ರಾಯಚೂರಿನ ಕೃಷ್ಣ ನದಿಯಲ್ಲಿ ವಿಗ್ರಹಗಳು ಪತ್ತೆ: ಅಂತಾರಾಜ್ಯ ವಿವಾದಕ್ಕೆ ಕಾರಣವಾಗುತ್ತಾ ವಿಗ್ರಹಗಳು?

ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿದ್ದವು. ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆಯಾಗಿವೆ. ಆದರೆ ಇದೀಗ ಈ ವಿಗ್ರಹಳು ಅಂತಾರಾಜ್ಯ ವಿವಾದಕ್ಕೆ ಕಾರಣವಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ. ಈ ವಿಗ್ರಹ ತಮಗೆ ಸೇರಿದ್ದು ಎಂದು ಕರ್ನಾಟಕ ಹೇಳಿದರೆ, ಅತ್ತ ತೆಲಂಗಾಣವೂ ಕ್ಯಾತೆ ತೆಗೆದಿದೆ.

ರಾಯಚೂರಿನ ಕೃಷ್ಣ ನದಿಯಲ್ಲಿ ವಿಗ್ರಹಗಳು ಪತ್ತೆ: ಅಂತಾರಾಜ್ಯ ವಿವಾದಕ್ಕೆ ಕಾರಣವಾಗುತ್ತಾ ವಿಗ್ರಹಗಳು?
ಅಂತಾರಾಜ್ಯ ವಿವಾದಕ್ಕೆ ಕಾರಣವಾಗುತ್ತಾ ಕೃಷ್ಣ ನದಿಯಲ್ಲಿ ಪತ್ತೆಯಾದ ವಿಗ್ರಹಗಳು? ಇದು ತಮ್ಮದೆನ್ನುತ್ತಿರುವ ರಾಯಚೂರು; ಅತ್ತ ತೆಲಂಗಾಣದಿಂದಲೂ ಕ್ಯಾತೆ
Edited By: Rakesh Nayak Manchi

Updated on: Feb 06, 2024 | 5:48 PM

ರಾಯಚೂರು, ಫೆ.6: ಜಿಲ್ಲೆ (Raichur) ಮತ್ತು ತೆಲಂಗಾಣ (Telangana) ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿದ್ದಾಗ ಪತ್ತೆಯಾದ ಪುರಾತನ ವಿಗ್ರಹಗಳು (Idols) ಪತ್ತೆಯಾಗಿರುವುದು ಅಂತಾರಾಜ್ಯ ವಿವಾದಕ್ಕೆ ಕಾರಣವಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ. ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ತಮ್ಮದು ಎಂದು ಕರ್ನಾಟಕ ಹೇಳುತ್ತಿದ್ದು, ಅತ್ತ ತೆಲಂಗಾಣವು ಈ ವಿಗ್ರಹಗಳು ತಮಗೆ ಸೇರಿದ್ದು ಎನ್ನುವ ಕ್ಯಾತೆ ತೆಗೆದಿದೆ.

ತೆಲಂಗಾಣ-ರಾಯಚೂರು ಹಗ್ಗ ಜಗ್ಗಾಟದಲ್ಲಿ ವಿಗ್ರಹಗಳು ಅನಾಥವಾಗಿವೆ. ಪತ್ತೆಯಾದ ವಿಗ್ರಹಗಳು ನಮ್ಮದು ಅಂತ ತೆಲಂಗಾಣದ ಕೆಲವರು ಕ್ಯಾತೆ ತೆಗೆದಿದ್ದಾರಂತೆ. ಇತ್ತ ಇದು ರಾಯಚೂರು ತಾಲೂಕಿನ ದೇವಸುಗೂರು ಸೀಮೆಗೆ ಬರತ್ತದೆ, ಹೀಗಾಗಿ ನಮಗೆ ಸೇರಿದ್ದು ಅಂತ ಸ್ಥಳೀಯ ರಾಯಚೂರಿಗರ ವಾದವಾಗಿದೆ. ಜಟಾಪಟಿ ನಡೆಯುತ್ತಿದ್ದರೂ ಅಧಿಕಾರಿಗಳು ವಿಗ್ರಹಗಳ ರಕ್ಷಣೆಗೆ ಮುಂದಾಗದಿರುವ ಆರೋಪ ಕೇಳಿಬಂದಿದೆ.

ಕೃಷ್ಣಾ ನದಿಯಲ್ಲಿ ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆಯಾಗಿದ್ದು, ವಿಗ್ರಹಗಳನ್ನು ಸುರಕ್ಷಿತವಾಗಿ ನದಿಯಿಂದ ಹೊರತೆಗೆಯಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪುರಾತತ್ವ ಇಲಾಖೆಗೆ ಸಿಬ್ಬಂದಿ ವಿಗ್ರಹಗಳನ್ನು ಪರಿಶೀಲಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ. ದೇವಸ್ಥಾನಗಳ ಧ್ವಂಸದ ವೇಳೆ ಮತಾಂದರ ಕೈಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ಅಂದಿನ ಜನರು ವಿಗ್ರಹಗಳನ್ನು ನದಿಯಲ್ಲಿ ಬಿಡಲಾಗಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ರಾಯಚೂರು: ಸೇತುವೆ ಕಾಮಗಾರಿ ವೇಳೆ ನದಿಯಲ್ಲಿ ಕೃಷ್ಣನ ವಿಗ್ರಹ, ಶಿವಲಿಂಗ ಪತ್ತೆ; ಫೋಟೋಗಳಲ್ಲಿ ನೋಡಿ

ಈ ಹಿಂದೆ ಇಲ್ಲಿ ಅನೇಕ ರಾಜ ಮನೆತನಗಳಿದ್ದವು. ರಾಯಚೂರು ಭಾಗದಲ್ಲಿ ಬರೊಬ್ಬರಿ 163 ಯುದ್ಧಗಳು ನಡೆದಿವೆ. ಬಹುಮನಿಸುಲ್ತಾನರು ಹಾಗೂ ಆದಿಲ್ ಶಾಹಿಗಳ ದಾಳಿಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ನದಿಗೆ ಹಾಕಲಾಗಿದೆ. ಈ ವಿಗ್ರಹಗಳ ಬಗ್ಗೆ ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಮಾತನಾಡಿ, ಬಹುಮನಿ ಸುಲ್ತಾನರ ಅವಧಿಯಲ್ಲಿ ಗರ್ಭ ಗುಡಿಯಲ್ಲಿ ಮೂರ್ತಿಗಳನ್ನು ಕೃಷ್ಣಾ ನದಿಗೆ ಬೀಸಾಡಿರಬಹುದು. ಇದೀಗ ಕಾಮಗಾರಿ ವೇಳೆ ವಿಗ್ರಹಗಳು ದೊರೆತಿವೆ.

ಸದ್ಯ ದೊರೆತದ್ದು ಹಸಿರು ಮಿಶ್ರಿತ ಶಿಲೆಯಾಗಿದ್ದು, ಈ ಮಾದರಿಯ ಶಿಲೆಗಳನ್ನು ಕಲ್ಯಾಣ ಚಾಲುಕ್ಯರು ಬಳಸುತ್ತಿದ್ದರು. ಹೀಗಾಗಿ ಈ ವಿಗ್ರಹಗಳು 11ನೇ ಶತಮಾನದ ಕಲ್ಯಾಣ ಚಾಲುಕ್ಯರಿಗೆ ಸೇರಿವೆ ಎಂದು ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಸಂಶೋಧನೆ ನಡೆಸಬೇಕಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us