AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಸಾವು; ಸುದ್ದಿ ತಿಳಿದು ಮಗು ಹತ್ಯೆಗೈದು, ಪತ್ನಿ ಆತ್ಮಹತ್ಯೆ

ಉಡುಪಿಯಲ್ಲಿ ಅಗ್ನಿಶಾಮಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಗಂಗಾರಾಮ್ ಮಂಗಳೂರಿನಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದರು. ವಿಷಯ ತಿಳಿದು 6 ತಿಂಗಳ ಮಗ ಅಭಿರಾಮ್ ಕೊಂದು, ಬಳಿಕ ಪತ್ನಿ ಶೃತಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಸಾವು; ಸುದ್ದಿ ತಿಳಿದು ಮಗು ಹತ್ಯೆಗೈದು, ಪತ್ನಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 17, 2022 | 5:11 PM

Share

ರಾಯಚೂರು: ರಸ್ತೆ ದಾಟುತ್ತಿದ್ದಾಗ ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿದ್ದ ದುರ್ಘಟನೆ ಮಂಗಳೂರಿನಲ್ಲಿ ಸಂಭವಿಸಿತ್ತು. ಈ ಘಟನೆಯಿಂದ ಪತಿ ಸಾವಿನ ಸುದ್ದಿ ತಿಳಿದು ಮಗು ಹತ್ಯೆಗೈದು, ಪತ್ನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮಂಗಳೂರಿನ ಕುಂಟಿಕಾನ ಬಳಿ ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಗಂಗಾಧರ ಬಿ. ಕಮ್ಮಾರ ಮೃತಪಟ್ಟಿದ್ದರು. ಪತಿ ಸಾವಿನ ಸುದ್ದಿ ಕೇಳಿ 6 ತಿಂಗಳ ಮಗ ಅಭಿರಾಮ್ ಹತ್ಯೆ ಮಾಡಿ ಗಂಗಾಧರ ಪತ್ನಿ ಶ್ರುತಿ (39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಘಟನೆ ನಡೆದಿದೆ.

ಉಡುಪಿಯಲ್ಲಿ ಅಗ್ನಿಶಾಮಕ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಗಂಗಾರಾಮ್ ಮಂಗಳೂರಿನಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದರು. ವಿಷಯ ತಿಳಿದು 6 ತಿಂಗಳ ಮಗ ಅಭಿರಾಮ್ ಕೊಂದು, ಬಳಿಕ ಪತ್ನಿ ಶೃತಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತರ ಅಪಘಾತ ಸುದ್ದಿಗಳು

ರಾಮನಗರ: ಜಾನಪದಲೋಕ ಬಳಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ರಾಮನಗರದಲ್ಲಿ ನಡೆದಿದೆ. ನಾಗರಕಲ್ಲುದೊಡ್ಡಿ ಗ್ರಾಮದ ಶಿವಲಿಂಗಯ್ಯ (50) ಮೃತ ದುರ್ದೈವಿ. ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ಮಿಣಕನಗುರ್ಕಿ ಗ್ರಾಮದ ಮಹೇಶ್ವರಮ್ಮ ಜಾತ್ರೆಗೆ ಬಂದಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಇಲ್ಲಿ ಸಂಭವಿಸಿದೆ. ಚಿಕ್ಕಹನುಮೇನಹಳ್ಳಿಯ ಸಿದ್ದಪ್ಪ (50) ಮೃತ ವ್ಯಕ್ತಿ. ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಿಕ್ಕಬಳ್ಳಾಫುರ: ಬಾವಿಯಲ್ಲಿ ಈಜಾಡಲು ಹೋಗಿ ಯುವಕ ನೀರು ಪಾಲಾದ ದುರ್ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಣಿವೆ ನಾರಾಯಣಪುರದಲ್ಲಿ ಸಂಭವಿಸಿದೆ. ಕೇಶವಾರ ಗ್ರಾಮದ ಶರತ್ ಬಾಬು ಮೃತ ಯುವಕ. ಮೇಲಿಂದ ಬಾವಿಯೊಳಗೆ ಡೈ ಹೊಡೆದಿದ್ದ ಶರತ್, ನಂತರ ನೀರಿನಿಂದ ಮೇಲೆ ಬರಲೆ ಇಲ್ಲ. ವಿಚಾರ ತಿಳಿದು ಯುವಕನಿಗಾಗಿ ಹುಡುಕಾಡಲಾಗಿದೆ. ಬಳಿಕ, ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ಶವ ಮೇಲೆ ಎತ್ತಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಭೇಟಿ ಬಳಿಕ ಮೃದುವಾದ ಸಂತೋಷ್ ಕುಟುಂಬಸ್ಥರು, ಸಂತೋಷ್ ಸಾವು ವಿಧಿಲಿಖಿತ ಎಂದ ಸೋದರ ಪ್ರಶಾಂತ್

ಇದನ್ನೂ ಓದಿ: SSLC ಪರೀಕ್ಷೆಗಾಗಿ ತಾಯಿ ಜೊತೆ ಹೋಗ್ತಿದ್ದಾಗ ಅಪಘಾತ, ಆಂಬುಲೆನ್ಸ್ ನಲ್ಲಿ ವಿದ್ಯಾರ್ಥಿನಿಯ ಕರೆತಂದು ಪರೀಕ್ಷೆ ಬರೆಯಿಸಿದ ಶಾಲೆ!

Published On - 12:12 pm, Sun, 17 April 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ