ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ. ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ […]

ಅಮಾನತಾಗಿದ್ದ ಅಧಿಕಾರಿಯಿಂದಲೇ ಸರ್ಕಾರಿ ಹಣ ಲೂಟಿ
ಸಾಧು ಶ್ರೀನಾಥ್​

Updated on: Dec 28, 2019 | 9:30 AM

ರಾಯಚೂರು: ಕರ್ತವ್ಯಲೋಪದ ಆರೋಪದ ಮೇಲೆ ಅಮಾನತಾಗಿದ್ದರು ಅಧಿಕಾರಿಯೊಬ್ಬರು ಸರ್ಕಾರದ ಹಣ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಖಾತೆಯಲ್ಲಿದ್ದ 13 ಲಕ್ಷ ರೂಪಾಯಿಯನ್ನು ಮಾನ್ವಿ ತಾಲೂಕಿನ ಮದ್ಲಾಪುರ ಪಿಡಿಒ ಬಸವರಾಜ್ ಲಪಟಾಯಿಸಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದೆ.

ಮೃತಪಟ್ಟ ಕಾರ್ಮಿಕರ ಹೆಸರಲ್ಲಿ ಕೂಲಿ ಹಣ ಪಾವತಿಸಿ ಅಕ್ರಮ ಎಸಗಿದ್ದ. ಹೀಗಾಗಿ ಆಗಸ್ಟ್ ತಿಂಗಳಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಪಿಡಿಒರನ್ನು ಅಮಾನತು ಮಾಡಲಾಗಿತ್ತು. ಆದ್ರೆ ಅಮಾನತಾದ ಆಗಸ್ಟ್​ ತಿಂಗಳಿನಿಂದ ಅಕ್ಟೋಬರ್ ಅಂತ್ಯದವರೆಗೆ ಪಿಡಿಒ ಬಸವರಾಜ ಅಕ್ರಮವಾಗಿ ಸರ್ಕಾರದ ಹಣ ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಮತ್ತೊಮ್ಮೆ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಲಕ್ಷ್ಮಿಕಾಂತರೆಡ್ಡಿ ಆದೇಶಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಲ ಅಧಿಕಾರಿಗಳು ಪಿಡಿಒ ರಕ್ಷಣೆಗೆ ಪ್ರಯತ್ನಿಸಿ ವಿಫಲವಾಗಿದ್ದಾರೆ ಎನ್ನಲಾಗಿದೆ. ಆರೋಪಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಹಿಂದೇಟು ಹಾಕುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ತನಿಖೆಯಲ್ಲಿ ಆರೋಪಿ ವಿರುದ್ಧ ಕ್ರಿಮಿನಲ್ ಕೇಸ್​ಗೆ ಶಿಫಾರಸು ಮಾಡಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us