AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 1 ವರ್ಷ ಹಿಂದೆಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ವಿದ್ಯಾರ್ಥಿನಿಗೆ ಗಾಯ

ರಾಯಚೂರು ತಾಲೂಕಿನ ಅರಸಿಗೇರ ಗ್ರಾಮದದಲ್ಲಿ ಕೇವಲ ಒಂದು ವರ್ಷದ ಹಿಂದೆ ಅಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿಗೆ ಗಾಯವಾಗಿದೆ. ಇನ್ನು ಶಾಲೆಯ ಕಾಮಗಾರಿ ಎಷ್ಟರ ಮಟ್ಟಿಗೆ ಗುಣಮಟ್ಟವಾಗಿದೆ ಎನ್ನುವುದು ಸಾಬೀತಾಗಿದೆ.

ಕೇವಲ 1 ವರ್ಷ ಹಿಂದೆಷ್ಟೇ ನಿರ್ಮಿಸಲಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ವಿದ್ಯಾರ್ಥಿನಿಗೆ ಗಾಯ
ಭೀಮೇಶ್​​ ಪೂಜಾರ್
| Edited By: |

Updated on:Dec 28, 2023 | 5:56 PM

Share

ರಾಯಚೂರು, (ಡಿಸೆಂಬರ್ 28): ಕೇವಲ ಒಂದು ವರ್ಷದ ಹಿಂದೆ ಅಷ್ಟೇ ನಿರ್ಮಾಣವಾಗಿದ್ದ ಸರ್ಕಾರಿ ಶಾಲೆಯ ಮೇಲ್ಚಾವಣಿ(Govt School roof) ಕುಸಿದುಬಿದ್ದಿದೆ. ರಾಯಚೂರು (Raichur) ತಾಲೂಕಿನ ಅರಸಿಗೇರ ಗ್ರಾಮದ ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದುಬಿದ್ದಿದ್ದು, ಓರ್ವ ವಿದ್ಯಾರ್ಥಿನಿಗೆ ಗಾಯವಾಗಿದೆ. ನಿರ್ಮಿತಿ ಕೇಂದ್ರದ ವತಿಯಿಂದ ಕೇವಲ ಒಂದು ವರ್ಷದ ಹಿಂದೆ ಶಾಲಾ ಕಟ್ಟಡ ನಿರ್ಮಿಸಲಾಗಿತ್ತು. ಆದ್ರೆ, ಇದೀಗ ಒಂದೇ ವರ್ಷದ ಶಾಲೆಯ ಮೇಲ್ಚಾವಣಿ ಕುಸಿದಿದ್ದು, ಕಾಮಗಾರಿ ಎಷ್ಟು ಗುಣಮಟ್ಟವಾಗಿ ಮಾಡಿದ್ದಾರೆ ಎನ್ನುವುದು ಸಾಬೀತಾಗಿದೆ.

ಕಳಪೆ ಕಾಮಗಾರಿ ಮಾಡಿದ ಹಿನ್ನೆಲೆಯಲ್ಲಿ ಕೇವಲ ಒಂದೇ ವರ್ಷದಲ್ಲಿ ಶಾಲೆ ಮೇಲ್ಚಾವಣಿ ಕುಸಿದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದ್ರೆ, ಈ ಬಗ್ಗೆ  ಶಿಕ್ಷಣ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ಶಾಲೆ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9ಗೆ ಅರಸಿಗೆರಾ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ನರೇಶ್ ಪ್ರತಿಕ್ರಿಯಿಸಿದ್ದು, ನಾಲ್ಕು ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎನ್ನುವುದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಕೇವಲ ಐದನೇ ತರಗತಿ ವಿದ್ಯಾರ್ಥಿನಿ ಚಂದ್ರಕಲಾ ಎನ್ನುವ ಬಾಲಕಿಗೆ ಮಾತ್ರ ಸಣ್ಣ ಪುಟ್ಟ ಗಾಯಗಳಾಗಿವೆ. ಆಕೆಗೆ ಚಿಕಿತ್ಸೆ ಕೊಡಿಸಲಾಗಿದ್ದು ಈಗಾಗಲೇ ಆಕೆ ಮತ್ತೆ ಶಾಲೆಗೆ ಬರುತ್ತಿದ್ದಾಳೆ. ಘಟನೆ ನಡೆದ ದಿನವೇ ವಿದ್ಯಾರ್ಥಿನಿ ಚೇತರಿಸಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದರು.

Published On - 5:54 pm, Thu, 28 December 23

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?