AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ನಕಲಿ‌ ದಾಖಲೆ ಸೃಷ್ಟಿಸಿ ವೃದ್ಧೆಯ ಭೂಮಿ ಕಬಳಿಕೆ ಆರೋಪ

 ರಾಯಚೂರು ತಾಲೂಕಿನ ಪೋತಗಲ್ ಬಳಿಯ ವೃದ್ಧೆಯ ಆರು ಎಕರೆ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ರಾಯಚೂರು: ನಕಲಿ‌ ದಾಖಲೆ ಸೃಷ್ಟಿಸಿ ವೃದ್ಧೆಯ ಭೂಮಿ ಕಬಳಿಕೆ ಆರೋಪ
ಜಮೀನು ಕಳೆದುಕೊಂಡ ವೃದ್ಧೆ ಮತ್ತು ಮಕ್ಕಳು
TV9 Web
| Updated By: ವಿವೇಕ ಬಿರಾದಾರ|

Updated on: Oct 06, 2023 | 8:41 AM

Share

ರಾಯಚೂರು ಅ.06: ರಾಯಚೂರು (Raichuru) ತಾಲೂಕಿನ ಪೋತಗಲ್ ಬಳಿಯ ವೃದ್ಧೆಯ ಆರು ಎಕರೆ ಜಮೀನನ್ನು (Land) ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಇದರ ಹಿಂದೆ ತಹಶಿಲ್ದಾರ್ ಕಚೇರಿ ಅಧಿಕಾರಿಗಳು, ಬ್ರೋಕರ್​​ಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಪತಿ ಗೋವಿಂದಪ್ಪ ಮರಣದ ನಂತರ ಪೋತಗಲ್ ಗ್ರಾಮಾಂತರ ಸರ್ವೇ ನಂ 172\3 ರ 6 ಎಕರೆ ಜಮೀನು ಪತ್ನಿ ಸುಶೀಲಮ್ಮ (68) ಅವರ ಹೆಸರಿಗೆ ನೊಂದಣಿಯಾಗಿತ್ತು.

ಕಳೆದ 15 ವರ್ಷಗಳಿಂದ ಸುಶೀಲಮ್ಮ ಅವರ ಹೆಸರಲ್ಲಿದ್ದ ಭೂಮಿ ಇದೀಗ ವೃದ್ಧೆ ಸತ್ತಿದ್ದಾಳೆ ಮತ್ತು ಆಕೆಗೆ ಮಕ್ಕಳು ಇಲ್ಲವೆಂದು ಎಂದು ನಕಲಿ ದಾಖಲೆ ಸೃಷ್ಟಿಸಿ,ಎಸ್.ಕೆ.‌ನಾಗರೆಡ್ಡಿ‌ ಎಂಬುವವರ ಹೆಸರಿಗೆ ನೋಂದಣಿಯಾಗಿದೆ. ಈ ವಿಷಯ ತಿಳಿದ ವೃದ್ಧೆ ಸುಶೀಲಮ್ಮ ಮಕ್ಕಳ ಸಮೇತ ರಾಯಚೂರು ತಹಶಿಲ್ದಾರ್ ಕಚೇರಿಗೆ ಭೇಟಿ ನೀಡಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಭೂಮಿ ಕಬಳಿಕೆ; ದಕ್ಷಿಣ ಕರ್ನಾಟಕದಲ್ಲಿ ಮುಂಚೂಣಿಯಲ್ಲಿದೆ ಚಿಕ್ಕಮಗಳೂರು

“ನಾನು ಬದುಕಿದ್ದೇನೆ, ಮಕ್ಕಳಿದ್ದಾರೆ. ನಾನು ಸತ್ತಿದ್ದೇನೆ, ಮಕ್ಕಳಿಲ್ಲ ಅಂತ ನಕಲಿ ದಾಖಲೆ ಸೃಷ್ಟಿಸಿ ನನ್ನ ಜಮೀನನ್ನು ಕಬಳಿಕೆ ಮಾಡಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಅಂತ ವೃದ್ಧೆ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!