AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಕಿಡಿಗೆ ಹೊತ್ತಿ ಉರಿದ ಗುಜರಿ ಅಂಗಡಿ, ರಾಯಚೂರಿನಲ್ಲಿ ನಾಲ್ಕೈದು ಕ್ವಿಂಟಲ್ ಹತ್ತಿ ಭಸ್ಮ

ರಾಯಚೂರಿನ ಗ್ರಾಮವೊಂದರಲ್ಲಿ ಹೊಲದಲ್ಲಿ ಬೆಳೆಯಲಾಗಿದ್ದ ಹತ್ತಿಯನ್ನು ಬಿಡಿಸಿ ಮನೆಯ ಮಾಳಿಗೆ ಮೇಲೆ ಸಂಗ್ರಹಿಸಲಾಗಿತ್ತು. ನಿನ್ನೆ ತಡ ರಾತ್ರಿ ಕಿಡಿಗೇಡಿಗಳು ಪಟಾಕಿಗೆ ಕಿಡಿ ಹೊತ್ತಿಸಿ ಹತ್ತಿಗೆ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ಪಟಾಕಿ ಕಿಡಿ ತಗುಲಿ ನಾಲ್ಕೈದು ಕ್ವಿಂಟಲ್ ಹತ್ತಿ ಸುಟ್ಟು ಭಸ್ಮವಾಗಿದೆ. ಹೊಗೆ ಆವರಿಸುತ್ತಿದ್ದಂತೆ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ.

ಪಟಾಕಿ ಕಿಡಿಗೆ ಹೊತ್ತಿ ಉರಿದ ಗುಜರಿ ಅಂಗಡಿ, ರಾಯಚೂರಿನಲ್ಲಿ ನಾಲ್ಕೈದು ಕ್ವಿಂಟಲ್ ಹತ್ತಿ ಭಸ್ಮ
ಪಟಾಕಿ ಕಿಡಿಗೆ ಹೊತ್ತಿ ಉರಿದ ಗುಜರಿ ಅಂಗಡಿ, ರಾಯಚೂರಿನಲ್ಲಿ ನಾಲ್ಕೈದು ಕ್ವಿಂಟಲ್ ಹತ್ತಿ ಭಸ್ಮ
TV9 Web
| Edited By: |

Updated on: Nov 14, 2023 | 1:20 PM

Share

ರಾಯಚೂರು, ನ.14: ರಾಜ್ಯದೆಲ್ಲೆಡೆ ದೀಪಾವಳಿ ಹಬ್ಬದ (Deepavali) ಸಂಭ್ರಮ ಮನೆ ಮಾಡಿದೆ. ಪಟಾಕಿ (Fire Crackers) ಸಿಡಿಸಿ ಕೆಲವರು ಸಂಭ್ರಮಿಸಿದರೆ ಮತ್ತೆ ಕೆಲವೆಡೆ ಅದೇ ಪಟಾಕಿಗಳಿಂದ ಅನಾಹುತಗಳು ಸಂಭವಿಸಿವೆ. ದೀಪಾವಳಿ ಹಬ್ಬದಂದೇ ಸುಮಾರು ಮೂರುವರೆ ಲಕ್ಷ ಬೆಲೆ ಬಾಳೋ 4 ಎಲೆಕ್ಟ್ರಿಕ್ ಬೈಕ್​ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ನು ಮತ್ತೊಂದೆಡೆ ರಾಯಚೂರಿನಲ್ಲಿ ಕಿಡಿಗೇಡಿಗಳ ಪಟಾಕಿ ಕೃತ್ಯಕ್ಕೆ ಹತ್ತಿ ರಾಶಿ ಸುಟ್ಟು ಭಸ್ಮವಾಗಿದೆ. ರಾಯಚೂರು ತಾಲೂಕಿನ ತುರುಕನಡೋಣಿ ಗ್ರಾಮದಲ್ಲಿ ಲತಮ್ಮ ಅನ್ನೋ ರೈತ ಮಹಿಳೆಗೆ ಸೇರಿದ ಹತ್ತಿ ಭಸ್ಮವಾಗಿದೆ. ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಲತಮ್ಮ ಅವರ ಬಾಳಿನಲ್ಲಿ ಕತ್ತಲು ಆವರಿಸಿದೆ.

ಹೊಲದಲ್ಲಿ ಬೆಳೆಯಲಾಗಿದ್ದ ಹತ್ತಿಯನ್ನು ಬಿಡಿಸಿ ಮನೆಯ ಮಾಳಿಗೆ ಮೇಲೆ ಸಂಗ್ರಹಿಸಲಾಗಿತ್ತು. ನಿನ್ನೆ ತಡ ರಾತ್ರಿ ಕಿಡಿಗೇಡಿಗಳು ಪಟಾಕಿಗೆ ಕಿಡಿ ಹೊತ್ತಿಸಿ ಹತ್ತಿಗೆ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ಪಟಾಕಿ ಕಿಡಿ ತಗುಲಿ ನಾಲ್ಕೈದು ಕ್ವಿಂಟಲ್ ಹತ್ತಿ ಸುಟ್ಟು ಭಸ್ಮವಾಗಿದೆ. ಹೊಗೆ ಆವರಿಸುತ್ತಿದ್ದಂತೆ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ. ಲಕ್ಷಾಂತರ ರೂ.ಮೌಲ್ಯದ ಹತ್ತಿ ಸುಟ್ಟ ಹಿನ್ನೆಲೆ ಈ ಬಗ್ಗೆ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಲತಮ್ಮ ಆಗ್ರಹಿಸಿದ್ದಾರೆ.

ಪಟಾಕಿಯಿಂದ ಗುಜರಿ ಅಂಗಡಿಗೆ ಬೆಂಕಿ

ಇನ್ನು ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಪಟಾಕಿಯಿಂದ ಗುಜರಿ ಅಂಗಡಿಗೆ ಬೆಂಕಿ ಹತ್ತುಕೊಂಡಿದೆ. ಮುಬಾರಕ್ ಎಂಬುವವರಿಗೆ ಸೇರಿದ ಗುಜುರಿ ಅಂಗಡಿಗೆ ಪಟಾಕಿ ಕಿಡಿ ಬಿದ್ದು ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಪಟಾಕಿಯ ಕಿಡಿ ಗುಜರಿ ಅಂಗಡಿ ಮೇಲೆ ಬಿದ್ದು ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ: ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಸತ್ಯ ಒಪ್ಪಿಕೊಂಡ ಕುಮಾರಸ್ವಾಮಿ ಹೇಳಿದ್ದಿಷ್ಟು!

ಪಟಾಕಿಯಿಂದಲೇ ಕತ್ತಲಾಯ್ತು ಹಲವರ ಬದುಕು

ದೀಪಾವಳಿ ಹಬ್ಬದ ದಿನವೇ ಹಲವರ ಬದುಕು ಕತ್ತಲಾಗಿದೆ. ಬೆಂಗಳೂರಿನಲ್ಲಿ ಪಟಾಕಿ ಸಿಡಿಸಿದ ಹಲವರು ಕಣ್ಣು ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಟಾಕಿ ಸಿಡಿಸುವ ವೇಳೆ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಯಾಗಿದೆ. ಇದರಲ್ಲಿ 13 ಮಂದಿ ಮಕ್ಕಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರು ಸಿಡಿಸಿದ ಪಟಾಕಿಯಿಂದಲೇ 12 ಮಂದಿಗೆ ಗಾಯವಾಗಿದೆ. ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​