AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಧ ವಿದ್ಯಾರ್ಥಿಗಳು, ಪ್ರಿನ್ಸಿಪಲ್ ನಡುವೆ ಜಟಾಪಟಿ! ರಾಯಚೂರಿನಲ್ಲಿ ವಿಶೇಷ ಚೇತನರ ಸಂಘದಿಂದ ಕಾಲೇಜು ಪ್ರಿನ್ಸಿಪಲ್​ಗೆ ತರಾಟೆ

ಮೇ 24 ರಂದು ವಿವಿಧ ವಿಷಯಗಳ ಪದವಿ ಪರೀಕ್ಷೆ ನಡೆಸಲಾಗಿತ್ತು. ಹೀಗಾಗಿ ಇದೇ ಕಾಲೇಜಿಗೆ ಬೇರೆ ಕಾಲೇಜಿನ ಮೂವರು ಅಂಧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಪರೀಕ್ಷೆ ಬರೆಯಲು ಹೋಗಿದ್ದ ದೇವಪ್ಪ, ದೊಡ್ಡೇಶ್ ಹಾಗೂ ಭೀಮಾಶಂಕರ್ ಹೋಗಿದ್ದರು.

ಅಂಧ ವಿದ್ಯಾರ್ಥಿಗಳು, ಪ್ರಿನ್ಸಿಪಲ್ ನಡುವೆ ಜಟಾಪಟಿ! ರಾಯಚೂರಿನಲ್ಲಿ ವಿಶೇಷ ಚೇತನರ ಸಂಘದಿಂದ ಕಾಲೇಜು ಪ್ರಿನ್ಸಿಪಲ್​ಗೆ ತರಾಟೆ
ಅಂಧ ವಿದ್ಯಾರ್ಥಿಗಳು, ಪ್ರಿನ್ಸಿಪಲ್ ಪ್ರಿನ್ಸಿಪಲ್
TV9 Web
| Edited By: |

Updated on: May 26, 2022 | 12:12 PM

Share

ರಾಯಚೂರು: ಅಂಧ ವಿದ್ಯಾರ್ಥಿಗಳು (Blind Students) ಹಾಗೂ ಪ್ರಿನ್ಸಿಪಲ್ ನಡುವೆ ಜಟಾಪಟಿ ನಡೆದಿರುವ ಘಟನೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಮೊಬೈಲ್ (Mobile) ವಿಚಾರವಾಗಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿಬಂದಿದ್ದು, ವಿಶೇಷ ಚೇತನರ ಸಂಘ ಕಾಲೇಜು ಪ್ರಿನ್ಸಿಪಲ್ನ ತರಾಟೆಗೆ ತೆಗೆದುಕೊಂಡಿದೆ. ಇದೇ ಮೇ 24 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಿನ್ಸಿಪಲ್ ವೆಂಕಣ್ಣರನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೇ 24 ರಂದು ವಿವಿಧ ವಿಷಯಗಳ ಪದವಿ ಪರೀಕ್ಷೆ ನಡೆಸಲಾಗಿತ್ತು. ಹೀಗಾಗಿ ಇದೇ ಕಾಲೇಜಿಗೆ ಬೇರೆ ಕಾಲೇಜಿನ ಮೂವರು ಅಂಧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಪರೀಕ್ಷೆ ಬರೆಯಲು ಹೋಗಿದ್ದ ದೇವಪ್ಪ, ದೊಡ್ಡೇಶ್ ಹಾಗೂ ಭೀಮಾಶಂಕರ್ ಹೋಗಿದ್ದರು. ಈ ವೇಳೆ ಓರ್ವ ಅಂಧ ವಿದ್ಯಾರ್ಥಿ ಮೊಬೈಲ್ ಇಟ್ಟುಕೊಂಡಿದ್ದ. ಆಗ ಅದನ್ನು ಪ್ರಶ್ನಿಸಿ, ಪ್ರಿನ್ಸಿಪಲ್ ವೆಂಕಣ್ಣ ಮೊಬೈಲ್ ಹೊರಗಿಡಿಸಿದ್ದರು.

ಇದೇ ವೇಳೆ ಪರೀಕ್ಷೆಯ ಪೇಪರ್ ಕಸಿದುಕೊಂಡು ಗಂಟೆಗಟ್ಟಲೆ ವಾಪಸ್ ನೀಡದ ಆರೋಪ ಕೇಳಿಬಂದಿದೆ. ಕುರುಡರು, ಕುಂಟರಿಗೆ ಸ್ಪೆಷಲ್ ಟ್ಯಾಲೆಂಟ್ ಅಂದರೆ ಮೋಸ ಮಾಡೋದು ಅಂತ ಪ್ರಿನ್ಸಿಪಲ್ ವೆಂಕಣ್ಣ ಹೇಳಿದ್ದಾರೆಂಬ ಆರೋಪ ಕೇಳಿಬಂದಿದೆ. ಇದೇ ವಿಚಾರವಾಗಿ ಕ್ಷಮೆಯಾಚಿಸುವಂತೆ ಅಂಗವಿಕಲರ ಸಂಘ ಹೋರಾಟ ಮಾಡಿದೆ. ಕಣ್ಣೇ ಕಾಣಲ್ಲ ಮೊಬೈಲ್​ನಲ್ಲಿ ನೋಡಿ ಬರಿಯೋದೇನಿದೆ ಅಂತ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಮೊಬೈಲ್ ಬಳಕೆ ಮಾಡಿದ್ದರೇ ಡಿಬಾರ್ ಮಾಡಲಿ. ವಿಶೇಷ ಚೇತನರಾಗಿರುವ ನಮ್ಮನ್ನ ಅವಮಾನಿಸಿದ್ದೇಕೆ ಅಂತ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
Rajat Patidar: ನಿನ್ನೆಯ ಒಂದೇ ಪಂದ್ಯದಿಂದ ರಜತ್ ಪಟಿದಾರ್​ಗೆ ಸಿಕ್ಕ ಒಟ್ಟು ಹಣವೆಷ್ಟು ಗೊತ್ತೇ?: ಶಾಕ್ ಆಗ್ತೀರಾ
Image
Better Sleep: ಹೀಗೆ ಮಾಡಿ, ರಾತ್ರಿ ನಿದ್ರಾದೇವತೆ ನಿಮ್ಮನ್ನು ಸದ್ದಿಲ್ಲದೆ ಹೇಗೆ ಆವರಿಸುತ್ತಾಳೆ ನೋಡಿ
Image
8 Years of Modi Government ಜನರಿಂದ ಅಭಿಪ್ರಾಯ ಪಡೆಯಲು ಕೇಂದ್ರ ಸರಕಾರ ತೆರದಿರುವ ಕೆಲವು ವೆಬ್​ಸೈಟ್​ಗಳು ಇಲ್ಲಿವೆ
Image
Family Conflict: ಮಕ್ಕಳ ಮುಂದೆ ಜಗಳವಾಡುವುದು ಕಡಿಮೆ ಮಾಡಿ ಮಾನಸಿಕ ಆರೋಗ್ಯ ಕಾಪಾಡಿ

ಇದನ್ನೂ ಓದಿ: 8 Years of Modi Government ಜನರಿಂದ ಅಭಿಪ್ರಾಯ ಪಡೆಯಲು ಕೇಂದ್ರ ಸರಕಾರ ತೆರದಿರುವ ಕೆಲವು ವೆಬ್​ಸೈಟ್​ಗಳು ಇಲ್ಲಿವೆ

ಮೊಬೈಲ್ ಇದ್ದರೆ ಪರೀಕ್ಷಾಧಿಕಾರಿಗಳು ಕ್ರಮಕೈಗೊಳ್ಳುತ್ತಾರೆ. ಅದಕ್ಕೆ ಹಾಗೇ ವಾರ್ನ್ ಮಾಡಿದ್ದು ನಿಜ. ಆದರೆ, ನಿಂದಿಸಿಲ್ಲ ಅಂತ ಪ್ರಿನ್ಸಿಪಲ್ ವೆಂಕಣ್ಣ ತಿಳಿಸಿದ್ದಾರೆ. ಕೂಡಲೇ ಪ್ರಿನ್ಸಿಪಲ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗೆ ದೂರು ನೀಡಿ, ಉಗ್ರ ಹೋರಾಟ ಮಾಡೋದಾಗಿ ವಿಶೇಷ ಚೇತನ ಸಂಘ ಎಚ್ಚರಿಕೆ ನೀಡಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ