ಲಿಂಗಸುಗೂರು: ಹೊಸ ವರ್ಷಾಚರಣೆ ವೇಳೆ ಹಾಸ್ಟೆಲಿಗೆ ನುಗ್ಗಿ ವಿದ್ಯಾರ್ಥಿಗಳ ಥಳಿಸಿದ ಕಿಡಿಗೇಡಿಗಳು, ಐವರು ಅರೆಸ್ಟ್‌

Lingasugur Hostel: ವಿದ್ಯಾರ್ಥಿಗಳ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಕಿಡಿಗೇಡಿಗಳ ತಂಡ ಹಾಸ್ಟೆಲ್ ನಿಂದ ಎಸ್ಕೇಪ್ ಆಗಿತ್ತು. ಲಿಂಗಸುಗೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು ಐದು ಜನ ಆರೋಪಿಗಳನ್ನ ಬಂಧಿಸಿದ್ದಾರೆ.

ಲಿಂಗಸುಗೂರು: ಹೊಸ ವರ್ಷಾಚರಣೆ ವೇಳೆ ಹಾಸ್ಟೆಲಿಗೆ ನುಗ್ಗಿ ವಿದ್ಯಾರ್ಥಿಗಳ ಥಳಿಸಿದ ಕಿಡಿಗೇಡಿಗಳು, ಐವರು ಅರೆಸ್ಟ್‌
ಲಿಂಗಸುಗೂರು: ಹೊಸ ವರ್ಷಾಚರಣೆ ವೇಳೆ ಹಾಸ್ಟೆಲಿಗೆ ನುಗ್ಗಿ ಕಿರಿಕ್ ಮಾಡಿದ ಕಿಡಿಗೇಡಿಗಳು, ಐವರು ಅರೆಸ್ಟ್‌
Follow us
| Updated By: ಸಾಧು ಶ್ರೀನಾಥ್​

Updated on:Jan 05, 2023 | 2:46 PM

ರಾಯಚೂರು: ಹೊಸ ವರ್ಷದ ದಿನವೇ ಹಾಸ್ಟೆಲ್ (Hostel)ಗೆ ನುಗ್ಗಿ ಕಿಡಿಗೇಡಿಗಳ ಗುಂಪೊಂದು ವಿದ್ಯಾರ್ಥಿಗಳ (students) ಮೇಲೆ ಹಲ್ಲೆ ನಡೆಸಿರೊ ಘಟನೆ ರಾಯಚೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು (Lingasugur Raichur) ಪಟ್ಟಣದ ಹೊರ ವಲಯದ ಸರ್ಕಾರಿ ಹಾಸ್ಟೆಲ್ ನಲ್ಲಿ ನಡೆದಿದೆ. ಜನವರಿ 1 ರ ರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು, ಹೊಸ ವರ್ಷಾಚರಣೆ ಮಾಡಿದ್ದರು. ಅದೇ ವೇಳೆ ಕಿಡಿಗೇಡಿಗಳ ಗುಂಪೊಂದು ಹಾಸ್ಟೆಲ್ ಗೆ ಎಂಟ್ರಿ ಕೊಟ್ಟಿತ್ತು.

ಆಗ ಆ ಕಿಡಿಗೇಡಿಗಳ ಗುಂಪು ವಿದ್ಯಾರ್ಥಿಯೊಬ್ಬನ ಕುರಿತು ಮಾಹಿತಿ ಕೇಳಿದ್ದಾರೆ. ಆಗ ಅಲ್ಲಿದ್ದ ತಿಮ್ಮನಗೌಡ ಹಾಗೂ ವೆಂಕಟೇಶ್ ಅನ್ನೊ ವಿದ್ಯಾರ್ಥಿಗಳು ಕಿಡಿಗೇಡಿಗಳು ಕೇಳಿದ ಮಾಹಿತಿ ನೀಡಲು ಆಕ್ಷೇಪಿಸಿದ್ದಾರೆ. ಆಗ ಆ ಏಳೆಂಟು ಜನ ಕಿಡಿಗೇಡಿಗಳ ತಂಡ, ತಿಮ್ಮನಗೌಡ ಹಾಗೂ ವೆಂಕಟೇಶ್ ಸೇರಿ ಮೂರ್ನಾಲ್ಕು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ತಿಮ್ಮನಗೌಡ ಹಾಗೂ ವೆಂಕಟೇಶ್ ಗೆ ರಕ್ತಸಿಕ್ತ ಗಾಯಗಳಾಗಿದ್ದು ಹಾಸ್ಟೆಲ್ ನಲ್ಲಿ ಕೆಳಗೆಬಿದ್ದು ಒದ್ದಾಡಿ, ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾರೆ.

ಇದನ್ನೂ ಓದಿ:

PSI Recruitment Scam: ಜೈಲುಪಾಲಾಗಿದ್ದ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು ಮಂಜೂರು ಆಯ್ತು

ವಿದ್ಯಾರ್ಥಿಗಳ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಕಿಡಿಗೇಡಿಗಳ ತಂಡ ಹಾಸ್ಟೆಲ್ ನಿಂದ ಎಸ್ಕೇಪ್ ಆಗಿತ್ತು. ಭೀಕರವಾಗಿ ಗಾಯಗೊಂಡಿದ್ದ ತಿಮ್ಮನಗೌಡ ಹಾಗೂ ವೆಂಕಟೇಶ್ ಇಬ್ಬರನ್ನ ಕೂಡಲೇ ಲಿಂಗಸುಗೂರು ತಾಲ್ಲೂಕು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರಿಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ಕೂಡಲೇ ಅವರನ್ನ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲಾಗಿದೆ. ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಇಬ್ಬರೂ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಲಿಂಗಸುಗೂರು ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು ಐದು ಜನ ಆರೋಪಿಗಳನ್ನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Thu, 5 January 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು