AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳನ್ನು ಮೀರಿಸಿ ನಂ.1 ಸ್ಥಾನ ಪಡೆದ ಸರ್ಕಾರಿ ಶಾಲೆ; ರಾಯಚೂರಿನಲ್ಲೇ ನಂಬರ್ ಒನ್ ಹೈಟೆಕ್ ಕಂಪ್ಯೂಟರ್ ಲ್ಯಾಬ್!

ವಿಜ್ಞಾನ, ಗಣಿತ ಸೇರಿ ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಡೆಮೊ ರೂಂ ಹಾಗೂ ಲ್ಯಾಬ್ ರೂಂ ಅಂತ ವಿಂಗಡಿಸಿ ಬೋಧನೆ ಮಾಡಲಾಗುತ್ತಿದೆ.

ಖಾಸಗಿ ಶಾಲೆಗಳನ್ನು ಮೀರಿಸಿ ನಂ.1 ಸ್ಥಾನ ಪಡೆದ ಸರ್ಕಾರಿ ಶಾಲೆ; ರಾಯಚೂರಿನಲ್ಲೇ ನಂಬರ್ ಒನ್ ಹೈಟೆಕ್ ಕಂಪ್ಯೂಟರ್ ಲ್ಯಾಬ್!
ಜವಳಗೇರಾ ಸರ್ಕಾರಿ ಶಾಲೆ
TV9 Web
| Edited By: |

Updated on:Dec 24, 2021 | 11:18 AM

Share

ರಾಯಚೂರು: ಖಾಸಗಿ ಶಾಲೆಗಳನ್ನು ಮೀರಿಸಿ ನಂ.1 ಸ್ಥಾನ ಪಡೆಯುವಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಸರ್ಕಾರಿ ಶಾಲೆ ಯಶಸ್ವಿಯಾಗಿದೆ. ರಾಯಚೂರು ಜಿಲ್ಲೆಯಲ್ಲೇ ನಂಬರ್​ ಒನ್ ಹೈಟೆಕ್ ಕಂಪ್ಯೂಟರ್ ಲ್ಯಾಬ್ (Computer lab) ಅನ್ನು ಜವಳಗೇರಾ ಸರ್ಕಾರಿ ಶಾಲೆ ಹೊಂದಿದ್ದು, ಈಗ ಕಂಪ್ಯೂಟರ್​ ಲ್ಯಾಬ್​ಗೆ ನಂ.1 ಸ್ಥಾನ ಸಿಕ್ಕಿದೆ. ಸುಮಾರು 1980 ವಿದ್ಯಾರ್ಥಿಗಳು (Students) ಈ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.  

ಸರ್ಕಾರಿ ಹೈಟೆಕ್​ ಕಂಪ್ಯೂಟರ್ ಲ್ಯಾಬ್​ಗೆ ಖಾಸಗಿ ಶಾಲಾ ಮಕ್ಕಳು ಮನಸೋತಿದ್ದಾರೆ. ಜವಳಗೇರಾ ಸರ್ಕಾರಿ ಶಾಲೆಯಲ್ಲಿ ಪ್ರೊಜೆಕ್ಟರ್, ಏಸಿ, ಎಲ್ಇಡಿ ಡಿಸ್​ಪ್ಲೇಯಲ್ಲಿ ಕಂಪ್ಯೂಟರ್ ಮೂಲಕವೇ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. 50ಕ್ಕೂ ಹೆಚ್ಚು ಕಂಪ್ಯೂಟರ್​ಗಳ ಮೂಲಕ ಭೋಧಿಸಲಾಗುತ್ತಿದ್ದು, ವಿವಿಧ ಹೈಟೆಕ್ ಉಪಕರಣಗಳ ಬಳಕೆ ಈ ಸರ್ಕಾರಿ ಶಾಲೆಯಲ್ಲಿ ಇದೆ.

ವಿಜ್ಞಾನ, ಗಣಿತ ಸೇರಿ ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಡೆಮೊ ರೂಂ ಹಾಗೂ ಲ್ಯಾಬ್ ರೂಂ ಅಂತ ವಿಂಗಡಿಸಿ ಬೋಧನೆ ಮಾಡಲಾಗುತ್ತಿದೆ. ವಿವಿಧ ಉಚಿತ ಸಾಫ್ಟ್​ವೇರ್​ಗಳ ಮೂಲಕವೇ ಮಕ್ಕಳಿಗೆ ತರಬೇತಿ ನೀಡುತ್ತಿರುವುದು ವಿಶೇಷ.

ಕೆಪಿಎಸ್​ಸಿ ಮೂಲಕ ಈ ಸೌಲಭ್ಯ ಸದ್ಬಳಕೆ ಮಾಡಿಕೊಂಡಿದ್ದೇವೆ. ಕಂಪ್ಯೂಟರ್ ಮೂಲಕವೇ ತರಬೇತಿ ನೀಡುತ್ತಿದ್ದೇವೆ. ಎಲ್ಲಾ ಮಕ್ಕಳಿಗೂ ಕಂಪ್ಯೂಟರ್ ಮೂಲಕವೇ ಟ್ರೈನಿಂಗ್ ನೀಡಲಾಗುತ್ತಿದೆ. ರಆಯಚೂರಿನಲ್ಲೇ ನಂಬರ್ ಒನ್ ಸ್ಥಾನ ಪಡೆದಿದ್ದೇವೆ ಎಂದು ಜವಳಗೇರಾ ಸರ್ಕಾರಿ ಶಾಲೆ ಶಿಕ್ಷಕ ಗಿರೀಶ್ ಹೇಳಿದ್ದಾರೆ.

ಕಂಪ್ಯೂಟರ್ ನೋಡಿದ್ವಿ ಅಷ್ಟೇ. ಅದನ್ನು ಬಳಕೆ ಮಾಡಿರಲಿಲ್ಲ. ಈ ಲ್ಯಾಬ್​ನಿಂದ ನಾವೇ ಕಂಪ್ಯೂಟರ್​ನಲ್ಲಿ ಕಲಿಯುತ್ತಿದ್ದೇವೆ. ಖಾಸಗಿ ಶಾಲೆ ಮಕ್ಕಳು, ನಮ್ಮ ಶಾಲೆಯಲ್ಲಿರುವ ಸೌಲಭ್ಯ ನಿಮ್ಮಲಿಲ್ಲ ಅಂತಿದ್ದರು. ಈಗ ನಮಗೂ ಎಲ್ಲಾ ಸೌಲಭ್ಯವಿದೆ. ಸರ್ಕಾರಿ ಶಾಲೆ ಮಕ್ಕಳು ದಡ್ಡರು ಅಂತಾರೆ. ಆದರೆ ಈಗ ನಮ್ಮ ಶಾಲೆ ಮಕ್ಕಳು ಯಾರಿಗೂ ಕಮ್ಮಿಯಿಲ್ಲ ಎಂದು ವಿದ್ಯಾರ್ಥಿನಿ ವಿಜಯಲಕ್ಷ್ಮೀ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:

ಮಕ್ಕಳಿಗೆ ಕಲಿಕೆಯಲ್ಲಿ ಆಸಕ್ತಿ ಹೆಚ್ಚಿಸಲು ಸ್ವಂತ ಹಣ ಖರ್ಚು ಮಾಡಿ, ಸರ್ಕಾರಿ ಶಾಲೆಯ ಅಭಿವೃದ್ಧಿ ಮಾಡಿದ ಪರಮೇಶ್ವರ್ ಟೀಚರ್!

ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ; ಎಲ್​ಪಿಜಿ ಉಳಿತಾಯ ಜಿಎಸ್​ಕೆ ಕಿಟ್​ ತಯಾರಿ

Published On - 10:53 am, Fri, 24 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ