AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆ ತೊಳೆಯುವ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ರಾಯಚೂರು (Raichur) ತಾಲೂಕಿನ ಬಿ.ಯದ್ಲಾಪೂರ ಗ್ರಾಮದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ಕೊಚ್ಚಿ ಹೋದ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ.

ಬಟ್ಟೆ ತೊಳೆಯುವ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು
ಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು
ಭೀಮೇಶ್​​ ಪೂಜಾರ್
| Edited By: |

Updated on:Oct 13, 2024 | 5:07 PM

Share

ರಾಯಚೂರು, ಅ.13: ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋದ ಘಟನೆ ರಾಯಚೂರು (Raichur) ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಡೆದಿದೆ. ತಾಯಿ ಸುಜಾತಾ (27) ಹಾಗೂ ಮಗಳು ಶ್ರಾವಣಿ (10)ಕಾಲುವೆಯಲ್ಲಿ ಕೊಚ್ಚ ಹೋದವರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ. ಪ್ರತಿ ದಿನದಂತೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುವಾಗ ಈ ದುರ್ಘಟನೆ ನಡೆದಿದೆ. ಈ ಘಟನೆ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ವಿಜಯಪುರ: ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಹೊರ ಭಾಗದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಟ್ರ್ಯಾಕ್ಟರ್ ಚಾಲಕ ತೌಶಿಫ್ ಲಟೋರಿ (24) ಎಂಬ ಯುವಕನ ಶವ ಪತ್ತೆಯಾಗಿದೆ. ಶವದ ಬಳಿ ಬಿಯರ್ ಬಾಟಲ್ ಪತ್ತೆಯಾಗಿದ್ದು, ರಾತ್ರಿ ಗೆಳೆಯರೊಂದಿಗೆ ಪಾರ್ಟಿ ಮಾಡಿ, ಜಮೀನಿನಲ್ಲಿ ಎಳೆದಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗಾರರ ಪತ್ತೆಗೆ ಮೃತ  ಯುವಕನ ಪೋಷಕರು ಮನವಿ ಮಾಡಿದ್ದು, ಸ್ಥಳಕ್ಕೆ ಎಎಸ್ಪಿ ಶಂಕರ ಮಾರಿಹಾಳ ಸೇರಿದಂತೆ  ಶ್ವಾನದಳ ಕೂಡ ಆಗಮಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು

ಮುರ್ಡೇಶ್ವರದಲ್ಲಿ ಬೆಂಗಳೂರು ಮೂಲದ ಯುವಕನ ರಕ್ಷಣೆ

ಉತ್ತರ ಕನ್ನಡ: ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗುತ್ತಿದ್ದ ಬೆಂಗಳೂರು ಮೂಲದ ಯುವಕ ಪುನೀತ್ (20) ಎಂಬಾತನ ರಕ್ಷಣೆ ಮಾಡಲಾಗಿದೆ. ಸಮುದ್ರದಲ್ಲಿ ಆಟ ಆಡುವಾಗ ಅಲೆಗಳ ಅಬ್ಬರಕ್ಕೆ ಯವಕ ಕೊಚ್ಚಿ ಹೋಗುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಯುವಕನ ರಕ್ಷಣೆ ಮಾಡಿದ್ದಾರೆ.

ದಸರಾ ರಜೆ ಹಿನ್ನೆಲೆ ಸದ್ಯ ಕಡಲ ತೀರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದು, ಸಂಜೆ ವೇಳೆಗೆ ಇನ್ನಷ್ಟು ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನಲೆ ಪ್ರವಾಸಿಗರ ರಕ್ಷಣೆಗೆಂದು ಆರು ಜನ ಲೈಫ್ ಗಾರ್ಡ್ ಜೊತೆಗೆ ಪ್ರವಾಸೊದ್ಯಮ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.  ಕೆಲವು ದಿನದ ಹಿಂದೆ ಬೆಂಗಳೂರು ಮೂಲದ ವಿದ್ಯಾರ್ಥಿ ಸಮುದ್ರದಲ್ಲಿ ಕೊಚ್ಚಿ ಹೋದ ಹಿನ್ನೆಲೆ ನಿರ್ಬಂಧ ಮಾಡಲಾಗಿತ್ತು. ನಿನ್ನೆಯಿಂದ  ಜಿಲ್ಲಾಡಳಿತ ಮುರ್ಡೇಶ್ವರದ ಸಮುದ್ರಕ್ಕಿಳಿಯಲು ಅವಕಾಶ ಮಾಡಿಕೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Sun, 13 October 24

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್