AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ

ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಮಂಗಗಳು ಬಿದ್ದು ಸತ್ತಿದ್ದು, ಮೂರು ದಿನಗಳಿಂದ ಗ್ರಾಮಸ್ಥರೆಲ್ಲರೂ ಅದೇ ನೀರನ್ನ ಸೇವಿಸಿ, ಕೆಲವರು ಅಸ್ವಸ್ಥರಾದ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಖಾನಾಪೂರದಲ್ಲಿ ನಡೆದಿದೆ.

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಬಿದ್ದು ಸತ್ತ ಮಂಗಗಳು: 3 ದಿನದಿಂದ ಅದೇ ನೀರು ಸೇವಿಸಿದ ಗ್ರಾಮಸ್ಥರು ಅಸ್ವಸ್ಥ
ಮಂಗಗಳು ಸತ್ತ ನೀರನ್ನು ಕುಡಿದು ಅಸ್ವಸ್ಥರಾದ ಗ್ರಾಮಸ್ಥರು
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 04, 2023 | 9:54 AM

Share

ರಾಯಚೂರು: ಜಿಲ್ಲೆಯ ದೇವದುರ್ಗ(Devadurga) ತಾಲ್ಲೂಕಿನ ಖಾನಾಪೂರದಲ್ಲಿ ಕುಡಿಯುವ ನೀರಿನ ಟ್ಯಾಂಕ್​ನಲ್ಲಿ ಮಂಗಗಳು ಬಿದ್ದು ಸಾವನ್ನಪ್ಪಿದ್ದು, ಅದೇ ನೀರನ್ನು ಕುಡಿದು ಗ್ರಾಮದ ಕೆಲವರು ಅಸ್ವಸ್ಥರಾದ ಘಟನೆ ನಡಿದಿದೆ. ಇನ್ನು ಮಂಗಗಳು ಸತ್ತು ಬಿದ್ದ ಟ್ಯಾಂಕ್​ನಿಂದಲೇ ಇಡೀ ಊರಿಗೆ ನೀರು ಸರಬರಾಜು ಆಗುತ್ತಿತ್ತು. ತೆರೆದ ವಾಟರ್ ಟ್ಯಾಂಕ್​ ಆದ್ದರಿಂದ ಮಂಗಗಳು ನೀರು ಕುಡಿಯಲು ಹೋಗಿ ಬಿದ್ದಿದ್ದಾವೆ. ನಂತರ ಮೇಲೆ ಬರಲಾಗದೇ ಅದೇ ನೀರಲ್ಲೇ ಎರಡು ಮಂಗಗಳು ಮುಳುಗಿ ಸಾವನ್ನಪ್ಪಿದ್ದಾವೆ.

ಮೂರು ದಿನದಿಂದ ಮಂಗಗಳು ಸತ್ತ ನೀರನ್ನ ಕುಡಿದ ಗ್ರಾಮಸ್ಥರು

ಮಂಗಗಳು ಸತ್ತು ಮೂರು ದಿನಗಳ ಕಾಲ ಇದೇ ನೀರನ್ನು ಗ್ರಾಮಸ್ಥರು ಸೇವಿಸಿದ್ದು, ಅವರಲ್ಲಿ ಕೆಲವರು ಅಸ್ವಸ್ಥರಾಗಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ನೀರಿನ ಟ್ಯಾಂಕ್ ಮುಚ್ಚಲು ಯಾವುದೇ ಕ್ರಮವಹಿಸದ ಯಮನಾಳ ಗ್ರಾಮ ಪಂಚಾಯತಿ ಪಿಡಿಓ ಸೇರಿದಂತೆ ಸಿಬ್ಬಂದಿಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ: ವೈದ್ಯರನ್ನು ಕರೆಸಿ ಶಾಲೆಯಲ್ಲೇ ಮಕ್ಕಳಿಗೆ ಚಿಕಿತ್ಸೆ

ಸಾಯಿ ಬಾಬಾ ಮಂದಿರದಲ್ಲಿ ಕಳ್ಳತನ

ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಸಾಯಿಬಾಬಾ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಬೀಗ ಮುರಿದು ಕಾಣಿಕೆ ಹುಂಡಿ, ತಿಜೋರಿ ಒಡೆದ ಖದೀಮರು, ಕಾಣಿಕೆ ಹುಂಡಿ ಹಾಗೂ ತಿಜೋರಿಯಲ್ಲಿದ್ದ ಹಣದೊಂದಿಗೆ‌ ಪರಾರಿಯಾಗಿದ್ದಾರೆ. ಇನ್ನು ಇದು ಎರಡನೇ ಬಾರಿ ಸಾಯಿ ಬಾಬಾ ಮಂದಿರದಲ್ಲಿ ಕಳ್ಳತನವಾಗುತ್ತಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ