AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ದಂಧೆ; ಇಬ್ಬರ ಬಂಧನ

ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ.

ಮಂಗಳೂರು ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ ಗಾಂಜಾ ಚಾಕೋಲೆಟ್ ದಂಧೆ; ಇಬ್ಬರ ಬಂಧನ
ರಾಯಚೂರು ಗಾಂಜಾ ಅರೆಸ್ಟ್​
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 02, 2023 | 9:03 AM

Share

ರಾಯಚೂರು, ಆ.2: ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳ ತಡೆಗೆ ಪೊಲೀಸರು ಟೊಂಕ ಕಟ್ಟಿ ನಿಂತಂತೆ ಕಾಣುತ್ತಿದೆ. ಹೌದು ಇತ್ತೀಚೆಗೆ ಹೆಚ್ಚಾಗಿ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಕಳೆದ ಜುಲೈ 21ರಂದು ಮಂಗಳೂರಿ (Mangalore) ನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​(Chocolate) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಇದೀಗ ರಾಯಚೂರಿ(Raichur)ನಲ್ಲಿ ಗಾಂಜಾ ಚಾಕೋಲೆಟ್ ಮಾರಾಟ ಮಾಡುವ ಗ್ಯಾಂಗ್​ ಪತ್ತೆಯಾಗಿದ್ದು, ಇಬ್ಬರನ್ನು ಅರೆಸ್ಟ್​ ಮಾಡಿದ್ದಾರೆ. ಇವರು ಉತ್ತರ ಪ್ರದೇಶದಿಂದ ಗಾಂಜಾವನ್ನು ತಂದು ರಾಯಚೂರಿನಲ್ಲಿ ಮಾರಾಟ ಮಾಡುತ್ತಿರುವುದಾಗಿ ತನಿಖೆಯಿಂದ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಟಾರ್ಗೆಟ್

ಇನ್ನು ಈ ದಂಧೆಕೋರರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರನ್ನ ಟಾರ್ಗೆಟ್ ಮಾಡಿದ್ದರು. ಹೌದು, ಇಂಡಸ್ಟ್ರಿಯಲ್ ಫ್ಯಾಕ್ಟರಿಗಳಲ್ಲಿ ಕೆಲಸ ಮಾಡುತ್ತಿದ್ದ ಕೆಲಸದವರ ಜೊತೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಇದನ್ನು ಮಾರಾಟ ಮಾಡುತ್ತಿದ್ದರು. ಇದನ್ನ ಮಕ್ಕಳು ತಿನ್ನುವ ಚಾಕೋಲೆಟ್ ಮಾದರಿಯಲ್ಲಿಯೇ ಗಾಂಜಾ ಚಾಕೋಲೆಟ್ ರೆಡಿ ಮಾಡಿದ್ದರು. ಜೊತೆಗೆ ಪ್ರತಿ ಚಾಕೋಲೆಟ್​ಗೆ 50ರಿಂದ60 ರೂಪಾಯಿಗೆ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ:ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಚರಣೆ, ಮಾದಕ ವಸ್ತು ಸಹಿತ ಪಿಸ್ತೂಲ್ ಹೊಂದಿದ್ದ ಡ್ರಗ್ ಪೆಡ್ಲರ್​ಗಳ ಬಂಧನ

ಅಬಕಾರಿ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಬೇಟೆ

ಇನ್ನು ಈ ಕುರಿತು ಖಚಿತ ಮಾಹಿತಿ ಮೇರೆಗೆ ರಾಯಚೂರು ನಗರದ ಎಲ್​.ಬಿ.ಎಸ್ ನಗರದ ಮನೆಯೊಂದರಲ್ಲಿ ದಾಳಿ ಮಾಡಿದ ಅಬಕಾರಿ ಇಲಾಖೆಯ ಅಧಿಕಾರಿಗಳು ರಾಚಯ್ಯ ಸ್ವಾಮಿ ಹಾಗೂ ಅಮರಯ್ಯ ಸ್ವಾಮಿ ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಕೆ.ಜಿ 66 ಗ್ರಾಂ ತೂಕದ ಗಾಂಜಾ ಚಾಕಲೇಟ್ ಜಪ್ತಿ ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More