AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಸುಗೂರು: ಹೊಸ ವರ್ಷಾಚರಣೆ ವೇಳೆ ಹಾಸ್ಟೆಲಿಗೆ ನುಗ್ಗಿ ವಿದ್ಯಾರ್ಥಿಗಳ ಥಳಿಸಿದ ಕಿಡಿಗೇಡಿಗಳು, ಐವರು ಅರೆಸ್ಟ್‌

Lingasugur Hostel: ವಿದ್ಯಾರ್ಥಿಗಳ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಕಿಡಿಗೇಡಿಗಳ ತಂಡ ಹಾಸ್ಟೆಲ್ ನಿಂದ ಎಸ್ಕೇಪ್ ಆಗಿತ್ತು. ಲಿಂಗಸುಗೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು ಐದು ಜನ ಆರೋಪಿಗಳನ್ನ ಬಂಧಿಸಿದ್ದಾರೆ.

ಲಿಂಗಸುಗೂರು: ಹೊಸ ವರ್ಷಾಚರಣೆ ವೇಳೆ ಹಾಸ್ಟೆಲಿಗೆ ನುಗ್ಗಿ ವಿದ್ಯಾರ್ಥಿಗಳ ಥಳಿಸಿದ ಕಿಡಿಗೇಡಿಗಳು, ಐವರು ಅರೆಸ್ಟ್‌
ಲಿಂಗಸುಗೂರು: ಹೊಸ ವರ್ಷಾಚರಣೆ ವೇಳೆ ಹಾಸ್ಟೆಲಿಗೆ ನುಗ್ಗಿ ಕಿರಿಕ್ ಮಾಡಿದ ಕಿಡಿಗೇಡಿಗಳು, ಐವರು ಅರೆಸ್ಟ್‌
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 05, 2023 | 2:46 PM

ರಾಯಚೂರು: ಹೊಸ ವರ್ಷದ ದಿನವೇ ಹಾಸ್ಟೆಲ್ (Hostel)ಗೆ ನುಗ್ಗಿ ಕಿಡಿಗೇಡಿಗಳ ಗುಂಪೊಂದು ವಿದ್ಯಾರ್ಥಿಗಳ (students) ಮೇಲೆ ಹಲ್ಲೆ ನಡೆಸಿರೊ ಘಟನೆ ರಾಯಚೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು (Lingasugur Raichur) ಪಟ್ಟಣದ ಹೊರ ವಲಯದ ಸರ್ಕಾರಿ ಹಾಸ್ಟೆಲ್ ನಲ್ಲಿ ನಡೆದಿದೆ. ಜನವರಿ 1 ರ ರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು, ಹೊಸ ವರ್ಷಾಚರಣೆ ಮಾಡಿದ್ದರು. ಅದೇ ವೇಳೆ ಕಿಡಿಗೇಡಿಗಳ ಗುಂಪೊಂದು ಹಾಸ್ಟೆಲ್ ಗೆ ಎಂಟ್ರಿ ಕೊಟ್ಟಿತ್ತು.

ಆಗ ಆ ಕಿಡಿಗೇಡಿಗಳ ಗುಂಪು ವಿದ್ಯಾರ್ಥಿಯೊಬ್ಬನ ಕುರಿತು ಮಾಹಿತಿ ಕೇಳಿದ್ದಾರೆ. ಆಗ ಅಲ್ಲಿದ್ದ ತಿಮ್ಮನಗೌಡ ಹಾಗೂ ವೆಂಕಟೇಶ್ ಅನ್ನೊ ವಿದ್ಯಾರ್ಥಿಗಳು ಕಿಡಿಗೇಡಿಗಳು ಕೇಳಿದ ಮಾಹಿತಿ ನೀಡಲು ಆಕ್ಷೇಪಿಸಿದ್ದಾರೆ. ಆಗ ಆ ಏಳೆಂಟು ಜನ ಕಿಡಿಗೇಡಿಗಳ ತಂಡ, ತಿಮ್ಮನಗೌಡ ಹಾಗೂ ವೆಂಕಟೇಶ್ ಸೇರಿ ಮೂರ್ನಾಲ್ಕು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ತಿಮ್ಮನಗೌಡ ಹಾಗೂ ವೆಂಕಟೇಶ್ ಗೆ ರಕ್ತಸಿಕ್ತ ಗಾಯಗಳಾಗಿದ್ದು ಹಾಸ್ಟೆಲ್ ನಲ್ಲಿ ಕೆಳಗೆಬಿದ್ದು ಒದ್ದಾಡಿ, ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾರೆ.

ಇದನ್ನೂ ಓದಿ:

PSI Recruitment Scam: ಜೈಲುಪಾಲಾಗಿದ್ದ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ಜಾಮೀನು ಮಂಜೂರು ಆಯ್ತು

ವಿದ್ಯಾರ್ಥಿಗಳ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಕಿಡಿಗೇಡಿಗಳ ತಂಡ ಹಾಸ್ಟೆಲ್ ನಿಂದ ಎಸ್ಕೇಪ್ ಆಗಿತ್ತು. ಭೀಕರವಾಗಿ ಗಾಯಗೊಂಡಿದ್ದ ತಿಮ್ಮನಗೌಡ ಹಾಗೂ ವೆಂಕಟೇಶ್ ಇಬ್ಬರನ್ನ ಕೂಡಲೇ ಲಿಂಗಸುಗೂರು ತಾಲ್ಲೂಕು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರಿಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ ಕೂಡಲೇ ಅವರನ್ನ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಲಾಗಿದೆ. ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಇಬ್ಬರೂ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಲಿಂಗಸುಗೂರು ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು ಐದು ಜನ ಆರೋಪಿಗಳನ್ನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Thu, 5 January 23

ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ