ಪ್ರೀತಿಸಿದ ಯುವತಿಗೆ ಬೇರೊಬ್ಬರ ಜೊತೆ ನಿಶ್ಚಿತಾರ್ಥ; ಮನನೊಂದ ಪ್ರಿಯಕರ ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 07, 2024 | 3:59 PM

ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅದರಂತೆ ಇದೀಗ 5 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಯಸಿ ಕೈಕೊಟ್ಟ ಹಿನ್ನೆಲೆ ಮನನೊಂದ ಯುವಕ ತನ್ನ ತಾಯಿಯ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರೀತಿಸಿದ ಯುವತಿಗೆ ಬೇರೊಬ್ಬರ ಜೊತೆ ನಿಶ್ಚಿತಾರ್ಥ; ಮನನೊಂದ ಪ್ರಿಯಕರ ಆತ್ಮಹತ್ಯೆ
ಮೃತ ವರುಣ್
Follow us on

ರಾಯಚೂರು, ಆ.07: ಪ್ರೇಯಸಿ ಕೈಕೊಟ್ಟ ಹಿನ್ನೆಲೆ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು(Raichur) ಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್ ಕಾಲೋನಿಯಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ (26)ಆತ್ಮಹತ್ಯೆಗೆ ಶರಣಾದ ಯುವಕ. ಇನ್​ಸ್ಟ್ರಾಗ್ರಾಂ ಮೂಲಕ ಪರಿಚಯವಾಗಿದ್ದ ಯುವತಿ ಜೊತೆ ಮೃತ ವರುಣ್ ಪ್ರೀತಿ ಮಾಡಿದ್ದ. ಬಳಿಕ ಆ ಯುವತಿ ಬೇರೊಬ್ಬರ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಹಿನ್ನೆಲೆ ಮನನೊಂದು ವರುಣ್ ಮನೆಯಲ್ಲಿ ಫ್ಯಾನ್​ಗೆ ನೇಣುಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

5 ವರ್ಷದಿಂದ ಪ್ರೀತಿಸ್ತಿದ್ದವಳು ಕೈಕೊಟ್ಟಿದ್ದಕ್ಕೆ ಮನನೊಂದು ಆತ್ಮಹತ್ಯೆ

ಹೌದು, ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಯುವತಿ ಇನ್​ಸ್ಟಾಗ್ರಾಂನಲ್ಲಿ ಪರಿಚಯವಾಗಿ ನಂತರ ಮುಖಾಮುಖಿ ಭೇಟಿಯಾಗಿದ್ದರು. ಬಳಿಕ ರಾಯಚೂರಿನಲ್ಲಿ ನರ್ಸಿಂಗ್ ಮಾಡುತ್ತಿದ್ದ ಯುವತಿ ಜೊತೆ ಪ್ರೇಮಾಂಕುರವಾಗಿದೆ. ಅದರಂತೆ ಕಳೆದ 5 ವರ್ಷದಿಂದ ವರುಣ್, ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ದಿಢೀರ್​ ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದಕ್ಕೆ ವರುಣ್ ತೀವ್ರ ಬೇಸರಗೊಂಡಿದ್ದ. ಈ ಹಿನ್ನಲೆ ಇಂದು ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ನಂತರ ವರುಣ್ ನೇಣಿಗೆ ಶರಣಾಗಿದ್ದಾನೆ.

ಇದನ್ನೂ ಓದಿ:ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ನಾಲೆಯಲ್ಲಿ ಮುಳುಗಿ ರೈತ ಸಾವು

ಮೈಸೂರು: ತಾಲೂಕಿನ ಕಟ್ಟೆಪುರ ನಾಲೆಯಲ್ಲಿ ಹಸು ತೊಳೆಯುತ್ತಿದ್ದಾಗ ಕಾಲು ಜಾರಿ ಬಿದ್ದು ರೈತನೊಬ್ಬ ಸಾವನ್ನಪ್ಪಿದ್ದಾನೆ. ಸಾಲಿಗ್ರಾಮ ತಾಲೂಕಿನ ಕರ್ತಾಳು ಗ್ರಾಮದ ನಿವಾಸಿ ಪುಟ್ಟೇಗೌಡ (60) ಮೃತ ವ್ಯಕ್ತಿ. ಈ ಕುರಿತು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೆಡ್ಡಿಗೆ ಆಕಸ್ಮಿಕ ಬೆಂಕಿ; ಹೋರಿ, ಕರು ಬೆಂಕಿಗಾಹುತಿ

ಗದಗ: ಶೆಡ್ಡಿಗೆ ಆಕಸ್ಮಿಕ ಬೆಂಕಿ ತಗುಲಿ ಹೋರಿ ಹಾಗೂ ಕರು ಬೆಂಕಿಗಾಹುತಿಯಾದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಗಳೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ(ಮಂಗಳವಾರ) ರಾತ್ರಿ ನಡೆದ ಬೆಂಕಿ ದುರಂತದಲ್ಲಿ ಹೋರಿ, ಕರು ದಾರುಣ ಸಾವನ್ನಪ್ಪಿವೆ. ಎರಡು ಎತ್ತುಗಳು ಗಂಭೀರ ಗಾಯವಾಗಿದ್ದು, ಶೆಡ್​ನಲ್ಲಿಯೇ ನರಳಾಡಿವೆ. ರೈತ ಹನುಮಂತ ಬೇಡರ ಎಂಬುವರಿಗೆ ಸೇರಿದ ದನದ ಕೊಟ್ಟಿಗೆ ಇದಾಗಿದ್ದು, ಕೊಟ್ಟಿಗೆಯಲ್ಲಿ ಸೊಳ್ಳೆಗಳಿಗೆ ಹಾಕಿದ್ದ ಹೊಗೆಯಿಂದ ಈ ದುರಂತ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Wed, 7 August 24