ಮಂಗಳೂರು ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ದಂಧೆ; ಇಬ್ಬರ ಬಂಧನ

ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ.

ಮಂಗಳೂರು ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ದಂಧೆ; ಇಬ್ಬರ ಬಂಧನ
ರಾಯಚೂರು ಗಾಂಜಾ ಅರೆಸ್ಟ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 02, 2023 | 9:03 AM

ರಾಯಚೂರು, ಆ.2: ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳ ತಡೆಗೆ ಪೊಲೀಸರು ಟೊಂಕ ಕಟ್ಟಿ ನಿಂತಂತೆ ಕಾಣುತ್ತಿದೆ. ಹೌದು ಇತ್ತೀಚೆಗೆ ಹೆಚ್ಚಾಗಿ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಕಳೆದ ಜುಲೈ 21ರಂದು ಮಂಗಳೂರಿ (Mangalore) ನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​(Chocolate) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ರಾಯಚೂರಿ(Raichur)ನಲ್ಲಿ ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ. ಇವರು ಉತ್ತರ ಪ್ರದೇಶದಿಂದ ಗಾಂಜಾವನ್ನು ತಂದು ರಾಯಚೂರಿನಲ್ಲಿ ಮಾರಾಟ ಮಾಡುತ್ತಿರುವುದಾಗಿ ತನಿಖೆಯಿಂದ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಟಾರ್ಗೆಟ್

ಇನ್ನು ಈ ದಂಧೆಕೋರರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರನ್ನ ಟಾರ್ಗೆಟ್ ಮಾಡಿದ್ದರು. ಹೌದು, ಇಂಡಸ್ಟ್ರಿಯಲ್ ಫ್ಯಾಕ್ಟರಿಗಳಲ್ಲಿ ಕೆಲಸ ಮಾಡುತ್ತಿದ್ದ ಕೆಲಸದವರ ಜೊತೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಇದನ್ನು ಮಾರಾಟ ಮಾಡುತ್ತಿದ್ದರು. ಇದನ್ನ ಮಕ್ಕಳು ತಿನ್ನುವ ಚಾಕೋಲೆಟ್ ಮಾದರಿಯಲ್ಲಿಯೇ ಗಾಂಜಾ ಚಾಕೋಲೆಟ್ ರೆಡಿ ಮಾಡಿದ್ದರು. ಜೊತೆಗೆ ಪ್ರತಿ ಚಾಕೋಲೆಟ್​ಗೆ 50ರಿಂದ60 ರೂಪಾಯಿಗೆ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ:ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಚರಣೆ, ಮಾದಕ ವಸ್ತು ಸಹಿತ ಪಿಸ್ತೂಲ್ ಹೊಂದಿದ್ದ ಡ್ರಗ್ ಪೆಡ್ಲರ್​ಗಳ ಬಂಧನ

ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಬೇಟೆ

ಇನ್ನು ಈ ಕುರಿತು ಖಚಿತ ಮಾಹಿತಿ ಮೇರೆಗೆ ರಾಯಚೂರು ನಗರದ ಎಲ್​.ಬಿ.ಎಸ್ ನಗರದ ಮನೆಯೊಂದರಲ್ಲಿ ದಾಳಿ ಮಾಡಿದ ಅಬಕಾರಿ ಇಲಾಖೆಯ ಅಧಿಕಾರಿಗಳು ರಾಚಯ್ಯ ಸ್ವಾಮಿ ಹಾಗೂ ಅಮರಯ್ಯ ಸ್ವಾಮಿ ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಕೆ.ಜಿ 66 ಗ್ರಾಂ ತೂಕದ ಗಾಂಜಾ ಚಾಕಲೇಟ್ ಜಪ್ತಿ ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ