AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳನ್ನು ಮೀರಿಸಿ ನಂ.1 ಸ್ಥಾನ ಪಡೆದ ಸರ್ಕಾರಿ ಶಾಲೆ; ರಾಯಚೂರಿನಲ್ಲೇ ನಂಬರ್ ಒನ್ ಹೈಟೆಕ್ ಕಂಪ್ಯೂಟರ್ ಲ್ಯಾಬ್!

ವಿಜ್ಞಾನ, ಗಣಿತ ಸೇರಿ ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಡೆಮೊ ರೂಂ ಹಾಗೂ ಲ್ಯಾಬ್ ರೂಂ ಅಂತ ವಿಂಗಡಿಸಿ ಬೋಧನೆ ಮಾಡಲಾಗುತ್ತಿದೆ.

ಖಾಸಗಿ ಶಾಲೆಗಳನ್ನು ಮೀರಿಸಿ ನಂ.1 ಸ್ಥಾನ ಪಡೆದ ಸರ್ಕಾರಿ ಶಾಲೆ; ರಾಯಚೂರಿನಲ್ಲೇ ನಂಬರ್ ಒನ್ ಹೈಟೆಕ್ ಕಂಪ್ಯೂಟರ್ ಲ್ಯಾಬ್!
ಜವಳಗೇರಾ ಸರ್ಕಾರಿ ಶಾಲೆ
TV9 Web
| Edited By: |

Updated on:Dec 24, 2021 | 11:18 AM

Share

ರಾಯಚೂರು: ಖಾಸಗಿ ಶಾಲೆಗಳನ್ನು ಮೀರಿಸಿ ನಂ.1 ಸ್ಥಾನ ಪಡೆಯುವಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಸರ್ಕಾರಿ ಶಾಲೆ ಯಶಸ್ವಿಯಾಗಿದೆ. ರಾಯಚೂರು ಜಿಲ್ಲೆಯಲ್ಲೇ ನಂಬರ್​ ಒನ್ ಹೈಟೆಕ್ ಕಂಪ್ಯೂಟರ್ ಲ್ಯಾಬ್ (Computer lab) ಅನ್ನು ಜವಳಗೇರಾ ಸರ್ಕಾರಿ ಶಾಲೆ ಹೊಂದಿದ್ದು, ಈಗ ಕಂಪ್ಯೂಟರ್​ ಲ್ಯಾಬ್​ಗೆ ನಂ.1 ಸ್ಥಾನ ಸಿಕ್ಕಿದೆ. ಸುಮಾರು 1980 ವಿದ್ಯಾರ್ಥಿಗಳು (Students) ಈ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.  

ಸರ್ಕಾರಿ ಹೈಟೆಕ್​ ಕಂಪ್ಯೂಟರ್ ಲ್ಯಾಬ್​ಗೆ ಖಾಸಗಿ ಶಾಲಾ ಮಕ್ಕಳು ಮನಸೋತಿದ್ದಾರೆ. ಜವಳಗೇರಾ ಸರ್ಕಾರಿ ಶಾಲೆಯಲ್ಲಿ ಪ್ರೊಜೆಕ್ಟರ್, ಏಸಿ, ಎಲ್ಇಡಿ ಡಿಸ್​ಪ್ಲೇಯಲ್ಲಿ ಕಂಪ್ಯೂಟರ್ ಮೂಲಕವೇ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. 50ಕ್ಕೂ ಹೆಚ್ಚು ಕಂಪ್ಯೂಟರ್​ಗಳ ಮೂಲಕ ಭೋಧಿಸಲಾಗುತ್ತಿದ್ದು, ವಿವಿಧ ಹೈಟೆಕ್ ಉಪಕರಣಗಳ ಬಳಕೆ ಈ ಸರ್ಕಾರಿ ಶಾಲೆಯಲ್ಲಿ ಇದೆ.

ವಿಜ್ಞಾನ, ಗಣಿತ ಸೇರಿ ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಡೆಮೊ ರೂಂ ಹಾಗೂ ಲ್ಯಾಬ್ ರೂಂ ಅಂತ ವಿಂಗಡಿಸಿ ಬೋಧನೆ ಮಾಡಲಾಗುತ್ತಿದೆ. ವಿವಿಧ ಉಚಿತ ಸಾಫ್ಟ್​ವೇರ್​ಗಳ ಮೂಲಕವೇ ಮಕ್ಕಳಿಗೆ ತರಬೇತಿ ನೀಡುತ್ತಿರುವುದು ವಿಶೇಷ.

ಕೆಪಿಎಸ್​ಸಿ ಮೂಲಕ ಈ ಸೌಲಭ್ಯ ಸದ್ಬಳಕೆ ಮಾಡಿಕೊಂಡಿದ್ದೇವೆ. ಕಂಪ್ಯೂಟರ್ ಮೂಲಕವೇ ತರಬೇತಿ ನೀಡುತ್ತಿದ್ದೇವೆ. ಎಲ್ಲಾ ಮಕ್ಕಳಿಗೂ ಕಂಪ್ಯೂಟರ್ ಮೂಲಕವೇ ಟ್ರೈನಿಂಗ್ ನೀಡಲಾಗುತ್ತಿದೆ. ರಆಯಚೂರಿನಲ್ಲೇ ನಂಬರ್ ಒನ್ ಸ್ಥಾನ ಪಡೆದಿದ್ದೇವೆ ಎಂದು ಜವಳಗೇರಾ ಸರ್ಕಾರಿ ಶಾಲೆ ಶಿಕ್ಷಕ ಗಿರೀಶ್ ಹೇಳಿದ್ದಾರೆ.

ಕಂಪ್ಯೂಟರ್ ನೋಡಿದ್ವಿ ಅಷ್ಟೇ. ಅದನ್ನು ಬಳಕೆ ಮಾಡಿರಲಿಲ್ಲ. ಈ ಲ್ಯಾಬ್​ನಿಂದ ನಾವೇ ಕಂಪ್ಯೂಟರ್​ನಲ್ಲಿ ಕಲಿಯುತ್ತಿದ್ದೇವೆ. ಖಾಸಗಿ ಶಾಲೆ ಮಕ್ಕಳು, ನಮ್ಮ ಶಾಲೆಯಲ್ಲಿರುವ ಸೌಲಭ್ಯ ನಿಮ್ಮಲಿಲ್ಲ ಅಂತಿದ್ದರು. ಈಗ ನಮಗೂ ಎಲ್ಲಾ ಸೌಲಭ್ಯವಿದೆ. ಸರ್ಕಾರಿ ಶಾಲೆ ಮಕ್ಕಳು ದಡ್ಡರು ಅಂತಾರೆ. ಆದರೆ ಈಗ ನಮ್ಮ ಶಾಲೆ ಮಕ್ಕಳು ಯಾರಿಗೂ ಕಮ್ಮಿಯಿಲ್ಲ ಎಂದು ವಿದ್ಯಾರ್ಥಿನಿ ವಿಜಯಲಕ್ಷ್ಮೀ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:

ಮಕ್ಕಳಿಗೆ ಕಲಿಕೆಯಲ್ಲಿ ಆಸಕ್ತಿ ಹೆಚ್ಚಿಸಲು ಸ್ವಂತ ಹಣ ಖರ್ಚು ಮಾಡಿ, ಸರ್ಕಾರಿ ಶಾಲೆಯ ಅಭಿವೃದ್ಧಿ ಮಾಡಿದ ಪರಮೇಶ್ವರ್ ಟೀಚರ್!

ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ; ಎಲ್​ಪಿಜಿ ಉಳಿತಾಯ ಜಿಎಸ್​ಕೆ ಕಿಟ್​ ತಯಾರಿ

Published On - 10:53 am, Fri, 24 December 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ