AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಹೃದಯ ಹಿಂಡುವ ಪ್ರಕರಣ, ಜೋಗಿ ಸಿನಿಮಾ ರೀತಿ ಹೆತ್ತ ತಾಯಿಯ ಹೆಣದ ಮುಂದೆ ಅಬೋಧ ಕಂದಮ್ಮ ಕಿಲಕಿಲ

20 ದಿನಗಳ ಹಸುಗೂಸು, ಅಬೋಧ ಕಂದಮ್ಮ ಇಡೀ ರಾತ್ರಿ ಒಮ್ಮೆ ಅಳುತ್ತಾ (neonatal kid weeping) ಮಗದೊಮ್ಮೆ ಕಿಲಕಿಲ ಅನ್ನುತ್ತಾ ತಾಯಿಯ ಶವದ ಜೊತೆಗೆ ಕಾಲ ಕಳೆದಿದೆ..ಇಡೀ ರಾತ್ರಿ ಅಮ್ಮನ ಎದೆಹಾಲು ಇಲ್ಲದೇ ಕಣ್ಣೀರಿಟ್ಟಿದ್ದ ಹಸುಗೂಸು ಬೆಳಿಗ್ಗೆ ಜೋರಾಗಿ ಅಳಲು ಶುರುಮಾಡಿತ್ತು.. ಆಗ ನಿದ್ದೆಯಿಂದ ಎದ್ದಿದ್ದ ತಂದೆ ಅವಿನಾಶ್ ನೋಡಿದಾಗ

ಕಲ್ಲು ಹೃದಯ ಹಿಂಡುವ ಪ್ರಕರಣ, ಜೋಗಿ ಸಿನಿಮಾ ರೀತಿ ಹೆತ್ತ ತಾಯಿಯ ಹೆಣದ ಮುಂದೆ ಅಬೋಧ ಕಂದಮ್ಮ ಕಿಲಕಿಲ
ಜೋಗಿ ಸಿನಿಮಾ ರೀತಿ ಹೆತ್ತ ತಾಯಿಯ ಹೆಣದ ಮುಂದೆ ಅಬೋಧ ಕಂದಮ್ಮ ಕಿಲಕಿಲ
ಭೀಮೇಶ್​​ ಪೂಜಾರ್
| Edited By: |

Updated on: Dec 14, 2023 | 11:06 AM

Share

ಒಂದು ಕಡೆ ಗಾಬರಿಗೊಂಡಿರೊ ಸಿಬ್ಬಂದಿ.. ಏನಾಯ್ತು ಅಂತ ಗೊತ್ತೇ ಆಗದ ಸ್ಥಿತಿಯಲ್ಲಿರುವ ಪರಿಚಯಸ್ಥರು. ಲಾಠಿ ಹಿಡಿದು ಪರಿಶೀಲನೆ ಮಾಡ್ತಿರೊ ಪೊಲೀಸರು. ಇದನ್ನೆಲ್ಲಾ ನೋಡಿದ್ರೆ ಅಲ್ಲೇನೋ ಆಗಿದೆ ಅಂತ ಅನ್ನಿಸದೇ ಇರಲ್ಲ. ಹೌದು ಅಲ್ಲಾಗಿದ್ದು ಅದೇ.. ಅಲ್ಲೊಬ್ಬ ಗೃಹಿಣಿ ರಾತ್ರೋರಾತ್ರಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಆತನ ಹೆಸ್ರು ಅವಿನಾಶ್.. ಆತ ಮೂಲತಃ ಉತ್ತರ ಪ್ರದೇಶದವ. ಕೆಲ ವರ್ಷಗಳ ಹಿಂದೆ ಹೊಟ್ಟೆಪಾಡಿಗಾಗಿ ರಾಯಚೂರಿಗೆ ಬಂದಿದ್ದ. ಹೀಗೆ ಬಂದಿದ್ದ ಈತ ರಾಯಚೂರು ನಗರದ ಸಂತೋಷ್ ಸರೋವರ ಅನ್ನೋ ಲಾಡ್ಜ್ ಕಂ ಹೊಟೆಲ್​ನಲ್ಲಿ ಕೆಲಸಕ್ಕೆ ಸೇರಿದ್ದ..ಇಲ್ಲಿ ಆ ಭಾಗದ ಅನೇಕ ಜನ ಕೆಲಸಕ್ಕಿದ್ದಿದ್ರಿಂದ ಆತ ಇಲ್ಲಿ ಕೆಲವೇ ದಿನಗಳಲ್ಲಿ ಅಡ್ಜಸ್ಟ್ ಆಗಿ ಸೋನು ಅನ್ನೋ 23 ವರ್ಷದ ಯುವತಿಯನ್ನ ಮದುವೆಯಾಗಿದ್ದ (mother). ನಂತ್ರ ಆಕೆಯನ್ನ ಇಲ್ಲೇ ರಾಯಚೂರಿಗೆ (Raichur) ಕರೆತಂದಿದ್ದ..ಈತ ಇದೇ ಹೊಟೆಲ್​ನಲ್ಲಿ ಸ್ವೀಟ್ ಮಾಡೋ ಕೆಲಸದಲ್ಲಿ ತೊಡಗಿಕೊಂಡ್ರೆ,ಆಕೆ ಪತಿಗೆ ಸಹಾಯ ಮಾಡ್ತಿದ್ಲು..ಇದೇ ಹೊಟೆಲ್​​ನಲ್ಲೇ ಇವ್ರಿಗೆ ಇರಲು ರೂಂ ವ್ಯವಸ್ಥೆ ಮಾಡಿಕೊಡಲಾಗಿತ್ತು..ಈ ಸೋನಿ ಹಾಗೂ ಅವಿನಾಶ್ ಸುಖಸಂಸಾರದ ಭಾಗವಾಗಿ 20 ದಿನಗಳ ಹಿಂದೆ ಸೋನು ಗಂಡು ಮಗುವಿಗೆ ಜನ್ಮ ನೀಡಿದ್ಲು. ನಾರ್ಮಲ್ ಡೆಲಿವರಿ ಆಗದ ಹಿನ್ನೆಲೆ ಸಿಜೇರಿಯನ್ ಮೂಲಕ ಡೆಲಿವರಿ ಮಾಡಲಾಗಿತ್ತು. ಸಿಜೆರಿಯನ್ ನೋವನ್ನ ತಡೆದುಕೊಳ್ಳಲಾಗದೇ ಇದ್ದದ್ದರಿಂದ ಸೋನು ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿದ್ದಾಳೆ.

ಹೌದು.. ಮೊನ್ನೆ ಭಾರತ ಹಾಗೂ ದಕ್ಷಿಣಾ ಆಫ್ರಿಕಾ ನಡುವೆ ಟಿ-ಟ್ವೆಂಟಿ ಪಂದ್ಯ ಇತ್ತು. ಕೆಲಸ ಮುಗಿದ ಬಳಿಕ ಪತಿ ಅವಿನಾಶ್ ತನ್ನ ಸ್ನೇಹಿತರ ರೂಂನಲ್ಲಿ ಕ್ರಿಕೆಟ್ ನೋಡ್ತಿದ್ದ.. ಅದು ಮಗಿಯೋವಷ್ಟರಲ್ಲಿ ಸುಮಾರು ಮಧ್ಯರಾತ್ರಿ 12.30 ಆಗಿತ್ತು.. ನಂತರ ತನ್ನ ರೂಂಗೆ ಬಂದಿದ್ದ ಅವಿನಾಶ್ ಪತ್ನಿ ಹಾಗೂ ಪಾಪು ಮಲಗಿದ್ದನ್ನ ನೋಡಿ ತಾನೂ ಸೈಲೆಂಟಾಗಿ ಮಲಗಿದ್ದ.. ಈ ಮಧ್ಯೆ ಪತ್ನಿ ಸೋನು ಎಂದಿನಂತೆ ತನ್ನ ಪತಿ ಮಲಗಿದ ಬಳಿಕ ಸುಸೈಡ್ ಮಾಡಿಕೊಂಡಿದ್ದಾಳೆ.

20 ದಿನಗಳ ಹಸುಗೂಸು, ಅಬೋಧ ಕಂದಮ್ಮ ಇಡೀ ರಾತ್ರಿ ಒಮ್ಮೆ ಅಳುತ್ತಾ (neonatal kid weeping) ಮಗದೊಮ್ಮೆ ಕಿಲಕಿಲ ಅನ್ನುತ್ತಾ ತಾಯಿಯ ಶವದ ಜೊತೆಗೆ ಕಾಲ ಕಳೆದಿದೆ..ಇಡೀ ರಾತ್ರಿ ಅಮ್ಮನ ಎದೆಹಾಲು ಇಲ್ಲದೇ ಕಣ್ಣೀರಿಟ್ಟಿದ್ದ ಹಸುಗೂಸು ಬೆಳಿಗ್ಗೆ ಜೋರಾಗಿ ಅಳಲು ಶುರುಮಾಡಿತ್ತು..ಆಗ ನಿದ್ದೆಯಿಂದ ಎದ್ದಿದ್ದ ತಂದೆ ಅವಿನಾಶ್ ಮಗು ಯಾಕೆ ಅಳುತ್ತಿದೆ ಅಂತ ನೋಡಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರೊ ವಿಷಯ ಬೆಳಕಿಗೆ ಬಂದಿದೆ..ತಾಯಿ ಶವವನ್ನ ಶಿಫ್ಟ್ ಮಾಡೋ ವೇಳೆ ತಾಯಿ ಮೃತದೇಹದ ಹಿಂದೆ 20 ದಿನಗಳ ಕಂದಮ್ಮ ಅಳುತ್ತಾ ಬೇರೊಬ್ಬ ಮಹಿಳೆಯ ಮಡಿಲಿನಲ್ಲಿತ್ತು.

ಇದನ್ನೂ ಓದಿ: ಟ್ರಾಕ್ಟರ್ ಉಳುಮೆ ಮಾಡುವಾಗ ತೋಟದಲ್ಲಿ ಪತ್ತೆಯಾಯ್ತು ಮೃತ ದೇಹ, ದಂಗಾದ ರೈತ, ಮುಂದೇನಾಯ್ತು?

ಘಟನೆ ಬಳಿಕ ರಾಯಚೂರು ಪಶ್ಚಿಮ ಪೊಲೀಸರು ಪರಿಶೀಲನೆ ನಡೆಸಿದ್ರು. 20 ದಿನದ ಹಿಂದೆ ಸಿಜೇರಿಯನ್ ಆದ ಬಳಿಕ ಹೊಟ್ಟೆ ಮೇಲೆ ಹೊಲಿಗೆ ಹಾಕಿದ ಗಾಯ ವಾಸಿಯಾಗಿರ್ಲಿಲ್ಲವಂತೆ..ಇದರ ನೋವಿನಿಂದ ನಿತ್ಯ ನರಳಾಡುತ್ತಿದ್ದ ಸೋನು ಮೊನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅನ್ನೋದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ಸದ್ಯ ಈ ಬಗ್ಗೆ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೀತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು