Sign In

By signing in or creating an account, you agree with Associated Broadcasting Company's Terms & Conditions and Privacy Policy.

Students Missing: ರಾಯಚೂರು; ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

ನಾಪತ್ತೆಯಾಗಿರುವ ಮೂವರು ವಿದ್ಯಾರ್ಥಿನಿಯರು ಪಿಯುಸಿ ವಿಜ್ಞಾನ ವಿಭಾಗಕ್ಕೆ ಸೇರಿದ್ದರೆ ಒಬ್ಬರು ಮಾತ್ರ ಪ್ರಥಮ ಪಿಯುಸಿ ಓದುತ್ತಿದ್ದರು.

Students Missing: ರಾಯಚೂರು; ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 25, 2022 | 2:10 PM

ರಾಯಚೂರು: ನಗರದ ಬಾಲಕಿಯರ ಸರ್ಕಾರಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಮೂವರು ವಿದ್ಯಾರ್ಥಿನಿಯರು ಪಿಯುಸಿ ವಿಜ್ಞಾನ ವಿಭಾಗಕ್ಕೆ ಸೇರಿದ್ದರೆ ಒಬ್ಬರು ಮಾತ್ರ ಪ್ರಥಮ ಪಿಯುಸಿ ಓದುತ್ತಿದ್ದರು. ವಿದ್ಯಾರ್ಥಿನಿಯರ ನಾಪತ್ತೆ ಕುರಿತು ಪ್ರತಿಕ್ರಿಯಿಸಿರುವ ಪ್ರಾಚಾರ್ಯ ಚಂದ್ರಶೇಖರ್, ವಿದ್ಯಾರ್ಥಿನಿಯರ ನಾಪತ್ತೆ ವಿಷಯವು ಜುಲೈ 23ರಂದು ಗೊತ್ತಾಯಿತು. ಕಾಲೇಜು ಕ್ಯಾಂಪಸ್​ನ ಆಚೆ ಈ ವಿದ್ಯಮಾನ ನಡೆದಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿಯರ ಬಗ್ಗೆ ತರಗತಿ ಉಪನ್ಯಾಸಕರಿಂದ ಮಾಹಿತಿ ಪಡೆದಿದ್ದೇವೆ. ಇವರು ನಾಲ್ವರೂ ಕಾಲೇಜಿ​​​ಗೆ ಸರಿಯಾಗಿ ಬರುತ್ತಿರಲಿಲ್ಲ. ಕಲಿಕೆಯಲ್ಲಿಯೂ ಹಿಂದುಳಿದಿದ್ದರು. ಹಾಜರಾತಿ ದಾಖಲೆ ಪ್ರಕಾರ 4 ದಿನಗಳಿಂದ ಕಾಲೇಜಿಗೆ ಗೈರುಹಾಜರಾಗಿದ್ದಾರೆ. ಪೊಲೀಸರು ಕೇಳಿದ್ದರಿಂದ ಅವರಿಗೆ ಹಾಜರಾತಿ ಪುಸ್ತಕ ಮತ್ತು ಅಗತ್ಯ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

ಪೊಲೀಸರ ತನಿಖೆಗೆ ಸಹಕರಿಸುತ್ತಿದ್ದೇವೆ. ಕಾಲೇಜ್ ಕ್ಯಾಂಪಸ್​ನಲ್ಲಿ ಸಿಸಿ ಕ್ಯಾಮೆರಾ ಸ್ಥಗಿತಗೊಂಡಿದೆ. ಅದರಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಪ್ರಾಚಾರ್ಯರು ಹೇಳಿದರು. ನಾಪತ್ತೆಯಾದ ವಿದ್ಯಾರ್ಥಿನಿಯರನ್ನು ಹುಡುಕಲು ಯತ್ನಿಸಿದ ಪೋಷಕರು ತಮ್ಮ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಕ್ಕಳನ್ನು ಹುಡುಕಿಕೊಂಡು ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಗಡಿಭಾಗಗಳಿಗೂ ಪೊಲೀಸರು ಮಾಹಿತಿ ರವಾನಿಸಿದ್ದಾರೆ. ರಾಯಚೂರು ಮಹಿಳಾ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಲಿಂಗಸುಗೂರು: ಕಿಡ್ನಿ ವೈಫಲ್ಯದಿಂದ ಯೋಧನ ಸಾವು

ಕಿಡ್ನಿ ವೈಫಲ್ಯದಿಂದ ಲಿಂಗಸುಗೂರು ತಾಲೂಕಿನ ಉಪ್ಪಾರನಂದಿಹಾಳ ಗ್ರಾಮದ ಸಿಆರ್​ಪಿಎಫ್​​ ಯೋಧ ನೂರ್​​ಸಾಬ್ ನಿಧನರಾಗಿದ್ದಾರೆ. 2009ರಲ್ಲಿ ಛತ್ತೀಸ​ಗಡದಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ವೇಳೆ ಯೋಧ ನೂರ್​ಸಾಬ್​ ಗಾಯಗೊಂಡಿದ್ದರು. ಈ ವೇಳೆ ಅವರ ಕಿಡ್ನಿಗೆ ಘಾಸಿಯಾಗಿತ್ತು. ನಂತರ ಯೋಧನ ತಾಯಿ ಕಿಡ್ನಿ ದಾನ ಮಾಡಿದ್ದರು. ಗುಣಮುಖರಾಗಿ ಹೈದರಾಬಾದ್​​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೂರ್​ಸಾಬ್ ಅವರ ಕಿಡ್ನಿ ಮತ್ತೆ ವಿಫಲವಾದ ಹಿನ್ನೆಲೆಯಲ್ಲಿ ಮೃತಪಟ್ಟರು.

Published On - 2:10 pm, Mon, 25 July 22

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!