AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸಿಗೆ ಹಿಡಿಯುವಂತೆ ಮಾಡಿದ ಹಿಟ್ ಅಂಡ್ ರನ್ ಕೇಸ್; ಆಸ್ಪತ್ರೆಗೆ ಹಣ ಕಟ್ಟಲಾಗದೇ ಕಣ್ಣೀರು ಹಾಕಿದ ವಿಶೇಷಚೇತನ ಮಹಿಳೆ

ವಿಶೇಷಚೇತನ ಮಹಿಳೆ ಸಂತೋಷಮ್ಮ ಅವರ ನಾಲ್ಕು ಚಕ್ರದ ಬೈಕ್​ಗೆ ಕಾರ್ ಡಿಕ್ಕಿಯಾಗಿದೆ. ಕಾರ್ ಡಿಕ್ಕಿ ರಭಸಕ್ಕೆ ಬೈಕ್​ನಿಂದ ಪುಟಿದು ಸಂತೋಷಮ್ಮ ಕೆಳಬಿದ್ದಿದ್ದಾರೆ. ನಂತರ ಆಕೆ ಮೇಲೆ ಹರಿಯುತ್ತಿದ್ದ ಬೈಕ್ ಅನ್ನು ಅಲ್ಲಿದ್ದ ಸ್ಥಳೀಯರು ತಡೆದಿದ್ದಾರೆ. ಆದರೆ ಜನಸೇರುತ್ತಿದ್ದಂತೆ ಅಪಘಾತ ಮಾಡಿದ, ಕಾರು ಚಾಲಕ ಪರಾರಿಯಾಗಿದ್ದಾನೆ.

ಹಾಸಿಗೆ ಹಿಡಿಯುವಂತೆ ಮಾಡಿದ ಹಿಟ್ ಅಂಡ್ ರನ್ ಕೇಸ್; ಆಸ್ಪತ್ರೆಗೆ ಹಣ ಕಟ್ಟಲಾಗದೇ ಕಣ್ಣೀರು ಹಾಕಿದ ವಿಶೇಷಚೇತನ ಮಹಿಳೆ
ಅಪಘಾತ
TV9 Web
| Edited By: |

Updated on:Dec 26, 2021 | 11:48 AM

Share

ರಾಯಚೂರು: ಆಕೆ ದುಡಿದು ಸಂಸಾರ ನಡೆಸುತ್ತಿದ್ದ ವಿಶೇಷಚೇತನ ಮಹಿಳೆ. ಆದರೆ ಡಿಸೆಂಬರ್​ 5 ರಂದು ಸಂಜೆ ನಡೆದ ಭೀಕರ ಅಪಘಾತದಿಂದ ಶಾಶ್ವತವಾಗಿ ಹಾಸಿಗೆ ಹಿಡಿಯುವಂತೆ ಆಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಸಂತೋಷಮ್ಮ ಎಂಬ ವಿಶೇಷಚೇತನ ಮಹಿಳೆಗೆ ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿ ಅಪಘಾತವಾಗಿದೆ. ಆದರೆ ಇದು ಕೇವಲ ಅಪಘಾತವಲ್ಲ ಹಿಟ್ ಅಂಡ್ ರನ್ ಕೇಸ್. ಸದ್ಯ ಈ ಅಪಘಾತದ (Accident) ಭಯಾನಕ ದೃಶ್ಯ ಡಿವಿ9 ಡಿಜಿಟಲ್​ಗೆ ಸಿಕ್ಕಿದೆ.

ಇದೇ ಡಿಸೆಂಬರ್ 5 ರ ಸಂಜೆ ಹೊತ್ತಿಗೆ ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿ ಭೀಕರ ಅಪಘಾತ ನಡೆದಿದೆ. ವಿಶೇಷಚೇತನ ಮಹಿಳೆ ಸಂತೋಷಮ್ಮ ಅವರ ನಾಲ್ಕು ಚಕ್ರದ ಬೈಕ್​ಗೆ ಕಾರ್ ಡಿಕ್ಕಿಯಾಗಿದೆ. ಕಾರ್ ಡಿಕ್ಕಿ ರಭಸಕ್ಕೆ ಬೈಕ್​ನಿಂದ ಪುಟಿದು ಸಂತೋಷಮ್ಮ ಕೆಳಬಿದ್ದಿದ್ದಾರೆ. ನಂತರ ಆಕೆ ಮೇಲೆ ಹರಿಯುತ್ತಿದ್ದ ಬೈಕ್ ಅನ್ನು ಅಲ್ಲಿದ್ದ ಸ್ಥಳೀಯರು ತಡೆದಿದ್ದಾರೆ. ಆದರೆ ಜನಸೇರುತ್ತಿದ್ದಂತೆ ಅಪಘಾತ ಮಾಡಿದ, ಕಾರು ಚಾಲಕ ಪರಾರಿಯಾಗಿದ್ದಾನೆ.

ಆಗ ಸ್ಥಳದಲ್ಲಿದ್ದ ಓರ್ವ ಪೊಲೀಸ್ ಕಾನ್ಸ್​ಟೇಬಲ್​ ತಮ್ಮ ವ್ಯಾಪ್ತಿ ಅಲ್ಲ ಎಂದು ಕಾರು ಚಾಲಕನನ್ನು ಹಿಡಿಯದೆ ನಿರ್ಲಕ್ಷ್ಯ ಮಾಡಿದ್ದಾರೆ. ಈ ಅಪಘಾತದಿಂದ ಸಂತೋಷಮ್ಮಳ ಎಡಗಾಲು ಮುರಿದಿದೆ. ಈ ಬಗ್ಗೆ ದೂರು ದಾಖಲಿಸಿಕೊಳ್ಳಲು ಪೊಲೀಸರು ಮೀನಮೇಷ ಎಣಿಸುತ್ತಿದ್ದು, ನೇತಾಜಿ ನಗರ ಪೊಲೀಸರು ಹಾಗೂ ಟ್ರಾಫಿಕ್ ಪೊಲೀಸರು ಹಗ್ಗಜಗ್ಗಾಟ ಆಡುತ್ತಿದ್ದಾರೆ. ಆದರೆ ಅಪಘಾತದಿಂದ ವಿಶೇಷಚೇತನ ಮಹಿಳೆ ಸಂತೋಷಮ್ಮ ಆಸ್ಪತ್ರೆಗೆ ಹಣ ಕಟ್ಟಲಾಗದೇ ಮನೆಯಲ್ಲೇ ಹಾಸಿಗೆ ಹಿಡಿದಿದ್ದು, ಕಣ್ಣಿರು ಹಾಕುತ್ತಿದ್ದಾರೆ.

ಬಾಗಲಕೋಟೆ:  ಬಾವಿಗೆ ಬಿದ್ದ ಟ್ರ್ಯಾಕ್ಟರ್ ಎಂಜಿನ್; ಸ್ಥಳದಲ್ಲೇ ಸಾವನ್ನಪ್ಪಿದ ಚಾಲಕ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಟ್ರ್ಯಾಕ್ಟರ್ ಎಂಜಿನ್ ಬಾವಿಗೆ ಬಿದ್ದಿದ್ದು, ಚಾಲಕ ದೇವಪ್ಪ ರಾಠೋಡ್(26) ಸಾವನ್ನಪ್ಪಿದ್ದಾರೆ. ಬಾವಿಗೆ ಟ್ರ್ಯಾಕ್ಟರ್ ಸಮೀಪಿಸುತ್ತಿದ್ದಂತೆ ಟ್ರ್ಯಾಕ್ಟರ್​ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇಳಕಲ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಹುಣಶ್ಯಾಳ ಗ್ರಾಮದವರಾದ ದೇವಪ್ಪ ರಾಠೋಡ್ ಹಾಗೂ ಮಂಜುನಾಥ ರಾಠೋಡ್ ಇಬ್ಬರು ಕಬ್ಬು ಕಡಿಯುವ ಕಾರ್ಮಿಕರು. ಚಂದ್ರಶೇಖರ್ ಕಂಟಿ ಎಂಬುವವರ ಹೊಲದ ಬಾವಿಯಲ್ಲಿ ತಿರುವು ವೇಳೆ ನಿಯಂತ್ರಣ ತಪ್ಪಿ ಬಾವಿಗೆ  ಟ್ರ್ಯಾಕ್ಟರ್ ಸಮೇತ ದೇವಪ್ಪ ರಾಠೋಡ್ ಬಿದ್ದಿದ್ದಾರೆ. ಇಳಕಲ್ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು,  ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 700 ಕಿ.ಮೀ.ದೂರದ ಊರಿಗೆ ವಿಶೇಷಚೇತನನನ್ನು ಕಳುಹಿಸಿಕೊಟ್ಟ ತಹಶೀಲ್ದಾರ್; ಲಾಕ್​ಡೌನ್ ನಡುವೆಯೂ ಮನವಿಗೆ ಸ್ಪಂದನೆ

ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ನರಳಾಡಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಗಾಯಾಳುಗಳು; ದಾವಣಗೆರೆ ಜಿಲ್ಲಾಡಳಿತ ವಿರುದ್ಧ ಸ್ಥಳೀಯರ ಆಕ್ರೋಶ

Published On - 11:36 am, Sun, 26 December 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್