AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ದಂಧೆ; ಇಬ್ಬರ ಬಂಧನ

ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ.

ಮಂಗಳೂರು ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ದಂಧೆ; ಇಬ್ಬರ ಬಂಧನ
ರಾಯಚೂರು ಗಾಂಜಾ ಅರೆಸ್ಟ್​
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 02, 2023 | 9:03 AM

Share

ರಾಯಚೂರು, ಆ.2: ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳ ತಡೆಗೆ ಪೊಲೀಸರು ಟೊಂಕ ಕಟ್ಟಿ ನಿಂತಂತೆ ಕಾಣುತ್ತಿದೆ. ಹೌದು ಇತ್ತೀಚೆಗೆ ಹೆಚ್ಚಾಗಿ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಕಳೆದ ಜುಲೈ 21ರಂದು ಮಂಗಳೂರಿ (Mangalore) ನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​(Chocolate) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ರಾಯಚೂರಿ(Raichur)ನಲ್ಲಿ ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ. ಇವರು ಉತ್ತರ ಪ್ರದೇಶದಿಂದ ಗಾಂಜಾವನ್ನು ತಂದು ರಾಯಚೂರಿನಲ್ಲಿ ಮಾರಾಟ ಮಾಡುತ್ತಿರುವುದಾಗಿ ತನಿಖೆಯಿಂದ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಟಾರ್ಗೆಟ್

ಇನ್ನು ಈ ದಂಧೆಕೋರರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರನ್ನ ಟಾರ್ಗೆಟ್ ಮಾಡಿದ್ದರು. ಹೌದು, ಇಂಡಸ್ಟ್ರಿಯಲ್ ಫ್ಯಾಕ್ಟರಿಗಳಲ್ಲಿ ಕೆಲಸ ಮಾಡುತ್ತಿದ್ದ ಕೆಲಸದವರ ಜೊತೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಇದನ್ನು ಮಾರಾಟ ಮಾಡುತ್ತಿದ್ದರು. ಇದನ್ನ ಮಕ್ಕಳು ತಿನ್ನುವ ಚಾಕೋಲೆಟ್ ಮಾದರಿಯಲ್ಲಿಯೇ ಗಾಂಜಾ ಚಾಕೋಲೆಟ್ ರೆಡಿ ಮಾಡಿದ್ದರು. ಜೊತೆಗೆ ಪ್ರತಿ ಚಾಕೋಲೆಟ್​ಗೆ 50ರಿಂದ60 ರೂಪಾಯಿಗೆ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ:ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಚರಣೆ, ಮಾದಕ ವಸ್ತು ಸಹಿತ ಪಿಸ್ತೂಲ್ ಹೊಂದಿದ್ದ ಡ್ರಗ್ ಪೆಡ್ಲರ್​ಗಳ ಬಂಧನ

ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಬೇಟೆ

ಇನ್ನು ಈ ಕುರಿತು ಖಚಿತ ಮಾಹಿತಿ ಮೇರೆಗೆ ರಾಯಚೂರು ನಗರದ ಎಲ್​.ಬಿ.ಎಸ್ ನಗರದ ಮನೆಯೊಂದರಲ್ಲಿ ದಾಳಿ ಮಾಡಿದ ಅಬಕಾರಿ ಇಲಾಖೆಯ ಅಧಿಕಾರಿಗಳು ರಾಚಯ್ಯ ಸ್ವಾಮಿ ಹಾಗೂ ಅಮರಯ್ಯ ಸ್ವಾಮಿ ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಕೆ.ಜಿ 66 ಗ್ರಾಂ ತೂಕದ ಗಾಂಜಾ ಚಾಕಲೇಟ್ ಜಪ್ತಿ ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ