AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ರೈತರ ಬೆಳೆ ಪರಿಹಾರದ ಹಣ ಗೋಲ್ಮಾಲ್! 36 ದುರುಳರಿಂದ 75 ಲಕ್ಷಕ್ಕೂ ಅಧಿಕ ಹಣ ವಂಚನೆ

ಅದು ಬಡ ರೈತರ ಪಾಲಿಗೆ ವರವಾಗಬೇಕಿದ್ದ ಯೋಜನೆ. ಆದರೆ, ರೈತರ ಖಾತೆಗೆ ಸೇರಬೇಕಿದ್ದ ಬರ ವಿಮೆಯ ಕೋಟ್ಯಾಂತರ ರೂ. ಹಣ ದುರುಳರ ಪಾಲಾಗಿದೆ. ರೈತರು ಮತ್ತು ಸರ್ಕಾರವನ್ನ ವಂಚಿಸಿರುವ 36 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ರಾಯಚೂರಿನಲ್ಲಿ ರೈತರ ಬೆಳೆ ಪರಿಹಾರದ ಹಣ ಗೋಲ್ಮಾಲ್! 36 ದುರುಳರಿಂದ 75 ಲಕ್ಷಕ್ಕೂ ಅಧಿಕ ಹಣ ವಂಚನೆ
ರಾಯಚೂರಿನಲ್ಲಿ ರೈತರ ಬೆಳೆ ಪರಿಹಾರದ ಹಣ ಗೋಲ್ಮಾಲ್
ಭೀಮೇಶ್​​ ಪೂಜಾರ್
| Edited By: |

Updated on: May 17, 2024 | 10:51 PM

Share

ರಾಯಚೂರು, ಮೇ.17: ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಬೆಳೆ ವಿಮೆ ಪರಿಹಾರದ ಹಣ ದುರ್ಬಳಕೆ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಈಗಾಗಲೇ ರೈತರನ್ನ ವಂಚಿಸಿ ರೈತರ ಪಾಲಾಗಬೇಕಿದ್ದ ಕೋಟ್ಯಾಂತರ ರೂಪಾಯಿ ಬೆಳೆ ವಿಮೆ ಪರಿಹಾರದ ಹಣವನ್ನ ಮಧ್ಯವರ್ತಿಗಳು, ಹಣವಂತರು, ಪ್ರಭಾವಿಗಳು ಭಾಗಿಯಾಗಿ ವಂಚಿಸಿರುವ ಪ್ರಕರಣಗಳು ನಡೆದಿದ್ದು, ತನಿಖೆ ನಡೆಯುತ್ತಿದೆ. ಈ ಮಧ್ಯೆ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಹಾಗೂ ಗಾಣದಾಳ ಗ್ರಾಮಗಳಲ್ಲಿ ವಂಚನೆ ಪ್ರಕರಣ ನಡೆದಿದೆ.

ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿ, ನ್ಯಾಯಕ್ಕಾಗಿ ಈ ಹಿಂದೆ ಪ್ರತಿಭಟನೆ ಮಾಡಿದ್ದ ರೈತರು

ಹೌದು, ಭತ್ತ ಬೆಳೆದಿದ್ದ ರೈತರು ಬೆಳೆ ವಿಮೆ ಮಾಡಿಸಿದ್ದರು. 2021-22 ನೇ ಸಾಲಿನಲ್ಲಿ ಬೇಸಿಗೆ ಹಂಗಾಮಿನ ಬೆಳೆ ವಿಮೆಗಾಗಿ ಸುಮಾರು 273 ರೈತರು ಅರ್ಜಿ ಸಲ್ಲಿಸಿದ್ದರು. ಆ ಪೈಕಿ 1 ಕೋಟಿ 39 ಲಕ್ಷ 57 ಸಾವಿರ ಹಣ 106 ಜನರಿಗೆ ಜಮೆ ಆಗಿತ್ತು. ಆಗಲೇ ಪರಿಹಾರದ ಹಣದಲ್ಲಿ ಗೋಲ್ಮಾಲ್​ ಆಗಿರೋದು ಬೆಳಕಿಗೆ ಬಂದಿತ್ತು. ಪರಿಹಾರ ಕೈ ಸೇರದ ರೈತರು ಈ ಬಗ್ಗೆ ಮಾಹಿತಿ ಕಲೆ ಹಾಕುವುದಕ್ಕೆ ಶುರು ಮಾಡಿದ್ದರು. ಆಗ ಅಸಲಿ ರೈತರಿಗೆ ಪರಿಹಾರವೇ ಬಂದಿರಲಿಲ್ಲ. ಹೀಗಾಗಿ ಕೃಷಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ನ್ಯಾಯಕ್ಕಾಗಿ ಈ ಹಿಂದೆ ರೈತರು ಪ್ರತಿಭಟನೆಯನ್ನೂ ನಡೆಸಿದ್ದರು. ಇದಾದ ಬಳಿಕ ಕೃಷಿ ಅಧಿಕಾರಿಗಳು ಸಂರಕ್ಷಣಾ ಪೋರ್ಟಲ್​​ನಲ್ಲಿ ಪರಿಶೀಲನೆ ನಡೆಸಿದಾಗ ಬೆಚ್ಚಿ ಬೀಳಿಸುವ ಸತ್ಯ ಬಯಲಾಗಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಅಧಿಕಾರಿಗಳ ನಿರ್ಲಕ್ಷ್ಯ; ರೈತರಿಗೆ ಬೆಳೆವಿಮೆ ನೀಡದೇ ದೋಖಾ!

ರೈತರು ನೀಡಿದ ದೂರಿನನ್ವಯ ಕೃಷಿ ಇಲಾಖೆ ಅಧಿಕಾರಿಗಳು 273 ಅರ್ಜಿಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಕಲೆ ಹಾಕಿದ್ದರು. ನಿಯಮದನುಸಾರ ಕಾಮನ್ ಸರ್ವಿಸ್ ಸೆಂಟರ್​ಗಳಲ್ಲಿನ ಅರ್ಜಿ ವೇಳೆ ಪಹಣಿ ಜೊತೆ ರೈತರು ಹೆಸರು ಲಿಂಕ್ ಆಗಿರುವುದು ಹಾಗೂ ಎರಡಕ್ಕೂ ಹೊಂದಾಣಿಕೆ ಆಗುತ್ತಿದೆಯಾ ಎನ್ನುವುದನ್ನ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ, ಅರ್ಜಿ ತಿರಸ್ಕರಿಸುವ ಪ್ರಕ್ರಿಯೆ ಇರತ್ತೆ. ಆದ್ರೆ, ಇಲ್ಲಿ ಕಾಮನ್ ಸರ್ವಿಸ್ ಸೆಂಟರ್​ನಲ್ಲಿ ಅರ್ಜಿ ವೇಳೆಯೇ ಆರೋಪಿಗಳು ಮಸಲತ್ತು ಮಾಡಿ, ಅಸಲಿ ರೈತರ ಹೆಸರಿನಲ್ಲಿನ ಪಹಣಿಯಲ್ಲೇ ವಿಮೆ ಕಂತನ್ನ ಕಟ್ಟಿದ್ದಾರೆ.

36 ದುರುಳರಿಂದ 75 ಲಕ್ಷಕ್ಕೂ ಅಧಿಕ ಹಣ ವಂಚನೆ; ಎಫ್​ಐಆರ್​ ದಾಖಲು

36 ಜನ ಆರೋಪಿಗಳು 116 ರೈತರ ಹೆಸರಿನಲ್ಲಿ ಕಂತು ಕಟ್ಟಿದ್ದಾರೆ. ಬಳಿಕ ವಿಮೆ ಪರಿಹಾರದ ಹಣವನ್ನ ಅಸಲಿ ರೈತರಿಗೆ ಸೇರದ ರೀತಿ ಮಾಡಿ, ತಮ್ಮ ಹೆಸರಿಗೆ ಒಟ್ಟು 75 ಲಕ್ಷ 91 ಸಾವಿರ ಹಣವನ್ನ ವರ್ಗಾಯಿಸಿಕೊಂಡಿರುವ ಸತ್ಯ ಬಯಲಾಗಿದೆ. ಈ ಬಗ್ಗೆ ಕೃಷಿ ಅಧಿಕಾರಿ ಶ್ರೀನಿವಾಸ್ ನೀಡಿರುವ ದೂರಿನ್ವಯ ಜಾಲಹಳ್ಳಿ ಠಾಣೆಯಲ್ಲಿ 36 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ತನಿಖೆ ಚುರುಕುಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ