಾರಿತ ವಸತಿ ಮೀಸಲಾತಿ ವಿರುದ್ಧ ಕಾನೂನು ಕ್ರಮ; ಪ್ರಲ್ಹಾದ್ ಜೋಶಿ ಎಚ್ಚರಿಕೆ

ಈ ದೂರಿನ ಆಧಾರದಲ್ಲಿ ಆರೋಪಿಗಳ ವಿರುದ್ಧ ಬಿಎನ್​ಎಸ್ ಕಾಯ್ದೆಯ ಕಲಂ 325, 351(2)(3), 190 ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ ಎಂದು ರಾಯಚೂರು ನಗರದ ಪಶ್ಚಿಮ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್