AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದ ಯುವತಿಗೆ ಬೇರೊಬ್ಬರ ಜೊತೆ ನಿಶ್ಚಿತಾರ್ಥ; ಮನನೊಂದ ಪ್ರಿಯಕರ ಆತ್ಮಹತ್ಯೆ

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅದರಂತೆ ಇದೀಗ 5 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಯಸಿ ಕೈಕೊಟ್ಟ ಹಿನ್ನೆಲೆ ಮನನೊಂದ ಯುವಕ ತನ್ನ ತಾಯಿಯ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರೀತಿಸಿದ ಯುವತಿಗೆ ಬೇರೊಬ್ಬರ ಜೊತೆ ನಿಶ್ಚಿತಾರ್ಥ; ಮನನೊಂದ ಪ್ರಿಯಕರ ಆತ್ಮಹತ್ಯೆ
ಮೃತ ವರುಣ್
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 07, 2024 | 3:59 PM

Share

ರಾಯಚೂರು, ಆ.07: ಪ್ರೇಯಸಿ ಕೈಕೊಟ್ಟ ಹಿನ್ನೆಲೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು(Raichur) ಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್ ಕಾಲೋನಿಯಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ (26)ಆತ್ಮಹತ್ಯೆಗೆ ಶರಣಾದ ಯುವಕ. ಇನ್​ಸ್ಟ್ರಾಗ್ರಾಂ ಮೂಲಕ ಪರಿಚಯವಾಗಿದ್ದ ಯುವತಿ ಜೊತೆ ಮೃತ ವರುಣ್ ಪ್ರೀತಿ ಮಾಡಿದ್ದ. ಬಳಿಕ ಆ ಯುವತಿ ಬೇರೊಬ್ಬರ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಹಿನ್ನೆಲೆ ಮನನೊಂದು ವರುಣ್ ಮನೆಯಲ್ಲಿ ಫ್ಯಾನ್​ಗೆ ನೇಣುಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

5 ವರ್ಷದಿಂದ ಪ್ರೀತಿಸ್ತಿದ್ದವಳು ಕೈಕೊಟ್ಟಿದ್ದಕ್ಕೆ ಮನನೊಂದು ಆತ್ಮಹತ್ಯೆ

ಹೌದು, ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಯುವತಿ ಇನ್​ಸ್ಟಾಗ್ರಾಂನಲ್ಲಿ ಪರಿಚಯವಾಗಿ ನಂತರ ಮುಖಾಮುಖಿ ಭೇಟಿಯಾಗಿದ್ದರು. ಬಳಿಕ ರಾಯಚೂರಿನಲ್ಲಿ ನರ್ಸಿಂಗ್ ಮಾಡುತ್ತಿದ್ದ ಯುವತಿ ಜೊತೆ ಪ್ರೇಮಾಂಕುರವಾಗಿದೆ. ಅದರಂತೆ ಕಳೆದ 5 ವರ್ಷದಿಂದ ವರುಣ್, ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ದಿಢೀರ್​ ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದಕ್ಕೆ ವರುಣ್ ತೀವ್ರ ಬೇಸರಗೊಂಡಿದ್ದ. ಈ ಹಿನ್ನಲೆ ಇಂದು ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ನಂತರ ವರುಣ್ ನೇಣಿಗೆ ಶರಣಾಗಿದ್ದಾನೆ.

ಇದನ್ನೂ ಓದಿ:ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ನಾಲೆಯಲ್ಲಿ ಮುಳುಗಿ ರೈತ ಸಾವು

ಮೈಸೂರು: ತಾಲೂಕಿನ ಕಟ್ಟೆಪುರ ನಾಲೆಯಲ್ಲಿ ಹಸು ತೊಳೆಯುತ್ತಿದ್ದಾಗ ಕಾಲು ಜಾರಿ ಬಿದ್ದು ರೈತನೊಬ್ಬ ಸಾವನ್ನಪ್ಪಿದ್ದಾನೆ. ಸಾಲಿಗ್ರಾಮ ತಾಲೂಕಿನ ಕರ್ತಾಳು ಗ್ರಾಮದ ನಿವಾಸಿ ಪುಟ್ಟೇಗೌಡ (60) ಮೃತ ವ್ಯಕ್ತಿ. ಈ ಕುರಿತು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೆಡ್ಡಿಗೆ ಆಕಸ್ಮಿಕ ಬೆಂಕಿ; ಹೋರಿ, ಕರು ಬೆಂಕಿಗಾಹುತಿ

ಗದಗ: ಶೆಡ್ಡಿಗೆ ಆಕಸ್ಮಿಕ ಬೆಂಕಿ ತಗುಲಿ ಹೋರಿ ಹಾಗೂ ಕರು ಬೆಂಕಿಗಾಹುತಿಯಾದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಗಳೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ(ಮಂಗಳವಾರ) ರಾತ್ರಿ ನಡೆದ ಬೆಂಕಿ ದುರಂತದಲ್ಲಿ ಹೋರಿ, ಕರು ದಾರುಣ ಸಾವನ್ನಪ್ಪಿವೆ. ಎರಡು ಎತ್ತುಗಳು ಗಂಭೀರ ಗಾಯವಾಗಿದ್ದು, ಶೆಡ್​ನಲ್ಲಿಯೇ ನರಳಾಡಿವೆ. ರೈತ ಹನುಮಂತ ಬೇಡರ ಎಂಬುವರಿಗೆ ಸೇರಿದ ದನದ ಕೊಟ್ಟಿಗೆ ಇದಾಗಿದ್ದು, ಕೊಟ್ಟಿಗೆಯಲ್ಲಿ ಸೊಳ್ಳೆಗಳಿಗೆ ಹಾಕಿದ್ದ ಹೊಗೆಯಿಂದ ಈ ದುರಂತ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Wed, 7 August 24

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು