AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ನಕಲಿ‌ ದಾಖಲೆ ಸೃಷ್ಟಿಸಿ ವೃದ್ಧೆಯ ಭೂಮಿ ಕಬಳಿಕೆ ಆರೋಪ

 ರಾಯಚೂರು ತಾಲೂಕಿನ ಪೋತಗಲ್ ಬಳಿಯ ವೃದ್ಧೆಯ ಆರು ಎಕರೆ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ರಾಯಚೂರು: ನಕಲಿ‌ ದಾಖಲೆ ಸೃಷ್ಟಿಸಿ ವೃದ್ಧೆಯ ಭೂಮಿ ಕಬಳಿಕೆ ಆರೋಪ
ಜಮೀನು ಕಳೆದುಕೊಂಡ ವೃದ್ಧೆ ಮತ್ತು ಮಕ್ಕಳು
TV9 Web
| Edited By: |

Updated on: Oct 06, 2023 | 8:41 AM

Share

ರಾಯಚೂರು ಅ.06: ರಾಯಚೂರು (Raichuru) ತಾಲೂಕಿನ ಪೋತಗಲ್ ಬಳಿಯ ವೃದ್ಧೆಯ ಆರು ಎಕರೆ ಜಮೀನನ್ನು (Land) ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಇದರ ಹಿಂದೆ ತಹಶಿಲ್ದಾರ್ ಕಚೇರಿ ಅಧಿಕಾರಿಗಳು, ಬ್ರೋಕರ್​​ಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಪತಿ ಗೋವಿಂದಪ್ಪ ಮರಣದ ನಂತರ ಪೋತಗಲ್ ಗ್ರಾಮಾಂತರ ಸರ್ವೇ ನಂ 172\3 ರ 6 ಎಕರೆ ಜಮೀನು ಪತ್ನಿ ಸುಶೀಲಮ್ಮ (68) ಅವರ ಹೆಸರಿಗೆ ನೊಂದಣಿಯಾಗಿತ್ತು.

ಕಳೆದ 15 ವರ್ಷಗಳಿಂದ ಸುಶೀಲಮ್ಮ ಅವರ ಹೆಸರಲ್ಲಿದ್ದ ಭೂಮಿ ಇದೀಗ ವೃದ್ಧೆ ಸತ್ತಿದ್ದಾಳೆ ಮತ್ತು ಆಕೆಗೆ ಮಕ್ಕಳು ಇಲ್ಲವೆಂದು ಎಂದು ನಕಲಿ ದಾಖಲೆ ಸೃಷ್ಟಿಸಿ,ಎಸ್.ಕೆ.‌ನಾಗರೆಡ್ಡಿ‌ ಎಂಬುವವರ ಹೆಸರಿಗೆ ನೋಂದಣಿಯಾಗಿದೆ. ಈ ವಿಷಯ ತಿಳಿದ ವೃದ್ಧೆ ಸುಶೀಲಮ್ಮ ಮಕ್ಕಳ ಸಮೇತ ರಾಯಚೂರು ತಹಶಿಲ್ದಾರ್ ಕಚೇರಿಗೆ ಭೇಟಿ ನೀಡಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಭೂಮಿ ಕಬಳಿಕೆ; ದಕ್ಷಿಣ ಕರ್ನಾಟಕದಲ್ಲಿ ಮುಂಚೂಣಿಯಲ್ಲಿದೆ ಚಿಕ್ಕಮಗಳೂರು

“ನಾನು ಬದುಕಿದ್ದೇನೆ, ಮಕ್ಕಳಿದ್ದಾರೆ. ನಾನು ಸತ್ತಿದ್ದೇನೆ, ಮಕ್ಕಳಿಲ್ಲ ಅಂತ ನಕಲಿ ದಾಖಲೆ ಸೃಷ್ಟಿಸಿ ನನ್ನ ಜಮೀನನ್ನು ಕಬಳಿಕೆ ಮಾಡಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಅಂತ ವೃದ್ಧೆ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ